MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • ದರ್ಶನ್​ ಬಗ್ಗೆ ಗುಡ್​ನ್ಯೂಸ್​ ಕೊಟ್ಟ ವಿಜಯಲಕ್ಷ್ಮಿ: ಕುಣಿದಾಡಿದ ಅಭಿಮಾನಿಗಳು- ಬಿಡುಗಡೆ ಯಾವಾಗ?

ದರ್ಶನ್​ ಬಗ್ಗೆ ಗುಡ್​ನ್ಯೂಸ್​ ಕೊಟ್ಟ ವಿಜಯಲಕ್ಷ್ಮಿ: ಕುಣಿದಾಡಿದ ಅಭಿಮಾನಿಗಳು- ಬಿಡುಗಡೆ ಯಾವಾಗ?

'ಹಯಗ್ರೀವ' ಸಿನಿಮಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಜೈಲಿನಲ್ಲಿರುವ ತಮ್ಮ ಪತಿಯ ಬಗ್ಗೆ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಅಭಿಮಾನಿಗಳ ಬೆಂಬಲದಿಂದ ದರ್ಶನ್ ಮಾನಸಿಕವಾಗಿ ತುಂಬಾ ಸ್ಟ್ರಾಂಗ್ ಆಗಿದ್ದಾರೆ ಎಂದು ತಿಳಿಸಿ, ಅಭಿಮಾನಿಗಳ ಆತಂಕವನ್ನು ದೂರ ಮಾಡಿದ್ದಾರೆ.

1 Min read
Author : Suchethana D
Published : Feb 22 2026, 06:39 PM IST
Share this Photo Gallery
  • FB
  • TW
  • Linkdin
  • Whatsapp
16
ಬಿಡುಗಡೆಗಾಗಿ ಕಾಯ್ತಿರೋ ಫ್ಯಾನ್ಸ್​
Image Credit : Instagram

ಬಿಡುಗಡೆಗಾಗಿ ಕಾಯ್ತಿರೋ ಫ್ಯಾನ್ಸ್​

ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್​ ಅವರು ಯಾವಾಗ ಬಿಡುಗಡೆಯಾಗುತ್ತಾರೆ, ಯಾವಾಗ ತಾವು ಅವರನ್ನು ನೋಡಬಹುದು ಎಂಬ ಕುತೂಹಲದಲ್ಲಿ ಅಭಿಮಾನಿಗಳು ಕಾಯುತ್ತಲೇ ಇದ್ದಾರೆ. ತಮ್ಮ ನೆಚ್ಚಿನ ನಾಯಕನ ಆಗಮನದ ನಿರೀಕ್ಷೆಯಲ್ಲಿ ಅಸಂಖ್ಯ ಫ್ಯಾನ್ಸ್​ ಹಗಲಿರುಳು ಕಾಯುತ್ತಿದ್ದಾರೆ. ಜೈಲಿನಲ್ಲಿ ಅವರು ಹೇಗೆ ಕಾಲ ಕಳೆಯುತ್ತಿದ್ದಾರೆ ಎನ್ನುವ ಚಿಂತೆ ಹಲವರಲ್ಲಿ ಇದೆ.

26
ದರ್ಶನ್​ ಕುರಿತು ಬಿಗ್​ ಅಪ್​ಡೇಟ್​
Image Credit : Asianet News

ದರ್ಶನ್​ ಕುರಿತು ಬಿಗ್​ ಅಪ್​ಡೇಟ್​

ಇದೀಗ ಅವರ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್​ ಬಗ್ಗೆ ಬಿಗ್​ ಅಪ್​ಡೇಟ್​ ಕೊಟ್ಟಿದ್ದು, ಇದು ಅವರ ಅಭಿಮಾನಿಗಳನ್ನು ಖುಷಿಪಡಿಸಿದೆ. ಮಂಡ್ಯದಲ್ಲಿ ‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್ ನಡೆಯಿತು. ಇದಕ್ಕೆ ವಿಜಯಲಕ್ಷ್ಮೀ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಆ ಸಂದರ್ಭದಲ್ಲಿ ದರ್ಶನ್​ ಕುರಿತು ಅವರು ಅಪ್​ಡೇಟ್​ ನೀಡಿದ್ದಾರೆ.

Related Articles

Related image1
ಮನೆಯಲ್ಲಿ ಏನೇ ಕಳುವಾದ್ರೂ ನಾನೇ ಅಂತಿದ್ರು: ನನ್ನ ಕುದುರೆ ಅಂತ ಕರೀತಿದ್ರು- ಬಾಲ್ಯಕ್ಕೆ ಜಾರಿದ ಅಶ್ವಿನಿ ಪುನೀತ್​
Related image2
ಆರೋಗ್ಯಕ್ಕೆ ಬೇಕು ತಂಗಳನ್ನ: ನಟರಾದ ಸಪ್ತಮಿ ಗೌಡ- ನೀನಾಸಂ ಸತೀಶ್​ ಹೇಳಿದ ಮಾತು ಕೇಳಿ
36
ತುಂಬಾ ಸ್ಟ್ರಾಂಗ್​ ಆಗಿದ್ದಾರೆ
Image Credit : d company

ತುಂಬಾ ಸ್ಟ್ರಾಂಗ್​ ಆಗಿದ್ದಾರೆ

ನಿಮ್ಮ ಡಿ ಬಾಸ್ ಸ್ಟ್ರಾಂಗ್ ಆಗಿದ್ದಾರೆ. ಮಾನಸಿಕವಾಗಿ ತುಂಬಾ ಗಟ್ಟಿಯಾಗಿದ್ದಾರೆ. ಅದಕ್ಕೆ ಕಾರಣ ನೀವೇ. ನಿಮ್ಮಂಥ ಅಭಿಮಾನಿಗಳು ಇರುವುದರಿಂದ ಅವರು ಮಾನಸಿಕವಾಗಿ ತುಂಬಾ ಸ್ಟ್ರಾಂಗ್ ಆಗಿದ್ದಾರೆ ಎಂದು ವಿಜಯಲಕ್ಷ್ಮಿ ಅವರು ಹೇಳುತ್ತಲೇ ಅಭಿಮಾನಿಗಳು ಜೋರಾಗಿ ಚಪ್ಪಾಳೆ ತಟ್ಟಿದ್ದಾರೆ.

46
ಕೋರ್ಟ್​ಗೆ ಹೋಗಿದ್ದ ದರ್ಶನ್​
Image Credit : d company

ಕೋರ್ಟ್​ಗೆ ಹೋಗಿದ್ದ ದರ್ಶನ್​

ದರ್ಶನ್ ಅವರಿಗೆ ಜೈಲಿನಲ್ಲಿ ಸರಿಯಾದ ವ್ಯವಸ್ಥೆ ಇರಲಿಲ್ಲ ಎನ್ನುವ ಕಾರಣಕ್ಕೆ ಇದಾಗಲೇ ಅವರು ಕೋರ್ಟ್​ಗೆ ಅರ್ಜಿಯನ್ನೂ ಸಲ್ಲಿಸಿದ್ದರು. ತಮಗೆ ಸರಿಯಾದ ಸೌಲಭ್ಯ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಆದ್ದರಿಂದ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಚಿಂತೆಯಾಗಿತ್ತು. ಇದೀಗ ವಿಜಯಲಕ್ಷ್ಮಿ ಅವರ ಮಾತಿನಿಂದ ಫ್ಯಾನ್ಸ್​ಗೆ ತುಂಬಾ ಖುಷಿಯಾಗಿದೆ.

56
ಮಾನಸಿಕವಾಗಿ ಕುಗ್ಗಿಲ್ಲ
Image Credit : d Company youtube

ಮಾನಸಿಕವಾಗಿ ಕುಗ್ಗಿಲ್ಲ

ಇದಕ್ಕೂ ಮುನ್ನ ದರ್ಶನ್​ ಅವರು ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿದ್ದಾರೆ ಎನ್ನುವ ಸುದ್ದಿಯ ಬಗ್ಗೆಯೂ ವಿಜಯಲಕ್ಷ್ಮಿ ಅವರು ಸ್ಪಷ್ಟನೆ ಕೊಟ್ಟು ಇವೆಲ್ಲಾ ಸುಳ್ಳು ಎಂದಿದ್ದರು. ಈಗ ಪುನಃ ಅವರು ಅಭಿಮಾನಿಗಳಿಗೆ ಅಪ್​ಡೇಟ್​ ನೀಡಿ ನಿಮ್ಮಿಂದಲೇ ದರ್ಶನ್​ ಅವರು ತುಂಬಾ ಸ್ಟ್ರಾಂಗ್​ ಆಗಿ ಇರುವುದಾಗಿ ತಿಳಿಸಿದ್ದಾರೆ. ಅವರು ಯಾವಾಗ ಬಿಡುಗಡೆಯಾಗುತ್ತಿದ್ದಾರೆ ಎನ್ನುವ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದಾರೆ.

66
ಸಿನಿಮಾದ ಕುರಿತು
Image Credit : X

ಸಿನಿಮಾದ ಕುರಿತು

ಇದೇ ವೇಳೆ, ವಿಜಯಲಕ್ಷ್ಮಿ ಅವರು, ಹಯಗ್ರೀವ ಸಿನಿಮಾದಲ್ಲಿ ನಟಿಸಿರುವ ಧನ್ವೀರ್, ಸಂಜನಾ ಅವರಿಗೆ ಶುಭ ಕೋರಿದ್ದಾರೆ. ಧನ್ವೀರ್ ನಮ್ಮ‌ ಕುಟುಂಬದ ಸದಸ್ಯ. ನಮಗೆ ಪ್ರೀತಿ ತೋರಿಸಿದ ಹಾಗೇ ಧನ್ವೀರ್‌ಗೂ ಪ್ರೀತಿ ತೋರಿಸಿ. ಪೈರಸಿ ಸಪೋರ್ಟ್ ಮಾಡಬೇಡಿ, ಸಿನಿಮಾ ಥಿಯೇಟರಲ್ಲಿ ನೋಡಿ ಎಂಜಾಯ್ ಮಾಡಿ ಎಂದಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ದರ್ಶನ್ ತೂಗುದೀಪ
ವಿಜಯಲಕ್ಷ್ಮಿ ದರ್ಶನ್
ಸ್ಯಾಂಡಲ್ವುಡ್ ಫಿಲ್ಮ್
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ
ಸಂಬಂಧಗಳು
ಕ್ರೈಮ್ ನ್ಯೂಸ್

Latest Videos
Recommended Stories
Recommended image1
70th Filmfare Award: ಅತ್ಯುತ್ತಮ ನಟಿ ಪ್ರಶಸ್ತಿ ಪಡೆದ ಅಂಕಿತಾ ಅಮರ್, ಕೃಷ್ಣ ಸುಂದರಿ ಜೊತೆ ನಟಿ
Recommended image2
ಆರೋಗ್ಯಕ್ಕೆ ಬೇಕು ತಂಗಳನ್ನ: ನಟರಾದ ಸಪ್ತಮಿ ಗೌಡ- ನೀನಾಸಂ ಸತೀಶ್​ ಹೇಳಿದ ಮಾತು ಕೇಳಿ
Recommended image3
ಮನೆಯಲ್ಲಿ ಏನೇ ಕಳುವಾದ್ರೂ ನಾನೇ ಅಂತಿದ್ರು: ನನ್ನ ಕುದುರೆ ಅಂತ ಕರೀತಿದ್ರು- ಬಾಲ್ಯಕ್ಕೆ ಜಾರಿದ ಅಶ್ವಿನಿ ಪುನೀತ್​
Related Stories
Recommended image1
ಮನೆಯಲ್ಲಿ ಏನೇ ಕಳುವಾದ್ರೂ ನಾನೇ ಅಂತಿದ್ರು: ನನ್ನ ಕುದುರೆ ಅಂತ ಕರೀತಿದ್ರು- ಬಾಲ್ಯಕ್ಕೆ ಜಾರಿದ ಅಶ್ವಿನಿ ಪುನೀತ್​
Recommended image2
ಆರೋಗ್ಯಕ್ಕೆ ಬೇಕು ತಂಗಳನ್ನ: ನಟರಾದ ಸಪ್ತಮಿ ಗೌಡ- ನೀನಾಸಂ ಸತೀಶ್​ ಹೇಳಿದ ಮಾತು ಕೇಳಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved