ನಾನು ನಿರಂತರ ವಿರೋಧ ಪಕ್ಷ ; ಸಿಎಂ ಸಿದ್ದರಾಮಯ್ಯಗೆ ಪ್ರಕಾಶ್ ರಾಜ್ ಅಚ್ಚರಿಯ ಸಲಹೆ!
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರ ಮೇಲಿನ ಭ್ರಷ್ಟಾಚಾರದ ಆರೋಪಗಳು ಅವರಿಗೆ ಶೋಭೆ ತರುವುದಿಲ್ಲ, ಆದ್ದರಿಂದ ಅವರು ಆಡಳಿತದ ಮೇಲೆ ಹಿಡಿತ ಸಾಧಿಸಬೇಕು ಎಂದು ನಟ ಪ್ರಕಾಶ್ ರಾಜ್ ಉಡುಪಿಯಲ್ಲಿ ಸಲಹೆ ನೀಡಿದ್ದಾರೆ. ತಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ ಎಂದು ಹೇಳಿದ್ದಾರೆ.

ಹಿಡಿತ ಇಟ್ಟುಕೊಳ್ಳಬೇಕು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ, ಇದು ಅವರಿಗೆ ಶೋಭೆಯಲ್ಲ, ಅವರು ಆಡಳಿತದ ಮೇಲೆ ಹಿಡಿತ ಇಟ್ಟುಕೊಳ್ಳಬೇಕು ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ದಾಖಲೆ ಎಲ್ಲರೂ ಮಾಡುತ್ತಾರೆ
ಗುರುವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜ ಅರಸು ನಂತರ ಸುದೀರ್ಘಾವಧಿಯ ಸಿಎಂ ಸಿದ್ದರಾಮಯ್ಯ ದಾಖಲೆ ವಿಚಾರಕ್ಕೆ ಪ್ರತಿಕ್ರಿಯಿಸಿದರು, ದಾಖಲೆ ಎಲ್ಲರೂ ಮಾಡುತ್ತಾರೆ. ಅರಸು ಅವರ ಕಾಲಘಟ್ಟವೇ ಬೇರೆ ಸಿದ್ದರಾಮಯ್ಯ ಕಾಲಘಟ್ಟವೇ ಬೇರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಆರೋಪಗಳು ಮುಖ್ಯಮಂತ್ರಿಗೆ ಶೋಭೆಯಲ್ಲ
ಆಡಳಿತದ ಮೇಲೆ ಸಿದ್ದರಾಮಯ್ಯನವರು ಹಿಡಿತ ಇಟ್ಟುಕೊಂಡರೆ ಒಳ್ಳೆಯದು, ಅವರ ಆಪ್ತರ ಮೇಲೆ ಇರುವ ಭ್ರಷ್ಟಾಚಾರದ ಆರೋಪಗಳು ಮುಖ್ಯಮಂತ್ರಿಗೆ ಶೋಭೆಯಲ್ಲ, ಎಲ್ಲವನ್ನು ಸರಿ ಮಾಡಿ ಪಾರದರ್ಶಕವಾಗಿರಲಿ ಎಂದು ಮುಖ್ಯಮಂತ್ರಿಗಳಿಗೆ ಪ್ರಕಾಶ್ ರಾಜ್ ಸಲಹೆ ನೀಡಿದರು.
ಇದನ್ನೂ ಓದಿ: ಕಿವುಡರ ಏಷ್ಯಾಕಪ್ ಟಿ-20 ಕ್ರಿಕೆಟ್: ಟೀಂ ಇಂಡಿಯಾ ತಂಡಕ್ಕೆ ಆಯ್ಕೆಯಾದ ಕುಂದಾಪುರದ ಸನಿತ್ ಶೆಟ್ಟಿ
ನಾನು ನಿರಂತರ ವಿರೋಧ ಪಕ್ಷ
ಸಿಎಂ ಸಿದ್ದರಾಮಯ್ಯ ಅವರು ಅಹಿಂದ ನಾಯಕರು ಒಳ್ಳೆಯದಾಗಲಿ, ಅಭಿನಂದನೆಗಳು ಎಂದ ಪ್ರಕಾಶ್ ರಾಜ್ ನಾನು ಬರಿ ಹೊಗಳು ಭಟ್ಟ ಅಲ್ಲ, ಪ್ರಶ್ನೆಯನ್ನು ಕೇಳುತ್ತೇನೆ, ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ, ನಾನು ನಿರಂತರ ವಿರೋಧ ಪಕ್ಷ ಎಂದು ಹೇಳಿದರು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೇ. 8 ಮೀಸಲಾತಿ; ಬಂಪರ್ ಸುವರ್ಣವಕಾಶ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

