MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್

The Devil Movie: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಸದ್ಯ ನಟ ದರ್ಶನ್‌ ತೂಗುದೀಪ ಜೈಲಿನಲ್ಲಿದ್ದಾರೆ. ಹೀಗಿರುವಾಗ ಇವರ ‘ದಿ ಡೆವಿಲ್‌ʼ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಡಿಸೆಂಬರ್‌ 11ರಂದು ಈ ಚಿತ್ರ ರಿಲೀಸ್‌ ಆಗುತ್ತಿದ್ದು, ಜೈಲಿನಿಂದಲೇ ದರ್ಶನ್‌ ಫ್ಯಾನ್ಸ್‌ಗೆ ಸಂದೇಶ ಕಳಿಸಿದ್ದಾರೆ.

1 Min read
Padmashree Bhat
Published : Dec 10 2025, 09:11 AM IST
Share this Photo Gallery
  • FB
  • TW
  • Linkdin
  • Whatsapp
16
ಸಿನಿಮಾ ರಿಲೀಸ್‌ಗೆ ಕೆಲವೇ ಗಂಟೆ ಬಾಕಿ
Image Credit : darshan thoogudeepa instagram

ಸಿನಿಮಾ ರಿಲೀಸ್‌ಗೆ ಕೆಲವೇ ಗಂಟೆ ಬಾಕಿ

ನಟ ದರ್ಶನ್‌ ತೂಗುದೀಪ ಅಭಿನಯದ ‘ದಿ ಡೆವಿಲ್’‌ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ದರ್ಶನ್‌ ಅನುಪಸ್ಥಿತಿಯಲ್ಲಿ ಸಿನಿಮಾ ರಿಲೀಸ್‌ ಆಗಲಿದೆ. ಈಗ ಜೈಲಿನಲ್ಲಿದ್ದುಕೊಂಡೇ ದರ್ಶನ್‌ ಅವರು ಅಭಿಮಾನಿಗಳಿಗೆ ಸಂದೇಶ ಕಳಿಸಿದ್ದಾರೆ.

26
ಯಾರು ಏನು ಹೇಳಿದರೂ ಚಿಂತಿಸಬೇಡಿ
Image Credit : X

ಯಾರು ಏನು ಹೇಳಿದರೂ ಚಿಂತಿಸಬೇಡಿ

ದರ್ಶನ್‌ ಅವರು “ನನ್ನ ಹೃದಯದಿಂದ ಈ ಸಂದೇಶ ನಿಮಗೆ, ವಿಜಯಲಕ್ಷ್ಮೀ ನಿಮ್ಮೆಲ್ಲರಿಗೂ ತಲುಪಿಸುತ್ತಾಳೆ. ನಿಮ್ಮೆಲ್ಲರ ಪ್ರೀತಿ, ಕಾಳಜಿ, ಬೆಂಬಲ, ನನ್ನ ಸಿನಿಮಾ ಪ್ರಚಾರ ಬಗ್ಗೆ ಪ್ರತಿ ಬಾರಿಯೂ ವಿಜಯಲಕ್ಷ್ಮೀ ನನಗೆ ತಿಳಿಸುತ್ತಿದ್ದಾರೆ. ದೂರ ಇದ್ರು..ಪ್ರತಿ ಕ್ಷಣವೂ ನಿಮ್ಮ ಉಪಸ್ಥಿತಿಯನ್ನು ನಾನು ಅನುಭವಿಸುತ್ತೇನೆ. ನಾನು ನಿಮಗೆ ಹೇಳಲು ಬಯಸುವುದೇನೆಂದರೆ ದಯವಿಟ್ಟು ಯಾರು ಏನು ಹೇಳಿದರೂ ಚಿಂತಿಸಬೇಡಿ" ಎಂದು ಹೇಳಿದ್ದಾರೆ.

Related Articles

Related image1
Darshan Fans: ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ: 6 ಮಂದಿ ಆರೋಪಿಗಳಿಗೆ ಬೇಲ್‌
Related image2
Vijayalakshmi Darshan: ಜೈಲಿನಲ್ಲಿ ನಟ ದರ್ಶನ್; ಇತ್ತ ಕರ್ತವ್ಯ ಮರೆಯದ ಪತ್ನಿ, 'ತೂಗುದೀಪ' ಸೊಸೆ ವಿಜಯಲಕ್ಷ್ಮೀ!
36
ನನ್ನ ದೊಡ್ಡ ಶಕ್ತಿ ನೀವೇ
Image Credit : Instagram

ನನ್ನ ದೊಡ್ಡ ಶಕ್ತಿ ನೀವೇ

ಯಾವುದೇ ವದಂತಿ, ನೆಗೆಟಿವಿಟಿ ನಿಮ್ಮ ಹೃದಯವನ್ನು ಅಲುಗಾಡಿಸಲು ಬಿಡಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ, ಇಂದು ಎಂದಿಗಿಂತಲೂ ಹೆಚ್ಚಾಗಿ, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ. ನನ್ನ ಜೀವನದ ಈ ಹಂತದಲ್ಲಿ, ನನ್ನ ದೊಡ್ಡ ಶಕ್ತಿ ನೀವೇ ಎಂದಿದ್ದಾರೆ.

46
ಡೆವಿಲ್‌ ಸಿನಿಮಾ ಕಡೆಗೆ ಗಮನ ಹರಿಸಬೇಕು
Image Credit : Instagram

ಡೆವಿಲ್‌ ಸಿನಿಮಾ ಕಡೆಗೆ ಗಮನ ಹರಿಸಬೇಕು

ಈ ಸಮಯದಲ್ಲಿ ನಮ್ಮ ಡೆವಿಲ್‌ ಸಿನಿಮಾ ಕಡೆಗೆ ಗಮನ ಹರಿಸಬೇಕು ಎಂದು ನಾನು ಬಯಸುತ್ತಿದ್ದೇನೆ. ನನಗೆ ತೋರಿಸಿದ ಅದೇ ಪ್ರೀತಿಯಿಂದ ನೀವು ಡೇವಿಲ್ ಸಿನಿಮಾ ಮೇಲೆ ತೋರಿಸಿ. ನನ್ನ ಅನುಪಸ್ಥಿತಿಯಲ್ಲಿಯೂ ಸಹ, ನೀವು ಪ್ರತಿಯೊಂದು ಪ್ರಶ್ನೆಗೆ, ಅನುಮಾನಕ್ಕೆ, ಧ್ವನಿಗೆ ಉತ್ತರಿಸಬೇಕೆಂದು ನಾನು ಬಯಸುತ್ತೇನೆ. ಪದಗಳಿಂದಲ್ಲ, ಆದರೆ ಈ ಚಿತ್ರದ ಅದ್ಭುತ ಯಶಸ್ಸಿನೊಂದಿಗೆ.

56
ನನ್ನ ಸುತ್ತಲೂ ಗೋಡೆಯಂತೆ ನಿಂತಿದ್ದೀರಾ
Image Credit : Asianet News

ನನ್ನ ಸುತ್ತಲೂ ಗೋಡೆಯಂತೆ ನಿಂತಿದ್ದೀರಾ

ನನ್ನ ಸಿನಿಮಾಗೆ ನೀವು ಮಾಡ್ತಿರೋ ಪ್ರಚಾರ.. ಎಫರ್ಟ್.. ನಿಮ್ಮ ಏಕತೆ... ಬಗ್ಗೆ ಕೇಳಿದಾಗ ನನಗೆ ಹೆಮ್ಮೆ ಮತ್ತು ಭಾವುಕನಗುತ್ತೇನೆ. ನಿಮ್ಮನ್ನೆಲ್ಲ ಮತ್ತೆ ಭೇಟಿಯಾಗುವ ದಿನಕ್ಕಾಗಿ ಕಾಯುತ್ತಿರೋದೇ ಖುಷಿ ಕೊಡ್ತಿದೆ. ನನ್ನ ಸುತ್ತಲೂ ಗೋಡೆಯಂತೆ ನಿಂತಿದ್ದಕ್ಕಾಗಿ ಧನ್ಯವಾದಗಳು. ನೀವು ನನ್ನನ್ನು ಎಷ್ಟು ನಂಬುತ್ತಿರೋ ನಾನು ನನ್ನ ಸೆಲೆಬ್ರಿಟಿಗಳನ್ನ ಅಷ್ಟೇ ನಂಬುತ್ತಿನಿ

66
ಕಾಲವೇ ಸತ್ಯ ಹೇಳುತ್ತದೆ
Image Credit : FB

ಕಾಲವೇ ಸತ್ಯ ಹೇಳುತ್ತದೆ

ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಎಲ್ಲವನ್ನೂ ಉತ್ತರಿಸುತ್ತದೆ. ಅಲ್ಲಿವರೆಗೂ ತಲೆಯನ್ನೆತ್ತಿ, ಹೃದಯ ಬಲವಾಗಿರಲಿ, ಪ್ರೀತಿ ಅಚಲವಾಗಿರಲಿ. ನಿಮ್ಮ ದಾಸ ದರ್ಶನ ಎಂದು ಹೇಳಿರೋದನ್ನು ವಿಜಯಲಕ್ಷ್ಮೀ ಅವರು ಹಂಚಿಕೊಂಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ದರ್ಶನ್ ತೂಗುದೀಪ
ಸ್ಯಾಂಡಲ್‌ವುಡ್
ಸ್ಯಾಂಡಲ್ವುಡ್ ಫಿಲ್ಮ್

Latest Videos
Recommended Stories
Recommended image1
ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
Recommended image2
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್
Recommended image3
ರಿಷಬ್‌ ಶೆಟ್ಟಿ, ವಿಜಯ್ ಕಿರಗಂದೂರು ವ್ಯಾಪಾರಿಗಳು, ದೈವಾರಾಧನೆಯನ್ನ ವ್ಯಾಪಾರಕ್ಕೆ ಹಾಕಿದ್ದಾರೆ: ದೈವಾರಾಧಕ ಬೇಸರ
Related Stories
Recommended image1
Darshan Fans: ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ: 6 ಮಂದಿ ಆರೋಪಿಗಳಿಗೆ ಬೇಲ್‌
Recommended image2
Vijayalakshmi Darshan: ಜೈಲಿನಲ್ಲಿ ನಟ ದರ್ಶನ್; ಇತ್ತ ಕರ್ತವ್ಯ ಮರೆಯದ ಪತ್ನಿ, 'ತೂಗುದೀಪ' ಸೊಸೆ ವಿಜಯಲಕ್ಷ್ಮೀ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved