- Home
- Entertainment
- Sandalwood
- ಚಂದಾಪುರದಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನ ಕಟ್ಟಿಸಿದ Josh Movie ನಿರ್ಮಾಪಕ ಎಸ್ ವಿ ಬಾಬು!
ಚಂದಾಪುರದಲ್ಲಿ ಶ್ರೀ ವೆಂಕಟೇಶ್ವರ ದೇವಸ್ಥಾನ ಕಟ್ಟಿಸಿದ Josh Movie ನಿರ್ಮಾಪಕ ಎಸ್ ವಿ ಬಾಬು!
ಕನ್ನಡದಲ್ಲಿ ‘ಜೋಶ್’, ‘ಸವಿಸವಿ ನೆನಪು’, ‘ಹನಿಮೂನ್ ಎಕ್ಸ್ ಪ್ರೆಸ್ ಮುಂತಾದ ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ, ಉದ್ಯಮಿ ಎಸ್ ವಿ ಬಾಬು ಅವರು ದೇವಸ್ಥಾನವನ್ನು ಕಟ್ಟಿಸಿದ್ದಾರೆ.

ಚಂದಾಪುರದಲ್ಲಿರುವ ಜಿಪಿಆರ್ ಗ್ರೌಂಡ್ ಲೇಔಟ್ನಲ್ಲಿ ಶ್ರೀ ಮಹಾಗಣಪತಿ, ಶ್ರೀ ವೆಂಕಟೇಶ್ವರ ಮತ್ತು ಶ್ರೀ ಲಕ್ಷ್ಮೀ, ಪದ್ಮಾವತಿ ದೇವಿ ದೇವಸ್ಥಾನವನ್ನು ಕಟ್ಟಿಸಿದ್ದಾರೆ.
ಈ ದೇವಸ್ಥಾನದ ಪ್ರಾಣ ಪ್ರತಿಷ್ಠಪನಾ ಮಹೋತ್ಸವ ಇತ್ತೀಚೆಗೆ ನಡೆದಿದೆ. ಸುಮಾರು ಎಂಟು ಸಾವಿರ ಚದುರಡಿ ವಿಸ್ತೀರ್ಣದಲ್ಲಿ ಈ ಭವ್ಯ ದೇವಸ್ಥಾನದಲ್ಲಿ ಕಟ್ಟಲಾಗಿದೆ.
ಅಯೋಧ್ಯೆಯ ಶ್ರೀ ರಾಮ ಮಂದಿರ ದೇವಸ್ಥಾನದ ರಾಮ್ ಲಲ್ಲಾ ಮೂರ್ತಿಯನ್ನು ಕೆತ್ತಿರುವ ಮೈಸೂರಿನ ಅರುಣ್ ಯೋಗಿರಾಜ್ ಅವರ ತಂಡದವರು, ಈ ದೇವಸ್ಥಾನದ ಮೂರ್ತಿಗಳನ್ನು ಕೆತ್ತಿದ್ದಾರೆ.
ಮೂರು ದಿನಗಳ ಕಾಲ ಬಹಳ ವಿಜೃಂಭಣೆಯಿಂದ ನಡೆದ ದೇವಸ್ಥಾನ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಸಾವಿರಾರು ಜನ ಸಾಕ್ಷಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ ನರಸಿಂಹಲು, ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ಕಾರ್ಯದರ್ಶಿ ಡಿಕೆ ರಾಮಕೃಷ್ಣ, ನಟಿಯರಾದ ಪ್ರಿಯಾ ಹಾಸನ್, ಕಾರುಣ್ಯ ರಾಮ್ ಮುಂತಾದವರು ಹಾಜರಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

