MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • Mandya: ಆಷಾಢ ಏಕಾದಶಿಯಂದು ಪುನೀತ್ ರಾಜ್‌ಕುಮಾರ್ ಫೋಟೋ ಮುಂದೆ ಎಡೆ ಇಟ್ಟು ಅಭಿಮಾನಿಯ ವಿಶೇಷ ಪೂಜೆ

Mandya: ಆಷಾಢ ಏಕಾದಶಿಯಂದು ಪುನೀತ್ ರಾಜ್‌ಕುಮಾರ್ ಫೋಟೋ ಮುಂದೆ ಎಡೆ ಇಟ್ಟು ಅಭಿಮಾನಿಯ ವಿಶೇಷ ಪೂಜೆ

Puneeth Rajkumar: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿ ಬಳಗ ಅವರನ್ನು ಜೀವಂತ ದೇವರಂತೆ ಪೂಜಿಸುತ್ತಿದೆ. ಆಷಾಢ ಏಕಾದಶಿ ದಿನದಂದು ಮಂಡ್ಯ ಜಿಲ್ಲೆಯ ಅಭಿಮಾನಿಯೊಬ್ಬರು ಪುನೀತ್ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

1 Min read
Mahmad Rafik
Published : Jul 07 2025, 08:46 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಜೊತೆಯಲ್ಲಿರದ ಜೀವ ಎಂದೆಂದಿಗೂ ಜೀವಂತ ಎಂಬ ಮಾತು ಅಕ್ಷರಷಃ ಸತ್ಯ. ಚಂದನವನದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿ ಬಳಗ ಕಂಡು ಇಡೀ ಚಿತ್ರಲೋಕ ಆಶ್ಚರ್ಯಚಕಿತವಾಗುತ್ತದೆ. ಸರಳತೆ ಸರದಾರ ಎಂದು ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್‌ಕುಮಾರ್ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದರು.

25
Image Credit : Asianet News

ಆಷಾಢ ಏಕಾದಶಿ ದಿನದಂದು ಮನೆಗಳಲ್ಲಿ ಹಿರಿಯರನ್ನು ಸ್ಮರಿಸಲಾಗುತ್ತದೆ. ಮಂಡ್ಯ ಜಿಲ್ಲೆಯ ಅಭಿಮಾನಿಯೊಬ್ಬರು ಏಕಾದಶಿ ದಿನದಂದು ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದಾರೆ. ಫೋಟೋ ಮುಂದೆ ಎಡೆ ಇರಿಸಿ ಪೂಜೆ ಮಾಡಲಾಗಿದೆ. ಪುನೀತ್ ಜೊತೆಯಲ್ಲಿ ಡಾ.ರಾಜ್‌ಕುಮಾರ್ ಅವರ ಫೋಟೋವನ್ನು ಸಹ ಇರಿಸಲಾಗಿದೆ.

Related Articles

Related image1
ಸರಿಗಮಪ ಟ್ರೋಫಿಯನ್ನು ಪುನೀತ್ ಸಮಾಧಿಗೆ ಅರ್ಪಿಸಿದ ಶಿವಾನಿ ಸ್ವಾಮಿ: ಫೋಟೋಸ್ ವೈರಲ್
Related image2
ಪುನೀತ್ ರಾಜಕುಮಾರ್ ಮಗಳ ಹುಟ್ಟುಹಬ್ಬಕ್ಕೆ ಸ್ಪೆಷಲ್ ವಿಶ್ ಮಾಡಿದ ದೊಡ್ಡಪ್ಪ
35
Image Credit : Asianet News

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಕ್ಷ್ಮಿಸಾಗರದ ನಿವಾಸಿಯಾಗಿರುವ ಪ್ರತಾಪ್ ಎಂಬವರು ಪುನೀತ್ ರಾಜ್‌ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ. ಕುಟುಂಬಸ್ಥರೊಂದಿಗೆ ಪುನೀತ್ ಭಾವಚಿತ್ರಕ್ಕೆ ಸಂಪ್ರದಾಯಬದ್ಧವಾಗಿ ಪೂಜೆ ಸಲ್ಲಿಸಿದ್ದಾರೆ.

45
Image Credit : Asianet News

ಅಪ್ಪು ನಿಧನದ ಬಳಿಕ ಪ್ರತಿವರ್ಷ ನಾವು ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರದ ಮುಂದೆ ಎಡೆ ಇರಿಸಿ ಪೂಜೆ ಸಲ್ಲಿಸುತ್ತೇವೆ ಎಂದು ಪ್ರತಾಪ್ ಹೇಳುತ್ತಾರೆ. ಪ್ರತಾಪ್ ಪೂಜೆ ಸಲ್ಲಿಸಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಪುನೀತ್ ಅವರ ಮೇಲಿನ ಅಭಿಮಾನದಿಂದ ಪ್ರತಿವರ್ಷ ಏಕಾದಶಿ ದಿನ ಎಡೆ ಇಟ್ಟು ಪೂಜೆ ಸಲ್ಲಿಸುತ್ತಾರೆ.

55
Image Credit : Asianet News

ಬಾಲನಟನಾಗಿ ಚಂದನವನಕ್ಕೆ ಕಾಲಿಟ್ಟ ಪುನೀತ್ ರಾಜ್‌ಕುಮಾರ್ ನಾಯಕ ನಟನಾಗಿ 32 ಸಿನಿಮಾಗಳಲ್ಲಿ ನಟಿಸಿದ್ದಾರೆ. 29ನೇ ಅಕ್ಟೋಬರ್ 2021ರಲ್ಲಿ ಪುನೀತ್ ರಾಜ್‌ಕುಮಾರ್ ನಿಧನರಾದರು. ಕರ್ನಾಟಕ ಸರ್ಕಾರವು ನವೆಂಬರ್ 1, 2022 ರಂದು ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನವನ್ನು ನೀಡಿ ಗೌರವಿಸಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮಂಡ್ಯ
ಪುನೀತ್ ರಾಜ್‌ಕುಮಾರ್
ಸ್ಯಾಂಡಲ್‌ವುಡ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved