ದರ್ಶನ್-ವಿಜಯಲಕ್ಷ್ಮೀ ಮದುವೆಯಾದ ಜಾಗದಲ್ಲೇ ಸಪ್ತಪದಿ ತುಳಿಯಲಿರುವ ಉಗ್ರಂ ಮಂಜು ಜೋಡಿ!
ಬಿಗ್ ಬಾಸ್ ಸ್ಪರ್ಧಿ ಹಾಗೂ ನಟ ಉಗ್ರಂ ಮಂಜು, ಟ್ರಾನ್ಸ್ಪ್ಲಾಂಟ್ ಕೋ-ಆರ್ಡಿನೇಟರ್ ಆಗಿರುವ ಸಾಯಿ ಸಂಧ್ಯಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ವಿವಾಹಕ್ಕೂ ಮೊದಲು, ಅವರ ಮನೆಯಲ್ಲಿ ಅರಿಶಿಣ ಶಾಸ್ತ್ರ ಸರಳವಾಗಿ ನೆರವೇರಿದೆ.

ನಟ ಹಾಗೂ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು (Ugram Manju) ಮದುವೆಗೆ ರೆಡಿ ಆಗಿದ್ದಾರೆ. ಸಂಧ್ಯಾ (Sandhya) ಜೊತೆ 23 ಜನವರಿ 2026ರಂದು ಸಪ್ತಪದಿ ತುಳಿಯಲಿದ್ದಾರೆ. ಈ ದಂಪತಿ ಹಳದಿ ಶಾಸ್ತ್ರ ನೆರವೇರಿಸಿಕೊಂಡಿದ್ದಾರೆ. ಶುಕ್ರವಾರ (ಜನವರಿ 23) ಧರ್ಮಸ್ಥಳದಲ್ಲಿ (Dharmasthala) ಈ ಜೋಡಿ ಮದುವೆ ಆಗುತ್ತಿದೆ. ಮಂಜುನಾಥನ ಸಾನಿಧ್ಯದಲ್ಲಿ ಇವರು ವಿವಾಹವಾಗಲು ನಿರ್ಧರಿಸಿದ್ದಾರೆ.
ವಿಶೇಷ ಎಂದರೆ, ಕನ್ನಡದ ಸ್ಟಾರ್ ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಕೂಡ ಧರ್ಮಸ್ಥಳದಲ್ಲಿಯೇ ಮದುವೆ ಆಗಿದ್ದರು. ಮಂಜು ಅವರ ವಿವಾಹ ಕೂಡ ಸಿಂಪಲ್ ಆಗಿ ನಡೆಯಲಿದೆ. ಕೇವಲ ಆಪ್ತರು ಮಾತ್ರ ಈ ಮದುವೆಗೆ ಹಾಜರಿ ಆಗಿ ಹರಸಲಿದ್ದಾರೆ ಎನ್ನಲಾಗಿದೆ.
ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಹಾಗೂ ನಟ ಉಗ್ರಂ ಮಂಜು, ಟ್ರಾನ್ಸ್ಪ್ಲಾಂಟ್ ಕೋ-ಆರ್ಡಿನೇಟರ್ ಆಗಿರುವ ಸಾಯಿ ಸಂಧ್ಯಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಜನವರಿ 23 ರಂದು ಧರ್ಮಸ್ಥಳದಲ್ಲಿ ನಡೆಯಲಿರುವ ವಿವಾಹಕ್ಕೂ ಮೊದಲು, ಅವರ ಮನೆಯಲ್ಲಿ ಅರಿಶಿಣ ಶಾಸ್ತ್ರ ಸರಳವಾಗಿ ನೆರವೇರಿದೆ.
ಕನ್ನಡದ ಪೋಷಕ ನಟ ಮತ್ತು ಬಿಗ್ ಬಾಸ್ ಸೀಸನ್ 12ರ ರೆಬೆಲ್ ಸ್ಪರ್ಧಿಯಾಗಿದ್ದ ಉಗ್ರಂ ಮಂಜು ಅವರು ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅವರ ಮದುವೆ ಸಂಗತಿ ಇದೀಗ ಸಾಕಷ್ಟು ವೈರಲ್ ಆಗಿದೆ.
ಜನವರಿ 23ರಂದು ನಡೆಯಲಿರುವ ವಿವಾಹ ಮಹೋತ್ಸವಕ್ಕೂ ಮುನ್ನ ಮಂಜು ಅವರ ಮನೆಯಲ್ಲಿ ಅರಿಶಿಣ ಶಾಸ್ತ್ರ ಅತ್ಯಂತ ಸರಳವಾಗಿ ಮತ್ತು ಸಂಪ್ರದಾಯಬದ್ಧವಾಗಿ ನೆರವೇರಿದೆ.
ಉಗ್ರಂ ಮಂಜು ಅವರ ನಿವಾಸದಲ್ಲಿ ನಡೆದ ಹಳದಿ ಶಾಸತ್ರದ ಕಾರ್ಯಕ್ರಮದಲ್ಲಿ ಅವರ ಕುಟುಂಬ ಸದಸ್ಯರು, ಆಪ್ತರು ಹಾಗೂ ಆತ್ಮೀಯ ಸ್ನೇಹಿತವರ್ಗ ಮಾತ್ರ ಭಾಗವಹಿಸಿದ್ದರು.
ಅರಿಶಿಣ ಹಚ್ಚಿಕೊಂಡು ಮಧುಮಗನ ಕಳೆಯಲ್ಲಿ ಮಂಜು ಕಂಗೊಳಿಸುತ್ತಿರುವ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಖುಷಿಖುಷಿಯಾಗಿ ಉಗ್ರಂ ಮಂಜು ಅವರು ಹಳದಿ ಶಾಸ್ತ್ರದಲ್ಲಿ ಪಾಲ್ಗೊಂಡಿದ್ದಾರೆ.
ಉಗ್ರಂ ಮಂಜು ಅವರು ಸಾಯಿ ಸಂಧ್ಯಾ ಎಂಬುವರ ಕೈ ಹಿಡಿಯಲಿದ್ದಾರೆ. ಸಂಧ್ಯಾ ಅವರು ಟ್ರಾನ್ಸ್ಪ್ಲಾಂಟ್ ಕೋ-ಆರ್ಡಿನೇಟರ್ ಆಗಿ ವೃತ್ತಿ ನಿರ್ವಹಿಸುತ್ತಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಈ ಜೋಡಿಯ ನಿಶ್ಚಿತಾರ್ಥ ನಡೆದು ಸುದ್ದಿಯಾಗಿತ್ತು.
ಬಿಗ್ ಬಾಸ್ ಮನೆಯಲ್ಲಿದ್ದಾಗಲೇ ಉಗ್ರಂ ಮಂಜು ಅವರ ಮದುವೆ ವಿಚಾರ ಸಾಕಷ್ಟು ಸೌಂಡ್ ಮಾಡಿತ್ತು. ಇತ್ತೀಚೆಗಷ್ಟೇ ಬಿಗ್ ಬಾಸ್ ಮನೆಯೊಳಗೆ ಮಂಜು ಅವರ ಗೆಳೆಯರು ಆಗಮಿಸಿ, ಅಲ್ಲಿಯೇ ಗ್ರ್ಯಾಂಡ್ ಆಗಿ ಬ್ಯಾಚುಲರ್ ಪಾರ್ಟಿ ಕೂಡ ಆಯೋಜಿಸಿ ಸುದ್ದಿಯಾಗಿದ್ದರು.
ಈ ವೇಳೆ ಬಿಗ್ಬಾಸ್ ವಿನ್ನರ್ ಗಿಲ್ಲಿ ನಟ, ಉಗ್ರಂ ಮಂಜು ಅವರನ್ನು ಸಾಕಷ್ಟು ಸತಾಯಿಸಿದ್ದ. ಮದುವೆಯ ವಿಚಾರವಾಗಿ ಆತ ಹಾಸ್ಯ ಮಾಡಿದ್ದು ಮಂಜುಗೆ ಭಾರೀ ಸಿಟ್ಟು ತರಿಸಿತ್ತು. ಆಗ ಆ ಸುದ್ದಿ ವೈರಲ್ ಆಗಿತ್ತು.
ಕೊನೆಗೆ ಉಗ್ರಂ ಮಂಜು ಭಾವಿ ಪತ್ನಿ ಸಂಧ್ಯಾ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಈಗ ಗಿಲ್ಲಿ ನಟ ಈ ಜೋಡಿಯ ಮದುವೆ ಅಥವಾ ಆರತಕ್ಷತೆಗೆ ಬರುತ್ತಾರಾ ಎನ್ನುವ ಪ್ರಶ್ನೆ ಹಲವರಲ್ಲಿ ಮೂಡಿದೆ. ಇದಕ್ಕೆ ಉತ್ತರ ಅಂದು ಸಿಗಲಿದೆ.
ಧರ್ಮಸ್ಥಳದಲ್ಲಿ ಜನವರಿ 23 ರಂದು ಮದುವೆ ಸರಳವಾಗಿ ನಡೆಯಲಿದ್ದು, ಬಳಿಕ ಬೆಂಗಳೂರಿನಲ್ಲಿ ಅದ್ದೂರಿಯಾಗಿ ರಿಸೆಪ್ಶನ್ ನಡೆಯಲಿದೆ ಎಂದು ತಿಳಿದುಬಂದಿದೆ.
ಮದುವೆಯ ನಂತರ ಬೆಂಗಳೂರಿನಲ್ಲಿ ಚಿತ್ರರಂಗದ ಗಣ್ಯರಿಗಾಗಿ ಅದ್ಧೂರಿ ಆರತಕ್ಷತೆ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

