MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಹೆಚ್ಚುವರಿ ದೃಶ್ಯಗಳೊಂದಿಗೆ ರಿ-ರಿಲೀಸ್‌ಗೆ ಸಜ್ಜಾದ ಸಂಜು ವೆಡ್ಸ್ ಗೀತಾ 2: ನಾಗಶೇಖರ್‌ ಹೇಳಿದ್ದೇನು?

ಹೆಚ್ಚುವರಿ ದೃಶ್ಯಗಳೊಂದಿಗೆ ರಿ-ರಿಲೀಸ್‌ಗೆ ಸಜ್ಜಾದ ಸಂಜು ವೆಡ್ಸ್ ಗೀತಾ 2: ನಾಗಶೇಖರ್‌ ಹೇಳಿದ್ದೇನು?

ಇಂಥ ಚಿತ್ರಗಳನ್ನು ಮರು ಬಿಡುಗಡೆ ಮಾಡುವುದಕ್ಕೆ ಧೈರ್ಯ ಮಾಡಿರುವುದು ತುಂಬಾ ಒಳ್ಳೆಯ ನಿರ್ಧಾರ. ಒಳ್ಳೆಯ ಚಿತ್ರಗಳು ಪ್ರೇಕ್ಷಕರಿಂದ ದೂರ ಆಗಬಾರದು ಎಂದರು ನಟ ಶಿವರಾಜ್‌ ಕುಮಾರ್‌.

1 Min read
Govindaraj S
Published : Jun 04 2025, 06:14 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : our own

ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಜೋಡಿಯ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದೆ. ಸಿನಿಮಾ ಹೊಸದಾಗಿ ಮರು ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ಮಾಧ್ಯಮಗಳ ಮುಂದೆ ಬಂತು. ಅಂದಹಾಗೆ ಇದೇ ಜೂನ್ 6ಕ್ಕೆ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ.

25
Image Credit : our own

ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದು, ನಟ ಶಿವರಾಜ್‌ ಕುಮಾರ್‌ ಅವರು ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ‘ಇಂಥ ಚಿತ್ರಗಳನ್ನು ಮರು ಬಿಡುಗಡೆ ಮಾಡುವುದಕ್ಕೆ ಧೈರ್ಯ ಮಾಡಿರುವುದು ತುಂಬಾ ಒಳ್ಳೆಯ ನಿರ್ಧಾರ. ಒಳ್ಳೆಯ ಚಿತ್ರಗಳು ಪ್ರೇಕ್ಷಕರಿಂದ ದೂರ ಆಗಬಾರದು.

Related Articles

Related image1
ಸಂಜು ವೆಡ್ಸ್‌ ಗೀತಾ 2 ರಿಲೀಸ್‌ ಮದುವೆ ಮಾಡಿದ್ದಕ್ಕಿಂತ ಕಷ್ಟ ಆಯ್ತು: ನಿರ್ದೇಶಕ ನಾಗಶೇಖರ್‌ ಹೀಗಂದಿದ್ಯಾಕೆ
Related image2
ಸಂಜು ವೆಡ್ಸ್ ಗೀತಾ 2 ಕತೆ ಕೊಟ್ಟಿದ್ದು ಕಿಚ್ಚ ಸುದೀಪ್‌: ನಿರ್ದೇಶಕ ನಾಗಶೇಖರ್‌
35
Image Credit : our own

ಈ ನಿಟ್ಟಿನಲ್ಲಿ ‘ಸಂಜು ವೆಡ್ಸ್ ಗೀತಾ 2’ ಮತ್ತೆ ಪ್ರೇಕ್ಷಕರ ಮುಂದೆ ತರುತ್ತಿರುವ ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಒ‍ಳ್ಳೆಯದಾಗಬೇಕು. ನಾನು ಎರಡು ಹಾಡುಗಳನ್ನು ನೋಡಿದ್ದೇನೆ. ತುಂಬಾ ಚೆನ್ನಾಗಿದೆ. ಈ ಚಿತ್ರ ಗೆಲ್ಲಬೇಕು’ ಎಂದು ಶಿವರಾಜ್‌ ಕುಮಾರ್‌ ಅವರು ಹೇಳಿದರು.

45
Image Credit : social media

ನಿರ್ದೇಶಕ ನಾಗಶೇಖರ್‌, ‘ಈಗ ಮತ್ತೆ ನಿಮ್ಮ ಮುಂದೆ ಬರುತ್ತಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಹೊಸದಾಗಿರುತ್ತದೆ. ಇದು ನಿಜವಾದ ಸಂಜು ಮತ್ತು ಗೀತಾಳ ಪ್ರೇಮ ಕತೆ. ಇಡೀ ಸಿನಿಮಾ ಎಲ್ಲೂ ಬೋರ್ ಆಗಲ್ಲ. 20 ನಿಮಿಷಗಳ ಕತೆಯನ್ನು ಹೊಸದಾಗಿ ಸೇರಿಸಿದ್ದು, ಇದೇ ಚಿತ್ರದ ಜೀವಾಳ. ಪ್ರೇಕ್ಷಕನನ್ನು ಹಿಡಿದಿಡುವ ಗುಣ ಈ ಚಿತ್ರಕ್ಕಿದೆ’ ಎಂದರು.

55
Image Credit : our own

ಶ್ರೀನಗರ ಕಿಟ್ಟಿ, ‘ನಮ್ಮ ಚಿತ್ರವನ್ನು ಪ್ರೇಕ್ಷಕರು ನೋಡುತ್ತಾರೆಂಬ ನಂಬಿಕೆ ಇದೆ. ಆ ನಂಬಿಕೆಯಿಂದಲೇ ನಿಮ್ಮ ಮುಂದೆ ಮತ್ತೆ ಬರುತ್ತಿದ್ದೇವೆ’ ಎಂದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪ್ರವೀಣ್ ಕುಮಾರ್‌, ಚಿತ್ರದ ನಿರ್ಮಾಪಕ ಛಲವಾದಿ ಕುಮಾರ್, ಕೆ ಪಿ ಶ್ರೀಕಾಂತ್‌, ನಿರ್ದೇಶಕ ಎಸ್ ಮಹೇಂದರ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ರಚಿತಾ ರಾಮ್
ಸ್ಯಾಂಡಲ್‌ವುಡ್
ಸಿನಿಮಾ
ಮನರಂಜನಾ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved