MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • Mandya: ಆಷಾಢ ಏಕಾದಶಿಯಂದು ಪುನೀತ್ ರಾಜ್‌ಕುಮಾರ್ ಫೋಟೋ ಮುಂದೆ ಎಡೆ ಇಟ್ಟು ಅಭಿಮಾನಿಯ ವಿಶೇಷ ಪೂಜೆ

Mandya: ಆಷಾಢ ಏಕಾದಶಿಯಂದು ಪುನೀತ್ ರಾಜ್‌ಕುಮಾರ್ ಫೋಟೋ ಮುಂದೆ ಎಡೆ ಇಟ್ಟು ಅಭಿಮಾನಿಯ ವಿಶೇಷ ಪೂಜೆ

Puneeth Rajkumar: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿ ಬಳಗ ಅವರನ್ನು ಜೀವಂತ ದೇವರಂತೆ ಪೂಜಿಸುತ್ತಿದೆ. ಆಷಾಢ ಏಕಾದಶಿ ದಿನದಂದು ಮಂಡ್ಯ ಜಿಲ್ಲೆಯ ಅಭಿಮಾನಿಯೊಬ್ಬರು ಪುನೀತ್ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

1 Min read
Mahmad Rafik
Published : Jul 07 2025, 08:46 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಜೊತೆಯಲ್ಲಿರದ ಜೀವ ಎಂದೆಂದಿಗೂ ಜೀವಂತ ಎಂಬ ಮಾತು ಅಕ್ಷರಷಃ ಸತ್ಯ. ಚಂದನವನದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿ ಬಳಗ ಕಂಡು ಇಡೀ ಚಿತ್ರಲೋಕ ಆಶ್ಚರ್ಯಚಕಿತವಾಗುತ್ತದೆ. ಸರಳತೆ ಸರದಾರ ಎಂದು ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್‌ಕುಮಾರ್ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದರು.

25
Image Credit : Asianet News

ಆಷಾಢ ಏಕಾದಶಿ ದಿನದಂದು ಮನೆಗಳಲ್ಲಿ ಹಿರಿಯರನ್ನು ಸ್ಮರಿಸಲಾಗುತ್ತದೆ. ಮಂಡ್ಯ ಜಿಲ್ಲೆಯ ಅಭಿಮಾನಿಯೊಬ್ಬರು ಏಕಾದಶಿ ದಿನದಂದು ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದಾರೆ. ಫೋಟೋ ಮುಂದೆ ಎಡೆ ಇರಿಸಿ ಪೂಜೆ ಮಾಡಲಾಗಿದೆ. ಪುನೀತ್ ಜೊತೆಯಲ್ಲಿ ಡಾ.ರಾಜ್‌ಕುಮಾರ್ ಅವರ ಫೋಟೋವನ್ನು ಸಹ ಇರಿಸಲಾಗಿದೆ.

Related Articles

Related image1
ಸರಿಗಮಪ ಟ್ರೋಫಿಯನ್ನು ಪುನೀತ್ ಸಮಾಧಿಗೆ ಅರ್ಪಿಸಿದ ಶಿವಾನಿ ಸ್ವಾಮಿ: ಫೋಟೋಸ್ ವೈರಲ್
Related image2
ಪುನೀತ್ ರಾಜಕುಮಾರ್ ಮಗಳ ಹುಟ್ಟುಹಬ್ಬಕ್ಕೆ ಸ್ಪೆಷಲ್ ವಿಶ್ ಮಾಡಿದ ದೊಡ್ಡಪ್ಪ
35
Image Credit : Asianet News

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಕ್ಷ್ಮಿಸಾಗರದ ನಿವಾಸಿಯಾಗಿರುವ ಪ್ರತಾಪ್ ಎಂಬವರು ಪುನೀತ್ ರಾಜ್‌ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ. ಕುಟುಂಬಸ್ಥರೊಂದಿಗೆ ಪುನೀತ್ ಭಾವಚಿತ್ರಕ್ಕೆ ಸಂಪ್ರದಾಯಬದ್ಧವಾಗಿ ಪೂಜೆ ಸಲ್ಲಿಸಿದ್ದಾರೆ.

45
Image Credit : Asianet News

ಅಪ್ಪು ನಿಧನದ ಬಳಿಕ ಪ್ರತಿವರ್ಷ ನಾವು ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರದ ಮುಂದೆ ಎಡೆ ಇರಿಸಿ ಪೂಜೆ ಸಲ್ಲಿಸುತ್ತೇವೆ ಎಂದು ಪ್ರತಾಪ್ ಹೇಳುತ್ತಾರೆ. ಪ್ರತಾಪ್ ಪೂಜೆ ಸಲ್ಲಿಸಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಪುನೀತ್ ಅವರ ಮೇಲಿನ ಅಭಿಮಾನದಿಂದ ಪ್ರತಿವರ್ಷ ಏಕಾದಶಿ ದಿನ ಎಡೆ ಇಟ್ಟು ಪೂಜೆ ಸಲ್ಲಿಸುತ್ತಾರೆ.

55
Image Credit : Asianet News

ಬಾಲನಟನಾಗಿ ಚಂದನವನಕ್ಕೆ ಕಾಲಿಟ್ಟ ಪುನೀತ್ ರಾಜ್‌ಕುಮಾರ್ ನಾಯಕ ನಟನಾಗಿ 32 ಸಿನಿಮಾಗಳಲ್ಲಿ ನಟಿಸಿದ್ದಾರೆ. 29ನೇ ಅಕ್ಟೋಬರ್ 2021ರಲ್ಲಿ ಪುನೀತ್ ರಾಜ್‌ಕುಮಾರ್ ನಿಧನರಾದರು. ಕರ್ನಾಟಕ ಸರ್ಕಾರವು ನವೆಂಬರ್ 1, 2022 ರಂದು ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನವನ್ನು ನೀಡಿ ಗೌರವಿಸಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮಂಡ್ಯ
ಪುನೀತ್ ರಾಜ್‌ಕುಮಾರ್
ಸ್ಯಾಂಡಲ್‌ವುಡ್

Latest Videos
Recommended Stories
Recommended image1
ದರ್ಶನ್‌ ರಾತ್ರಿ 12 ಗಂಟೆಗೆ ಫೋನ್‌ ಮಾಡಿ ಮಾತಾಡಿದ್ರು: ಕ್ಯಾಮರಾ ಮುಂದೆ ಬಂದ್ರು Vijayalakshmi Darshan
Recommended image2
Untold Love Story: ಸ್ಟಾರ್ ನಟನ ಎರಡನೇ ಪತ್ನಿಯ ಲವ್‌ನಲ್ಲಿ ಬಿದ್ದು ಒದ್ದಾಡಿದ್ದ ರಜನಿಕಾಂತ್!
Recommended image3
Sandalwood Films: ರಿಲೀಸ್'ಗೂ ಮುನ್ನ ಭಾರಿ ನಿರೀಕ್ಷೆ ಹುಟ್ಟಿಸಿ, ಬಳಿಕ ಸೋತ ಕನ್ನಡ ಸಿನಿಮಾಗಳು
Related Stories
Recommended image1
ಸರಿಗಮಪ ಟ್ರೋಫಿಯನ್ನು ಪುನೀತ್ ಸಮಾಧಿಗೆ ಅರ್ಪಿಸಿದ ಶಿವಾನಿ ಸ್ವಾಮಿ: ಫೋಟೋಸ್ ವೈರಲ್
Recommended image2
ಪುನೀತ್ ರಾಜಕುಮಾರ್ ಮಗಳ ಹುಟ್ಟುಹಬ್ಬಕ್ಕೆ ಸ್ಪೆಷಲ್ ವಿಶ್ ಮಾಡಿದ ದೊಡ್ಡಪ್ಪ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved