MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಬೆಳಗಾವಿ ಎಟಿಎಂ ಯಂತ್ರ ಕದ್ದೊಯ್ದರೂ ಕಳ್ಳರ ಕೈಗೆ ಸಿಗಲಿಲ್ಲ ಹಣ! ಲಾಕರ್ ತೆಗೆಲಾಗದೇ ಬೀಸಾಡಿ ಹೋದ ಗ್ಯಾಂಗ್!

ಬೆಳಗಾವಿ ಎಟಿಎಂ ಯಂತ್ರ ಕದ್ದೊಯ್ದರೂ ಕಳ್ಳರ ಕೈಗೆ ಸಿಗಲಿಲ್ಲ ಹಣ! ಲಾಕರ್ ತೆಗೆಲಾಗದೇ ಬೀಸಾಡಿ ಹೋದ ಗ್ಯಾಂಗ್!

ಬೆಳಗಾವಿಯಲ್ಲಿ, ಕಳ್ಳರು ತಳ್ಳುಗಾಡಿ ಬಳಸಿ ಇಂಡಿಕ್ಯಾಶ್ ಎಟಿಎಂ ಯಂತ್ರವನ್ನೇ ಕದ್ದೊಯ್ದಿದ್ದಾರೆ. ಆದರೆ, ಗ್ಯಾಸ್ ಕಟ್ಟರ್‌ನಿಂದಲೂ ಅದನ್ನು ತೆರೆಯಲು ವಿಫಲರಾಗಿ, ಹಣ ದೋಚಲಾಗದೆ ಯಂತ್ರವನ್ನು ರಸ್ತೆಬದಿ ಎಸೆದು ಪರಾರಿಯಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

2 Min read
Sathish Kumar KH
Published : Dec 02 2025, 06:46 PM IST
Share this Photo Gallery
  • FB
  • TW
  • Linkdin
  • Whatsapp
16
ಎಟಿಎಂ ಕದ್ದರೂ, ಹಣ ಕದಿಯಲು ವಿಫಲರಾದ ಕಳ್ಳರು
Image Credit : Asianet News

ಎಟಿಎಂ ಕದ್ದರೂ, ಹಣ ಕದಿಯಲು ವಿಫಲರಾದ ಕಳ್ಳರು

ಬೆಳಗಾವಿಯಲ್ಲಿ ನಿನ್ನೆ ರಾತ್ರಿ ವೇಳೆ 'ತಳ್ಳುಗಾಡಿ ಬಳಸಿ ಎಟಿಎಂ ಮಷಿನ್ ಹೊತ್ತೊಯ್ದ' ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. 

ಕಳ್ಳರು ಎಟಿಎಂ ಯಂತ್ರವನ್ನು ಕದ್ದು ಸುಮಾರು ಅರ್ಧ ಕಿಲೋಮೀಟರ್ ದೂರದವರೆಗೆ ಎಳೆದೊಯ್ದರೂ, ಅದನ್ನು ತೆರೆಯಲು ಸಾಧ್ಯವಾಗದೆ, ಹಣವನ್ನೂ ದೋಚಲು ವಿಫಲರಾಗಿ ಮಷಿನ್ ಅನ್ನು ರಸ್ತೆಯಲ್ಲಿಯೇ ಎಸೆದು ಪರಾರಿಯಾಗಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಮಾಹಿತಿ ನೀಡಿದ್ದಾರೆ.

26
ಕಳ್ಳತನದ ವಿಫಲ ಯತ್ನದ ವಿವರ
Image Credit : Asianet News

ಕಳ್ಳತನದ ವಿಫಲ ಯತ್ನದ ವಿವರ

ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಿರುವ ಇಂಡಿಕ್ಯಾಶ್ (Indicash) ಎಟಿಎಂನಲ್ಲಿ ನವೆಂಬರ್ 30ರಂದು ತಡರಾತ್ರಿ 3 ಗಂಟೆ ಸುಮಾರಿಗೆ ಈ ಕಳ್ಳತನದ ಯತ್ನ ನಡೆದಿತ್ತು.

Related Articles

Related image1
ಬೆಳಗಾವಿಯಲ್ಲಿ ಎಟಿಎಂ ಬೂತ್ ಉಂಟು, ಬಾಕ್ಸ್ ಇಲ್ಲ; ಕಳ್ಳರ ರಾಬರಿ ಐಡಿಯಾ ನೋಡಿ, ಪೊಲೀಸರೇ ಗಾಬರಿ!
Related image2
ಬೆಂಗಳೂರಿನ 7 ಕೋಟಿ ರಾಬರಿ ಪ್ರಕರಣ, ಪೊಲೀಸ್ ಪೇದೆ ಅಣ್ಣಪ್ಪ ನಾಯಕ್ ಅಮಾನತು
36
ಬ್ಲ್ಯಾಕ್ ಸ್ಪ್ರೇ ಐಡಿಯಾ
Image Credit : Asianet News

ಬ್ಲ್ಯಾಕ್ ಸ್ಪ್ರೇ ಐಡಿಯಾ

ಮೂವರು ಖದೀಮರು ಎಟಿಎಂ ಕೇಂದ್ರಕ್ಕೆ ನುಗ್ಗಿ, ಶಬ್ದವಾದರೆ ಅಲಾರಾಂ ಟ್ರಿಗರ್ ಆಗದಂತೆ ಸೆನ್ಸಾರ್‌ಗಳ ಮೇಲೆ ಮತ್ತು ಸಿಸಿಟಿವಿ ಕ್ಯಾಮೆರಾಗಳ ಮೇಲೆ ಬ್ಲ್ಯಾಕ್ ಸ್ಪ್ರೇ ಬಳಸಿ ಮಷಿನ್ ಅನ್ನು ಬೇರ್ಪಡಿಸಿದ್ದಾರೆ.

46
ತಳ್ಳುಗಾಡಿಯಲ್ಲಿ ಕಳವು
Image Credit : Asianet News

ತಳ್ಳುಗಾಡಿಯಲ್ಲಿ ಕಳವು

ಯಾವುದೇ ಸಂಶಯ ಬಾರದಂತೆ, ಅವರು ಮಷಿನ್ ಅನ್ನು ತಳ್ಳುಗಾಡಿ (ಟ್ರಾಲಿಯಲ್ಲಿ) ಇಟ್ಟುಕೊಂಡು ಸುಮಾರು 200 ಮೀಟರ್ ದೂರದವರೆಗೆ ತಳ್ಳಿಕೊಂಡು ಹೋಗಿ, ನಂತರ ತಮ್ಮ ವಾಹನದಲ್ಲಿ ಅರ್ಧ ಕಿಲೋಮೀಟರ್ ದೂರದವರೆಗೆ ಕೊಂಡೊಯ್ದಿದ್ದಾರೆ. ಎಟಿಎಂ ಮಷಿನ್‌ನಲ್ಲಿ 1 ಲಕ್ಷ ರೂಪಾಯಿಗೂ ಅಧಿಕ ಹಣವಿತ್ತು ಎಂದು ತಿಳಿದುಬಂದಿದೆ. ಕಳ್ಳರು ಅದನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿದ ನಂತರ ಹಣ ಪಡೆಯಲು ಯತ್ನಿಸಿದ್ದಾರೆ.

56
ಗ್ಯಾಸ್ ಕಟ್ಟರ್‌ನಿಂದ ಓಪನ್ ಮಾಡಲು ಪ್ರಯತ್ನ
Image Credit : Asianet News

ಗ್ಯಾಸ್ ಕಟ್ಟರ್‌ನಿಂದ ಓಪನ್ ಮಾಡಲು ಪ್ರಯತ್ನ

ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಹೇಳಿಕೆಯ ಪ್ರಕಾರ, 'ಕಳ್ಳರು ಎಟಿಎಂ ಮಷಿನ್ ಅನ್ನು ಗ್ಯಾಸ್ ಕಟ್ಟರ್‌ನಿಂದ ಓಪನ್ ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ಎಟಿಎಂ ಬಲವಾದ ಭದ್ರತೆ ಹೊಂದಿದ್ದ ಕಾರಣ ಅದನ್ನು ತೆರೆಯಲು ಅವರಿಗೆ ಸಾಧ್ಯವಾಗಿಲ್ಲ. ಯಶಸ್ಸು ಸಿಗದ ಕಾರಣ ಕಳ್ಳರು ಕೋಪದಲ್ಲಿ ಮಷಿನ್ ಅನ್ನು ಅರ್ಧ ಕಿಲೋಮೀಟರ್ ದೂರದಲ್ಲಿ ಎಸೆದು ಪರಾರಿಯಾಗಿದ್ದಾರೆ.

66
ಕಳ್ಳರನ್ನು ಪತ್ತೆ ಹಚ್ಚಲು ವಿಶೇಷ ತಂಡ
Image Credit : Asianet News

ಕಳ್ಳರನ್ನು ಪತ್ತೆ ಹಚ್ಚಲು ವಿಶೇಷ ತಂಡ

ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರ ಕೈಚಳಕ ಸೆರೆಯಾಗಿದ್ದು, ಕಳ್ಳತನಕ್ಕೆ ಯತ್ನಿಸಿದ ಖದೀಮರ ಐಡಿಯಾ ಕಂಡು ಪೊಲೀಸರು ದಂಗಾಗಿದ್ದರು. ಕಳ್ಳತನದ ವಿಫಲ ಯತ್ನದ ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. 

ತಲೆಮರೆಸಿಕೊಂಡಿರುವ ಕಳ್ಳರನ್ನು ಪತ್ತೆ ಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಕಮಿಷನರ್ ಭರವಸೆ ನೀಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಳಗಾವಿ
ಕರ್ನಾಟಕ ಸುದ್ದಿ
ಕ್ರೈಮ್ ನ್ಯೂಸ್
ದರೋಡೆ

Latest Videos
Recommended Stories
Recommended image1
ಕ್ಯಾನ್ಸರ್ ಶಸ್ತ್ರಚಿಕಿತ್ಸೆಯಲ್ಲಿ ಹೊಸ ಮೈಲಿಗಲ್ಲಿನತ್ತ ಮಿಮ್ಸ್ ಹೆಜ್ಜೆ, ನೈಜ ಸಮಯದಲ್ಲಿ ಗುರುತಿಸುವ ಸಂಶೋಧನೆ ಆರಂಭ!
Recommended image2
ಬೆಂಗಳೂರು ಏರ್‌ಪೋರ್ಟ್, ಶಾಪಿಂಗ್ ಮಾಲ್‌ಗಳಿಗೆ 'ಜೈಷ್-ಇ-ಮೊಹಮ್ಮದ್' ಹೆಸರಲ್ಲಿ ಬಾಂಬ್ ಬೆದರಿಕೆ ಇ-ಮೇಲ್
Recommended image3
ಬೆಂಗಳೂರು ಏರ್ಪೋರ್ಟಲ್ಲಿ ಡಿ.8ರಿಂದ ಹೊಸ ಪಿಕಪ್‌ ನಿಯಮ: ಕೇವಲ 8 ನಿಮಿಷ ಉಚಿತ, ಅವಧಿ ಮೀರಿದರೆ ದಂಡ ಖಚಿತ!
Related Stories
Recommended image1
ಬೆಳಗಾವಿಯಲ್ಲಿ ಎಟಿಎಂ ಬೂತ್ ಉಂಟು, ಬಾಕ್ಸ್ ಇಲ್ಲ; ಕಳ್ಳರ ರಾಬರಿ ಐಡಿಯಾ ನೋಡಿ, ಪೊಲೀಸರೇ ಗಾಬರಿ!
Recommended image2
ಬೆಂಗಳೂರಿನ 7 ಕೋಟಿ ರಾಬರಿ ಪ್ರಕರಣ, ಪೊಲೀಸ್ ಪೇದೆ ಅಣ್ಣಪ್ಪ ನಾಯಕ್ ಅಮಾನತು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved