MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • 'ಎ ಫಾರ್ ಆನಂದ್': ಪಾರ್ವತಮ್ಮ ರಾಜ್‌ಕುಮಾರ್ ಟೈಟಲ್‌ನ ಹೊಸ ಕಥೆ ಮಕ್ಕಳ ಕಲ್ಯಾಣಕ್ಕೆ

'ಎ ಫಾರ್ ಆನಂದ್': ಪಾರ್ವತಮ್ಮ ರಾಜ್‌ಕುಮಾರ್ ಟೈಟಲ್‌ನ ಹೊಸ ಕಥೆ ಮಕ್ಕಳ ಕಲ್ಯಾಣಕ್ಕೆ

ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ನಾಯಕನಾಗಿರುವ ‘ಎ ಫಾರ್‌ ಆನಂದ್‌’ ಚಿತ್ರದ ಶೂಟಿಂಗ್ ಶುರು. ಶ್ರೀನಿ ನಿರ್ದೇಶನದ ಈ ಚಿತ್ರ ಗೀತಾ ಶಿವರಾಜ್‌ಕುಮಾರ್‌ರಿಂದ ನಿರ್ಮಾಣ. ಮಕ್ಕಳನ್ನು ಯಾವ ರೀತಿ ಓದಿಸಬೇಕು, ಅವರನ್ನು ಹೇಗೆ ದಾರಿಗೆ ತರಬೇಕು ಎನ್ನುವುದೇ ಚಿತ್ರದ ಕತೆ. ಇದು ಕಂಪ್ಲೀಟ್‌ ಬೇರೆ ರೀತಿಯ ಸಿನಿಮಾ ಎಂದಿದೆ ಚಿತ್ರ ತಂಡ.

1 Min read
Govindaraj S
Published : May 03 2025, 06:39 PM IST| Updated : May 03 2025, 06:55 PM IST
Share this Photo Gallery
  • FB
  • TW
  • Linkdin
  • Whatsapp
15

ಶಿವರಾಜ್‌ಕುಮಾರ್‌ ನಾಯಕನಾಗಿರುವ ‘ಎ ಫಾರ್‌ ಆನಂದ್‌’ ಚಿತ್ರಕ್ಕೆ ಮುಹೂರ್ತ ಆಗಿದೆ. ಶ್ರೀನಿ ನಿರ್ದೇಶನದ ಈ ಚಿತ್ರವನ್ನು ಗೀತಾ ಶಿವರಾಜ್‌ಕುಮಾರ್‌ ನಿರ್ಮಿಸುತ್ತಿದ್ದಾರೆ.

25

ಶಿವಣ್ಣ, ‘ಶ್ರೀನಿ ಜತೆಗೆ ಇದು ಎರಡನೇ ಸಿನಿಮಾ. ತುಂಬಾ ದಿನಗಳಿಂದ ಈ ಕತೆ ಮಾಡಬೇಕು ಅಂತ ಚರ್ಚೆ ನಡೆಯುತ್ತಿತ್ತು. ಆದರೆ, ಕತೆ ಕೇಳುವಾಗಲೆಲ್ಲ ಏನೋ ಕೊರತೆ ಕಾಣುತ್ತಿತ್ತು. ಕೊನೆಗೂ ಕತೆಗೆ ಒಂದು ಪೂರ್ಣ ಪ್ರಮಾಣದ ರೂಪ ಬಂದಿದೆ. ಹೀಗಾಗಿ ಚಿತ್ರಕ್ಕೆ ಚಾಲನೆ ಕೊಟ್ಟಿದ್ದೇವೆ. 

Related Articles

Related image1
Goodbye Chennai: ಸಿನಿಮಾವನ್ನು ಕ್ಯೂಬ್‌ಗೆ ಅಪ್‌ಲೋಡ್‌ ಮಾಡಲು ಇನ್ನು ಚೆನ್ನೈಗೆ ಹೋಗಬೇಕಿಲ್ಲ: ಶಿವಣ್ಣ
Related image2
ಶಿವಣ್ಣ ಘೋಷಿಸಿದ 'ಸೋಲ್‌ ಸ್ಟಾರ್‌' ಬಿರುದು ನಿರಾಕರಿಸಿದ ರಾಜ್‌ ಬಿ ಶೆಟ್ಟಿ: ಕಾರಣವೇನು?
35

ಇದು ತುಂಬಾ ಅಟ್ಯಾಚ್‌ಮೆಂಟ್‌ ಇರುವ ಕತೆ. ಕತೆಯ ಕೇಂದ್ರಬಿಂದುಗಳು ಮಕ್ಕಳೇ ಆಗಿದ್ದಾರೆ. ಮಕ್ಕಳನ್ನು ಯಾವ ರೀತಿ ಓದಿಸಬೇಕು, ಅವರನ್ನು ಹೇಗೆ ದಾರಿಗೆ ತರಬೇಕು ಎನ್ನುವುದೇ ಈ ಚಿತ್ರದ ಕತೆ. ನಾನು ಶಿಕ್ಷಕನ ಪಾತ್ರ ಮಾಡುತ್ತಿದ್ದೇನೆ’ ಎಂದರು.

45

ಶಿವಣ್ಣನ ಮೊದಲ ಸಿನಿಮಾದ ಹೆಸರು 'ಆನಂದ್'. ಅದನ್ನು ನಿರ್ಮಾಣ ಮಾಡಿದವರು ಮತ್ತು ಆ ಟೈಟಲ್ ನೀಡಿದವರು ಪಾರ್ವತಮ್ಮ ರಾಜ್‌ಕುಮಾರ್. "ಆನಂದ್‌ ಅಂತ ನಮ್ಮ ತಾಯಿ ಹೆಸರಿಟ್ಟಿದ್ದು, ಈ ಆನಂದ್‌ ಮಕ್ಕಳ ಮುಖದಲ್ಲಿ ಆನಂದ ತರುತ್ತಾನೆ" ಎನ್ನುತ್ತಾರೆ ಶಿವಣ್ಣ.

55

ಶ್ರೀನಿ, ‘ಇದು ಕಂಪ್ಲೀಟ್‌ ಬೇರೆ ರೀತಿಯ ಸಿನಿಮಾ. ಪಕ್ಕಾ ಕೌಟುಂಬಿಕ ಮನರಂಜನೆಯ ಕತೆಯನ್ನು ಚಿತ್ರದಲ್ಲಿ ಹೇಳುತ್ತಿದ್ದೇವೆ’ ಎಂದರು. ವಾಸುಕಿ ವೈಭವ್‌ ಸಂಗೀತ, ಮಹೇನ್‌ ಸಿಂಹ ಕ್ಯಾಮೆರಾ, ದೀಪು ಎಸ್‌ ಕುಮಾರ್‌ ಸಂಕಲನ, ಪ್ರಸನ್ನ ವಿ ಎಂ ಸಂಭಾಷಣೆ ಇದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಡಾ. ಶಿವರಾಜಕುಮಾರ್
ಸ್ಯಾಂಡಲ್‌ವುಡ್
ಕನ್ನಡ ಚಲನಚಿತ್ರಗಳು
ಮನರಂಜನಾ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved