'ಎ ಫಾರ್ ಆನಂದ್': ಪಾರ್ವತಮ್ಮ ರಾಜ್ಕುಮಾರ್ ಟೈಟಲ್ನ ಹೊಸ ಕಥೆ ಮಕ್ಕಳ ಕಲ್ಯಾಣಕ್ಕೆ
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಾಯಕನಾಗಿರುವ ‘ಎ ಫಾರ್ ಆನಂದ್’ ಚಿತ್ರದ ಶೂಟಿಂಗ್ ಶುರು. ಶ್ರೀನಿ ನಿರ್ದೇಶನದ ಈ ಚಿತ್ರ ಗೀತಾ ಶಿವರಾಜ್ಕುಮಾರ್ರಿಂದ ನಿರ್ಮಾಣ. ಮಕ್ಕಳನ್ನು ಯಾವ ರೀತಿ ಓದಿಸಬೇಕು, ಅವರನ್ನು ಹೇಗೆ ದಾರಿಗೆ ತರಬೇಕು ಎನ್ನುವುದೇ ಚಿತ್ರದ ಕತೆ. ಇದು ಕಂಪ್ಲೀಟ್ ಬೇರೆ ರೀತಿಯ ಸಿನಿಮಾ ಎಂದಿದೆ ಚಿತ್ರ ತಂಡ.

ಶಿವರಾಜ್ಕುಮಾರ್ ನಾಯಕನಾಗಿರುವ ‘ಎ ಫಾರ್ ಆನಂದ್’ ಚಿತ್ರಕ್ಕೆ ಮುಹೂರ್ತ ಆಗಿದೆ. ಶ್ರೀನಿ ನಿರ್ದೇಶನದ ಈ ಚಿತ್ರವನ್ನು ಗೀತಾ ಶಿವರಾಜ್ಕುಮಾರ್ ನಿರ್ಮಿಸುತ್ತಿದ್ದಾರೆ.
ಶಿವಣ್ಣ, ‘ಶ್ರೀನಿ ಜತೆಗೆ ಇದು ಎರಡನೇ ಸಿನಿಮಾ. ತುಂಬಾ ದಿನಗಳಿಂದ ಈ ಕತೆ ಮಾಡಬೇಕು ಅಂತ ಚರ್ಚೆ ನಡೆಯುತ್ತಿತ್ತು. ಆದರೆ, ಕತೆ ಕೇಳುವಾಗಲೆಲ್ಲ ಏನೋ ಕೊರತೆ ಕಾಣುತ್ತಿತ್ತು. ಕೊನೆಗೂ ಕತೆಗೆ ಒಂದು ಪೂರ್ಣ ಪ್ರಮಾಣದ ರೂಪ ಬಂದಿದೆ. ಹೀಗಾಗಿ ಚಿತ್ರಕ್ಕೆ ಚಾಲನೆ ಕೊಟ್ಟಿದ್ದೇವೆ.
ಇದು ತುಂಬಾ ಅಟ್ಯಾಚ್ಮೆಂಟ್ ಇರುವ ಕತೆ. ಕತೆಯ ಕೇಂದ್ರಬಿಂದುಗಳು ಮಕ್ಕಳೇ ಆಗಿದ್ದಾರೆ. ಮಕ್ಕಳನ್ನು ಯಾವ ರೀತಿ ಓದಿಸಬೇಕು, ಅವರನ್ನು ಹೇಗೆ ದಾರಿಗೆ ತರಬೇಕು ಎನ್ನುವುದೇ ಈ ಚಿತ್ರದ ಕತೆ. ನಾನು ಶಿಕ್ಷಕನ ಪಾತ್ರ ಮಾಡುತ್ತಿದ್ದೇನೆ’ ಎಂದರು.
ಶಿವಣ್ಣನ ಮೊದಲ ಸಿನಿಮಾದ ಹೆಸರು 'ಆನಂದ್'. ಅದನ್ನು ನಿರ್ಮಾಣ ಮಾಡಿದವರು ಮತ್ತು ಆ ಟೈಟಲ್ ನೀಡಿದವರು ಪಾರ್ವತಮ್ಮ ರಾಜ್ಕುಮಾರ್. "ಆನಂದ್ ಅಂತ ನಮ್ಮ ತಾಯಿ ಹೆಸರಿಟ್ಟಿದ್ದು, ಈ ಆನಂದ್ ಮಕ್ಕಳ ಮುಖದಲ್ಲಿ ಆನಂದ ತರುತ್ತಾನೆ" ಎನ್ನುತ್ತಾರೆ ಶಿವಣ್ಣ.
ಶ್ರೀನಿ, ‘ಇದು ಕಂಪ್ಲೀಟ್ ಬೇರೆ ರೀತಿಯ ಸಿನಿಮಾ. ಪಕ್ಕಾ ಕೌಟುಂಬಿಕ ಮನರಂಜನೆಯ ಕತೆಯನ್ನು ಚಿತ್ರದಲ್ಲಿ ಹೇಳುತ್ತಿದ್ದೇವೆ’ ಎಂದರು. ವಾಸುಕಿ ವೈಭವ್ ಸಂಗೀತ, ಮಹೇನ್ ಸಿಂಹ ಕ್ಯಾಮೆರಾ, ದೀಪು ಎಸ್ ಕುಮಾರ್ ಸಂಕಲನ, ಪ್ರಸನ್ನ ವಿ ಎಂ ಸಂಭಾಷಣೆ ಇದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

