MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಉತ್ತರ ಕನ್ನಡ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬಂಗಾರಮಕ್ಕಿ ವೀರಾಂಜನೇಯ ಸಂಸ್ಥಾನದಿಂದ ಅಡಿಗಲ್ಲು

ಉತ್ತರ ಕನ್ನಡ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬಂಗಾರಮಕ್ಕಿ ವೀರಾಂಜನೇಯ ಸಂಸ್ಥಾನದಿಂದ ಅಡಿಗಲ್ಲು

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅನ್ನೋದು ಉತ್ತರಕನ್ನಡ ಜಿಲ್ಲೆಯ ಜನರ ದೊಡ್ಡ ಕನಸ್ಸು. ಜಿಲ್ಲೆಯಲ್ಲಿ ಹಲವಾರು ವರ್ಷದಿಂದ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಹೋರಾಟ ಮಾಡುತ್ತಲೇ ಬರುತ್ತಿದ್ದಾರೆ. ಇದೀಗ ಹೊನ್ನಾವರದ ಬಂಗಾರಮಕ್ಕಿಯಲ್ಲಿ ವೀರಾಂಜನೇಯ ಸಂಸ್ಥಾನದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

1 Min read
Ravi Janekal
Published : May 10 2024, 08:35 PM IST
Share this Photo Gallery
  • FB
  • TW
  • Linkdin
  • Whatsapp
13

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅನ್ನೋದು ಉತ್ತರಕನ್ನಡ ಜಿಲ್ಲೆಯ ಜನರ ದೊಡ್ಡ ಕನಸ್ಸು. ಜಿಲ್ಲೆಯಲ್ಲಿ ಹಲವಾರು ವರ್ಷದಿಂದ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಹೋರಾಟ ಮಾಡುತ್ತಲೇ ಬರುತ್ತಿದ್ದಾರೆ. 

ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ಸಾವಿರಾರು ಜನರು ಸಾವನ್ನಪ್ಪಿದ್ದು, ಸರ್ಕಾರ ಕಣ್ಣು ತೆರೆಯುವಂತೆ ಹೋರಾಟಗಳು ನಡೆಯುತ್ತಲೇ ಇವೆ.‌ ಪ್ರತೀ ಚುನಾವಣೆಯಲ್ಲಿ ಇದೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅನ್ನೋದು ಚುನಾವಣೆಯ ವಿಷಯ ವಸ್ತು ಸಹ ಆಗಿದ್ರೂ ಚುನಾವಣೆ ಮುಗಿದ ಬಳಿಕ ಯಾವ ಸರಕಾರ ಕೂಡಾ ಸ್ಪಂದಿಸಿಲ್ಲ. 
 

23

ಇದೀಗ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದ ಬಂಗಾರಮಕ್ಕಿ ಮಹಾಸಂಸ್ಥಾನದ ಶ್ರೀ ಮಾರುತಿ ಗೂರೂಜಿ ಬೆಂಗಳೂರಿನ ಪ್ರಸಿದ್ದ ಸುಧೀಕ್ಷ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಜಿಲ್ಲೆಯಲ್ಲಿ ನಿರ್ಮಾಣ ಮಾಡಲು ಮುಂದಾಗಿದ್ದಾರೆ. 

ಜಿಲ್ಲೆಯ ಹೊನ್ನಾವರದ ಅಳ್ಳಂಕಿ ಗ್ರಾಮದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುತ್ತಿದ್ದು ಇಂದು ಸುಮಾರು 5.30 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲು ಮುಂದಾದ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. 
 

33

ಸುಮಾರು 120ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದಲ್ಲಿ ಸುಮಾರು 150 ಬೆಡ್ ನ ಆಸ್ಪತ್ರೆ ನಿರ್ಮಿಸಿ ನಂತರ ಹಂತ ಹಂತವಾಗಿ ಮೆಡಿಕಲ್ ಕಾಲೇಜು ನಿರ್ಮಿಸುವ ಮೂಲಕ 3 ಸಾವಿರ ಬೆಡ್ ಆಸ್ಪತ್ರೆ, ಏರ್ ಅಂಬ್ಯುಲೆನ್ಸ್ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸೇವೆ ಕೊಡಲು ಚಿಂತನೆ ನಡೆಸಲಾಗಿದೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಉತ್ತರ ಕನ್ನಡ
ಕರ್ನಾಟಕ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved