MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Special
  • Lakkundi: 'ಸಾಕು..ಅಗೆಯೋದು ನಿಲ್ಸಿ' ಅಂತ ತಿರುಗಿ ಬಿದ್ರಾ ಗ್ರಾಮಸ್ಥರು? ಸದ್ಯ ಅಲ್ಲಿ ಏನ್ ನಡಿತಾ ಇದೆ?

Lakkundi: 'ಸಾಕು..ಅಗೆಯೋದು ನಿಲ್ಸಿ' ಅಂತ ತಿರುಗಿ ಬಿದ್ರಾ ಗ್ರಾಮಸ್ಥರು? ಸದ್ಯ ಅಲ್ಲಿ ಏನ್ ನಡಿತಾ ಇದೆ?

ಈ ಘಟನೆಯು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದ್ದು, ಉತ್ಖನನ ಪ್ರದೇಶದಲ್ಲಿ ಇನ್ನಷ್ಟು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಆದರೆ, ಅಚ್ಚರಿ ಎನ್ನುವಂತೆ, ಲಕ್ಕುಂಡಿ ಗ್ರಾಮಸ್ಥರು ಈಗ ಉತ್ಖನನ ಕಾರ್ಯದ ವಿರುದ್ಧ ತಿರುಗಿ ಬಿದ್ದಿದ್ದಾರೆ. ನಿಜಕ್ಕೂ ಅಲ್ಲಿ ಏನು ನಡಿತಾ ಇದೆ?

2 Min read
Author : Shriram Bhat
Published : Jan 30 2026, 04:43 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ, ಹಳೆಯ ಮನೆಯ ಅಡಿಪಾಯ ತೋಡುವಾಗ ಪುರಾತನ ಚಿನ್ನಾಭರಣಗಳಿದ್ದ ನಿಧಿ ಪತ್ತೆಯಾಗಿದ್ದು ಗೊತ್ತೇ ಇದೆ. ಈ ಆಭರಣಗಳು ಸಮೀಪದ ಲಕ್ಷ್ಮೀ ದೇವಸ್ಥಾನಕ್ಕೆ ಸೇರಿದ್ದೆಂದು ಶಂಕಿಸಲಾಗಿದ್ದು, ಕಲ್ಯಾಣ ಚಾಲುಕ್ಯರ ಕಾಲದ ಇತಿಹಾಸಕ್ಕೆ ಹೊಸ ಸೇರ್ಪಡೆಯಾಗಿದೆ. ಆದರೆ, ಅಲ್ಲಿ ನಿಧಿ ಸಿಕ್ಕ ಬಳಿಕ ಭಾರತದ, ಅದರಲ್ಲೂ ಗದಗದ ಹೆಸರು ವರ್ತಮಾನದ ಪುಟದಲ್ಲಿ ಬೇರೆಯದೇ ರೀತಿಯಲ್ಲಿ ಪ್ರಾಜೆಕ್ಟ್ ಆಗುತ್ತಿದೆ.

26
Image Credit : Asianet News

ಮನೆ ಅಡಿಪಾಯ ತೋಡುವಾಗ ಸಿಕ್ಕಿದ ನಿಧಿ!

ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದ ಕಸ್ತೂರೆವ್ವ ರಿತ್ತಿ ಎನ್ನುವವರ ಮನೆಯಲ್ಲಿ ಈ ವಿಸ್ಮಯ ನಡೆದಿದೆ. ಹೊಸ ಮನೆ ನಿರ್ಮಾಣಕ್ಕಾಗಿ ಹಳೆಯ ಅಡಿಪಾಯವನ್ನು ತೋಡುತ್ತಿದ್ದಾಗ ಕಾರ್ಮಿಕರಿಗೆ ಲೋಹದ ಚೆಂಬು ಪತ್ತೆಯಾಗಿದೆ. ಕುತೂಹಲದಿಂದ ಆ ಚೆಂಬನ್ನು ಪರೀಕ್ಷಿಸಿದಾಗ ಅದರ ಒಳಗೆ ಪಳಪಳ ಹೊಳೆಯುವ ಚಿನ್ನಾಭರಣಗಳು ಕಂಡುಬಂದಿವೆ.

Related Articles

Related image1
Breaking: ಲಕ್ಕುಂಡಿ ಉತ್ಖನನ ವೇಳೆ ಪತ್ತೆಯಾಯ್ತು ಜೀವಂತ ಹಾವು; 'ನಿಧಿ' ಇರುವ ಸೂಚನೆ ಎಂದ ಗ್ರಾಮಸ್ಥರು!
Related image2
'ಮದುವೆ-ಸಂಸಾರ'ವೇ ಅಲ್ಟಿಮೇಟ್ ಅಲ್ಲ, ಖುಷಿಯಾಗಿರೋಕೆ ಆಲ್ಟರ್ನೇಟಿವ್ ಇದೆ ಅಂತಿದ್ಯಾ ನಿವೇದಿತಾ ಗೌಡ ಲೈಫ್?
36
Image Credit : Asianet News

ಮಡಿಕೆಯಲ್ಲಿ ಏನೇನು ಅಭರಣಗಳಿವೆ?

ಪತ್ತೆಯಾದ ಪುರಾತನ ಮಡಿಕೆಯಲ್ಲಿ ಚಿನ್ನದ ಚೈನ್, ಬೆಲೆಬಾಳುವ ಬಳೆಗಳು ಹಾಗೂ ವಿವಿಧ ವಿನ್ಯಾಸದ ಉಂಗುರಗಳು ಪತ್ತೆಯಾಗಿವೆ. ವಿಶೇಷವೆಂದರೆ, ನಿಧಿ ಸಿಕ್ಕ ಮನೆಯ ಪಕ್ಕದಲ್ಲೇ ಪುರಾತನ ಲಕ್ಷ್ಮೀ ದೇವಸ್ಥಾನವಿದೆ. ಈ ಹಿನ್ನೆಲೆಯಲ್ಲಿ, ಸಿಕ್ಕಿರುವ ಚಿನ್ನಾಭರಣಗಳು ದೇವಸ್ಥಾನಕ್ಕೆ ಸೇರಿದ ಪುರಾತನ ಒಡವೆಗಳಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಕಲ್ಯಾಣ ಚಾಲುಕ್ಯರ ಕಾಲದ ಇತಿಹಾಸ ಹೊಂದಿರುವ ಈ ಮಣ್ಣಿನಲ್ಲಿ ಮತ್ತೆ ನಿಧಿ ಪತ್ತೆಯಾಗಿರುವುದು ಕುತೂಹಲ ಕೆರಳಿಸಿದೆ.

46
Image Credit : Asianet News

ಅಧಿಕಾರಿಗಳ ಭೇಟಿ ಚಿನ್ನಾಭರಣ ತಪಾಸಣೆ

ನಿಧಿ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತ್ತೆಯಾದ ಆಭರಣಗಳ ಕಾಲಮಾನ ಮತ್ತು ಅವುಗಳ ಮೌಲ್ಯದ ಬಗ್ಗೆ ಸಂಶೋಧನೆ ನಡೆಸಲು ಮುಂದಾಗಿದ್ದಾರೆ. ಜಿಲ್ಲಾಡಳಿತವು ಸ್ಥಳವನ್ನು ವಶಕ್ಕೆ ಪಡೆದು, ಹೆಚ್ಚಿನ ಉತ್ಖನನ ನಡೆಸಲಾಗುತ್ತಿದೆ.

56
Image Credit : Kannada Prabha

ಶಿಲ್ಪಕಲೆಯ ತೊಟ್ಟಿಲು ಲಕ್ಕುಂಡಿ ಗ್ರಾಮ

ಲಕ್ಕುಂಡಿ ಗ್ರಾಮವು 11 ಮತ್ತು 12ನೇ ಶತಮಾನದ ದೇವಸ್ಥಾನಗಳಿಗೆ ಹೆಸರುವಾಸಿಯಾಗಿದೆ. 101 ದೇವಸ್ಥಾನ ಹಾಗೂ 101 ಬಾವಿಗಳನ್ನು ಹೊಂದಿರುವ ಈ ಗ್ರಾಮವು 'ಶಿಲ್ಪಕಲೆಯ ತೊಟ್ಟಿಲು' ಎಂದೇ ಪ್ರಖ್ಯಾತಿ ಪಡೆದಿದೆ. ಕಲ್ಯಾಣ ಚಾಲುಕ್ಯರ ಕಾಲದ ವೈಭವಕ್ಕೆ ಈ ಗ್ರಾಮ ಸಾಕ್ಷಿಯಾಗಿದ್ದು, ಆಗಾಗ ಇಂತಹ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇಂದು ಪತ್ತೆಯಾದ ನಿಧಿಯು ಆ ಕಾಲದ ಆರ್ಥಿಕ ಸಮೃದ್ಧಿಯನ್ನು ನೆನಪಿಸುವಂತಿದೆ.

66
Image Credit : Asianet News

ಲಕ್ಕುಂಡಿ ಉತ್ಖನನ ವೇಳೆ ಪತ್ತೆಯಾಯ್ತು ಜೀವಂತ ಹಾವು; 'ನಿಧಿ' ಇರುವ ಸೂಚನೆ ಎಂದ ಗ್ರಾಮಸ್ಥರು!

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯದ ವೇಳೆ ಅಚ್ಚರಿಯ ಘಟನೆಯೊಂದು ನಡೆದಿದೆ. ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಎದುರು ನಡೆಯುತ್ತಿರುವ ಉತ್ಖನನ ಸ್ಥಳದಲ್ಲಿ ವಿಶೇಷ ಪ್ರಭೇದದ ಜೀವಂತ ಹಾವು ಕಾಣಿಸಿಕೊಂಡಿದೆ. ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಉತ್ಖನನ ಸಿಬ್ಬಂದಿ, ಎಚ್ಚರಿಕೆಯಿಂದ ಹಾವನ್ನು ಹಿಡಿದು ಯಾವುದೇ ಹಾನಿ ಆಗದಂತೆ ಸುರಕ್ಷಿತವಾಗಿ ರಕ್ಷಿಸಿ, ನಂತರ ಹಾವನ್ನು ಕಾಡಿನ ಪ್ರದೇಶಕ್ಕೆ ಬಿಡಲಾಗಿದೆ.

ಘಟನೆಯ ಬಳಿಕ ಉತ್ಖನನ ಕಾರ್ಯವನ್ನು ಕೆಲಕಾಲ ಸ್ಥಗಿತಗೊಳಿಸಿ, ನಂತರ ಸುರಕ್ಷತಾ ಕ್ರಮಗಳೊಂದಿಗೆ ಪುನರಾರಂಭಿಸಲಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದ್ದು, ಉತ್ಖನನ ಪ್ರದೇಶದಲ್ಲಿ ಇನ್ನಷ್ಟು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಆದರೆ, ಅಚ್ಚರಿ ಎನ್ನುವಂತೆ, ಲಕ್ಕುಂಡಿ ಗ್ರಾಮಸ್ಥರು ಈಗ ಉತ್ಖನನ ಕಾರ್ಯದ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಗ್ರಾಮಸ್ಥರು ಸರ್ಕಾರದ ಉತ್ಖನನ ಕೆಲಸದ ವಿರುದ್ಧ ತಿರುಗಿ ಬೀಳಲು ಕಾರಣ, ಅಲ್ಲಿ ಅವರಿಗಾಗುತ್ತಿರುವ ತೊಂದರೆ. ಅಂದರೆ, ಶುರುವಿನಲ್ಲಿ ಆ ಗ್ರಾಮದಲ್ಲಿ ನಿಧಿ ಸಿಕ್ಕ ಖುಷಿಯಲ್ಲಿ ಇದ್ದ ಕೆಲಸಗಳನ್ನೆಲ್ಲಾ ಬಿಟ್ಟು ಊರವೆರಲ್ಲಾ ಅಲ್ಲಿ ಸೇರುತ್ತಿದ್ದರು. ಆದರೆ, ಬರಬರುತ್ತ ಊರಿಗೆ ಬರುವವರ ಸಂಖ್ಯೆ ಅತಿಯಾಗತೊಡಗಿದೆ. ಜೊತೆಗೆ, ಅಲ್ಲಿ ರಾಜಕೀಯ, ಧಾರ್ಮಿಕತೆ ಎಲ್ಲ ಸಮಸ್ಯೆಗಳೂ ತಲೆಹಾಕತಿಡಗಿದ್ದು ಊರಿನ ಜನರ ಮಾನಸಿಕ ಶಾಂತಿಗೆ ಧಕ್ಕೆ ಬರುತ್ತಿದೆ.

ಹೀಗಾಗಿ, ಮೊದಲು ಸಿಕ್ಕ ನಿಧಿ ಬಳಿಕ ಈಗ ಇಲ್ಲಿ ಏನೂ ಸಿಗುತ್ತಿಲ್ಲ. ಅಷ್ಟಾದ ಮೇಲೆ ಕೂಡ ಮತ್ತೆಮತ್ತೆ ಅಲ್ಲೇ ಅಗೆಯುತ್ತ, ನಿಧಿಗಾಗಿ ಹುಡುಕುತ್ತ, ಅಲ್ಲಿನ ಕುಟುಂಬ ಹಾಗೂ ಅಕ್ಕಪಕ್ಕದ ಕುಟುಂಬಕ್ಕೆ ಆಗುತ್ತಿರುವ ತೊಂದರೆ ತಪ್ಪಲಿ ಎಂಬುದು ಆ ಗ್ರಾಮದ ಆಶಯ ಅಷ್ಟೇ. ಇಷ್ಟು ದಿನ ಅಗೆದಿದ್ದು ಓಕೆ, ಇನ್ನೂ ಕೂಡ ಯಾವುದೇ ಸಾಕ್ಷಿ, ಮಾಹಿತಿ ಇಲ್ಲದೇ ಅಗೆಯುತ್ತಲೇ ಹೋದರೆ ಅದು ಮುಗಿದು ಅಲ್ಲಿ ಕುಟುಂಬ ಹಾಗೂ ಗ್ರಾಮ ಮತ್ತೆ ನೆಮ್ಮದಿ ಬದುಕು ಸಾಗಿಸುವುದು ಯಾವಾಗ ಎನ್ನುವುದಷ್ಟೇ ಆ ಗ್ರಾಮದ ಸದ್ಯದ ಪ್ರಶ್ನೆಯಾಗಿದೆ. ಈ ಪ್ರಶ್ನೆಗೆ ಉತ್ತರ ಸಿಗಬಹುದೇ?

About the Author

SB
Shriram Bhat
ಏಷ್ಯಾನೆಟ್ ಸುವರ್ಣನ್ಯೂಸ್.ಕಾಮ್‌ನಲ್ಲಿ ಉಪ ಸಂಪಾದಕ. ಸಿನಿಮಾ, ಲೈಫ್‌ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ಹೆಚ್ಚಿನ ಗಮನ ನೀಡುತ್ತಿದ್ದೇನೆ. ಇಂಡಿಯನ್ ಎಕ್ಸ್‌ಪ್ರೆಸ್‌, ಒನ್‌ ಇಂಡಿಯಾ ಕನ್ನಡ ಹಾಗೂ ವಿಜಯ ಕರ್ನಾಟಕ ವೆಬ್‌ನಲ್ಲಿ ಕೆಲಸ ಮಾಡಿದ ಅನುಭವವಿದೆ. ಕಳೆದ 15 ವರ್ಷಗಳಿಂದ ನಿರಂತರ ಬರವಣಿಗೆ ಉದ್ಯೋಗದಲ್ಲಿದ್ದೇನೆ. ಸುದ್ದಿ ಮಾಧ್ಯಮವಲ್ಲದೇ ಮನರಂಜನಾ ಮಾಧ್ಯಮದಲ್ಲೂ ಕೆಲಸ ಮಾಡಿದ್ದೇನೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಹುಟ್ಟೂರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದೇನೆ. ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ, ಮಾನವೀಯತೆಗೆ ಮೊದಲ ಪ್ರಾಶಸ್ತ್ಯ.
ಲಕ್ಕುಂಡಿ
ಸುದ್ದಿ
ವೈರಲ್ ಸುದ್ದಿ

Latest Videos
Recommended Stories
Recommended image1
ಪ್ರಭಾಸ್-ಪ್ರಶಾಂತ್ ನೀಲ್ ಜೋಡಿಯ 'ಸಲಾರ್ 2' ಚಿತ್ರ ನಿಂತುಹೋಗಿದ್ಯಾ? ಈ ಸಿನಿಮಾ ಬರೋದಿಲ್ವಾ?
Recommended image2
ಯುಜಿಸಿ ಗದ್ದಲ : ಸಂಯಮದ ನಡೆ ಅಗತ್ಯ
Recommended image3
ಯುಜಿಸಿಗೆ ವಿವಾದದ ಬಿಸಿ ! ಏನಿದು ಯುಜಿಸಿ ಹೊತ್ತಿಸಿದ ವಿವಾದದ ಕಿಚ್ಚು
Related Stories
Recommended image1
Breaking: ಲಕ್ಕುಂಡಿ ಉತ್ಖನನ ವೇಳೆ ಪತ್ತೆಯಾಯ್ತು ಜೀವಂತ ಹಾವು; 'ನಿಧಿ' ಇರುವ ಸೂಚನೆ ಎಂದ ಗ್ರಾಮಸ್ಥರು!
Recommended image2
'ಮದುವೆ-ಸಂಸಾರ'ವೇ ಅಲ್ಟಿಮೇಟ್ ಅಲ್ಲ, ಖುಷಿಯಾಗಿರೋಕೆ ಆಲ್ಟರ್ನೇಟಿವ್ ಇದೆ ಅಂತಿದ್ಯಾ ನಿವೇದಿತಾ ಗೌಡ ಲೈಫ್?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved