ಕೇರಳ ದೇವಸ್ಥಾನಕ್ಕೆ ಭೇಟಿ: ಸಾಂಪ್ರದಾಯಿಕ ಲುಕ್ ನಲ್ಲಿ ಕಂಗೊಳಿಸಿದ ಸಿಂಧು
ಇತ್ತೀಚೆಗಷ್ಟೇ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತದ ತಾರಾ ಬ್ಯಾಡ್ಮಿಂಟನ್ ಪಟು ಪಿ.ವಿ. ಸಿಂಧು ಅವರನ್ನು ಕೇರಳ ಸರ್ಕಾರ ನಗದು ಬಹುಮಾನ ನೀಡುವ ಮೂಲಕ ಗೌರವಿಸಿದೆ. ದೇವಸ್ಥಾನಕ್ಕೆ ಭೇಟಿ ನೀಡುವಾಗ ಸಿಂಧು ಕೇರಳ ಸಾಂಪ್ರದಾಯಿಕ ಉಡುಗೆ ಸೆಟ್ ಮುಂಡು ತೊಟ್ಟು ಮಿಂಚಿದರು. ರಾಜ್ಯ ಸರ್ಕಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸಿಂಧು ಪಾಲ್ಗೊಂಡಿದ್ದರು. ಈ ವೇಳೆ ಕೇರಳ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ. ಸುನಿಲ್ 10 ಲಕ್ಷ ರುಪಾಯಿ ಮೊತ್ತದ ಚೆಕ್ ವಿತರಿಸಿದರು.
16

ಕೇರಳ ರಾಜ್ಯ ಸರ್ಕಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮಕ್ಕಾಗಿ ಸಿಂಧು ದೇವರ ನಾಡಿಗೆ ಆಗಮಿಸಿದ್ದರು.
ಕೇರಳ ರಾಜ್ಯ ಸರ್ಕಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮಕ್ಕಾಗಿ ಸಿಂಧು ದೇವರ ನಾಡಿಗೆ ಆಗಮಿಸಿದ್ದರು.
26
ಕೇರಳ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ. ಸುನಿಲ್ 10 ಲಕ್ಷ ರುಪಾಯಿಗಳ ಚೆಕ್ಕನ್ನು ಸಿಂಧುವಿಗೆ ಹಸ್ತಾಂತರಿಸಿದರು.
ಕೇರಳ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ. ಸುನಿಲ್ 10 ಲಕ್ಷ ರುಪಾಯಿಗಳ ಚೆಕ್ಕನ್ನು ಸಿಂಧುವಿಗೆ ಹಸ್ತಾಂತರಿಸಿದರು.
36
ಸಿಂಧು ಕೇರಳದ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ ಹಾಗೂ ಆಟ್ಟುಕಲ್ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ತಾಯಿ ಪಿ. ವಿಜಯ ಸಾಥ್ ನೀಡಿದರು.
ಸಿಂಧು ಕೇರಳದ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ ಹಾಗೂ ಆಟ್ಟುಕಲ್ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ತಾಯಿ ಪಿ. ವಿಜಯ ಸಾಥ್ ನೀಡಿದರು.
46
ಸಿಂಧು ದೇವಸ್ಥಾನಕ್ಕೆ ಭೇಟಿ ನೀಡುವಾಗ ಕೇರಳ ಸಾಂಪ್ರದಾಯಿಕ ಉಡುಗೆ ಸೆಟ್ ಮುಂಡು ತೊಟ್ಟು ಕಂಗೊಳಿಸಿದರು.
ಸಿಂಧು ದೇವಸ್ಥಾನಕ್ಕೆ ಭೇಟಿ ನೀಡುವಾಗ ಕೇರಳ ಸಾಂಪ್ರದಾಯಿಕ ಉಡುಗೆ ಸೆಟ್ ಮುಂಡು ತೊಟ್ಟು ಕಂಗೊಳಿಸಿದರು.
56
ಇದೇ ವರ್ಷ ಆಗಸ್ಟ್ 25ರಂದು ಸ್ವಿಟ್ಜರ್ ಲ್ಯಾಂಡ್’ನ ಬಾಸೆಲ್’ನಲ್ಲಿ ನಡೆದ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಶಿಪ್’ನಲ್ಲಿ ಜಪಾನಿನ ನೊಜೋಮಿ ಒಕುಹರಾರನ್ನು 21-7, 21-7 ನೇರ ಗೇಮ್’ನಲ್ಲಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. ಈ ಮೂಲಕ ವಿಶ್ವಬ್ಯಾಡ್ಮಿಂಟನ್ ಚಾಂಪಿಯನ್ ಆದ ಮೊದಲ ಭಾರತೀಯ ಆಟಗಾರ್ತಿ ಎನ್ನುವ ಗೌರವಕ್ಕೂ ಭಾಜನರಾದರು.
ಇದೇ ವರ್ಷ ಆಗಸ್ಟ್ 25ರಂದು ಸ್ವಿಟ್ಜರ್ ಲ್ಯಾಂಡ್’ನ ಬಾಸೆಲ್’ನಲ್ಲಿ ನಡೆದ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಶಿಪ್’ನಲ್ಲಿ ಜಪಾನಿನ ನೊಜೋಮಿ ಒಕುಹರಾರನ್ನು 21-7, 21-7 ನೇರ ಗೇಮ್’ನಲ್ಲಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. ಈ ಮೂಲಕ ವಿಶ್ವಬ್ಯಾಡ್ಮಿಂಟನ್ ಚಾಂಪಿಯನ್ ಆದ ಮೊದಲ ಭಾರತೀಯ ಆಟಗಾರ್ತಿ ಎನ್ನುವ ಗೌರವಕ್ಕೂ ಭಾಜನರಾದರು.
66
ರಿಯೋ ಒಲಿಂಪಿಕ್ಸ್’ನಲ್ಲಿ ಬೆಳ್ಳಿ ಗೆದ್ದಿದ್ದ ಸಿಂಧು, ಟೋಕಿಯೋ ಒಲಿಂಪಿಕ್ಸ್’ನಲ್ಲಿ ಚಿನ್ನ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.
ರಿಯೋ ಒಲಿಂಪಿಕ್ಸ್’ನಲ್ಲಿ ಬೆಳ್ಳಿ ಗೆದ್ದಿದ್ದ ಸಿಂಧು, ಟೋಕಿಯೋ ಒಲಿಂಪಿಕ್ಸ್’ನಲ್ಲಿ ಚಿನ್ನ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos