MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ರಸ್ತೆಗುಂಡಿ ಮುಚ್ಚಲು ಬಿಬಿಎಂಪಿ ಅಧಿಕಾರಿಗಳಿಗೆ ತರಬೇತಿ; ಇವ್ರು ಗುಂಡಿ ಮುಚ್ಚೋದ್ರೊಳಗೆ ಅದೆಷ್ಟು ಜನ ಗುಂಡಿ ಸೇರ್ತಾರೋ?

ರಸ್ತೆಗುಂಡಿ ಮುಚ್ಚಲು ಬಿಬಿಎಂಪಿ ಅಧಿಕಾರಿಗಳಿಗೆ ತರಬೇತಿ; ಇವ್ರು ಗುಂಡಿ ಮುಚ್ಚೋದ್ರೊಳಗೆ ಅದೆಷ್ಟು ಜನ ಗುಂಡಿ ಸೇರ್ತಾರೋ?

ಬಿಬಿಎಂಪಿ ವತಿಯಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಇವರು ತರಬೇತಿ ಪಡೆದು, ಪ್ರಾಕ್ಟೀಸ್ ಮಾಡಿ ಗುಂಡಿ ಮುಚ್ಚೋದರೊಳಗೆ ಅದೆಷ್ಟು ಜನರು ರಸ್ತೆ ಗುಂಡಿಯಲ್ಲಿ ಬಿದ್ದು, ಶಾಶ್ವತ ಗುಂಡಿ ಸೇರುತ್ತಾರೋ? ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿಬಂದಿದೆ.

2 Min read
Sathish Kumar KH
Published : Aug 19 2025, 04:57 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಬೆಂಗಳೂರು (ಆ.19): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವುದಕ್ಕೆ ಬಿಬಿಎಂಪಿ ವತಿಯಿಂದ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಈಗ ಕಾರ್ಯಾಗಾರದಲ್ಲಿ ರಸ್ತೆಗುಂಡಿ ಮುಚ್ಚುವುದನ್ನು ಕಲಿತುಕೊಂಡು, ಪ್ರಾಕ್ಟೀಸ್ ಮಾಡಿ, ಗುಂಡಿ ಮುಚ್ಚೋ ಹೊತ್ತಿಗೆ ಅದೆಷ್ಟು ಜನರು ಗುಂಡಿಯಲ್ಲಿ ಬಿದ್ದು ಶಾಶ್ವತ ಗುಂಡಿ ಸೇರುತ್ತಾರೋ ಅನ್ನುವ ಭಯ ಕಾಡುತ್ತಿದೆ.

ಪ್ರತಿವರ್ಷ ಗುಂಡಿ ಮುಚ್ಚುತ್ತಲೇ ಬಂದಿದ್ದರೂ, ಮಳೆಗಾಲದಲ್ಲಿ ಪುನಃ ಇಂತಹ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕಾಲಹರಣ ಮಾಡುವುದು ಬೇಕಾ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ.

26
Image Credit : Asianet News

ನಗರದಲ್ಲಿನ ರಸ್ತೆ ಗುಂಡಿಗಳನ್ನು ಪರಿಣಾಮಕಾರಿಯಾಗಿ ಮುಚ್ಚುವ ಸಲುವಾಗಿ ಪುಟ್ಟಣ ಚೆಟ್ಟಿ ಪುರಭವನದಲ್ಲಿ (ಟೌನ್‌ಹಾಲ) ಮಂಗಳವಾರ ಬಿಬಿಎಂಪಿ ಇಂಜಿನಿಯರ್‌ಗಳಿಗೆ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. 

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದ್ದರೂ, ಮಳೆಗಾಲದಲ್ಲಿ ಗುಂಡಿ ಮುಚ್ಚಲು ಸಮಸ್ಯೆ ಆಗುತ್ತಿದೆ. ಹೀಗಾಗಿ, ಮಳೆ ಬೀಳುವ ಸಮಯದಲ್ಲಿ ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಿದರು.

Related Articles

Related image1
Bengaluru Potholes: ಬೆಂಗಳೂರು ನಗರದಲ್ಲಿರೋದು ಕೇವಲ 4324 ರಸ್ತೆಗುಂಡಿಗಳಂತೆ; ಬಿಬಿಎಂಪಿ ಮತ್ತೆ ಸುಳ್ಳು ಲೆಕ್ಕ?
Related image2
ಬೆಂಗಳೂರಿನಲ್ಲಿ ಪಿಓಪಿ ಗಣೇಶ ಮೂರ್ತಿ ತಯಾರಕರ ಮೇಲೆ ಕೇಸ್; ಬಿಬಿಎಂಪಿ ಮುಖ್ಯ ಆಯುಕ್ತರ ಎಚ್ಚರಿಕೆ!
36
Image Credit : Asianet News

ರಸ್ತೆ ಗುಂಡಿಗಳನ್ನು ಯಾವ ರೀತಿ ಮುಚ್ಚಬೇಕು ಎಂಬುದರ ಕುರಿತು ಈಗಾಗಲೇ ತರಬೇತಿ ಮೂಲಕ ಮಾಹಿತಿ ನೀಡಲಾಗಿದ್ದು, ಆಯಾ ವಲಯಗಳಲ್ಲಿ ಯೋಜನೆ ರೂಪಿಸಿಕೊಂಡು ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಜೊತೆಗೆ ಅಗತ್ಯವಿರುವ ಕಡೆ ಜೆಟ್ ಪ್ಯಾಚರ್ ಯಂತ್ರವನ್ನು ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರದಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು. ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಒ.ಪಿ)ದ ಪ್ರಕಾರ ರಸ್ತೆ ಗುಂಡಿಗಳನ್ನು ಮುಚ್ಚಿ, ಗುಣಮಟ್ಟ ಪರಿಶೀಲನೆ ಮಾಡಬೇಕು ಎಂದು ತಿಳಿಸಿದರು.

46
Image Credit : Asianet News

ಗುಂಡಿ ಮುಚ್ಚುವ ಕಾರ್ಯ ಪರಿಶೀಲಿಸಿ:

ವಲಯ ಆಯುಕ್ತರುಗಳು, ವಲಯ ಜಂಟಿ ಆಯುಕ್ತರುಗಳು, ಮುಖ್ಯ ಅಭಿಯಂತರರು ರಸ್ತೆ ಗುಂಡಿಗಳುನ್ನು ಮುಚ್ಚು ವೇಳೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಜೊತೆಗೆ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಜೊತೆಗೆ, ಸ್ವಚ್ಛತಾ ಕಾರ್ಯ ಪರಿಣಾಮಕಾರಿಯಾಗಿ ನಡೆಯಬೇಕು. ಈ ಸಂಬಂಧ ಆಯಾ ವಲಯಗಳಲ್ಲಿ ವಾರ್ಡ್‌ವಾರು ಒಂದು ವಾರದದಲ್ಲಿ ಸ್ವಚ್ಛತೆ ಮಾಡುವ ಸ್ಥಳಗಳ ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕು. ಆ ವೇಳಾಪಟ್ಟಿಯ ಅನುಸಾರ ಶಿಲ್ಟ್ & ಟ್ರ್ಯಾಕ್ಟರ್ ಗಳ ಮೂಲಕ ಪಾದಚಾರಿ ಮಾರ್ಗ ಸ್ವಚ್ಛತೆ, ತ್ಯಾಜ್ಯ, ಕಟ್ಟಡ ಭಗ್ನಾವಶೇಷಗಳನ್ನು ಬೆಳಗ್ಗೆಯಿಂದಲೇ ಸ್ವಚ್ಛತಾ ಕಾರ್ಯವನ್ನು ಪ್ರಾರಂಭಿಸಲು ಸೂಚಿಸಿದರು.

56
Image Credit : Asianet News

ಪ್ರಾತ್ಯಕ್ಷಿಕೆ ಮೂಲಕ ತರಬೇತಿ:

ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಅನುಸರಿಸಬೇಕಾದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಒ.ಪಿ) ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಎಲ್ಲಾ ಇಂಜಿನಿಯರ್ ಗಳಿಗೆ ಸಮಗ್ರ ಮಾಹಿತಿಯನ್ನು ನೀಡಲಾಯಿತು. ರಸ್ತೆ ಗುಂಡಿ ಮುಚ್ಚುವ ವೇಳೆ 4 ಮೂಲೆಗಳನ್ನು ಕತ್ತರಿಸುವುದು, ಧೂಳನ್ನು ಸ್ವಚ್ಛಗೊಳಿಸಿ, ಗಾಳಿ ಸ್ಪ್ರೇ ಮಾಡಿ, ಟ್ಯಾಕ್ ಕೋಟ್, ಬಿಟಮಿನ್ ಹಾಕಿದ ಬಳಿಕ ರೋಲಿಂಗ್ ಮಾಡಿ ಗುಂಡಿಗಳನ್ನು ಮುಚ್ಚಲು ಸೂಚಿಸಿದರು.

66
Image Credit : Asianet News

ಈ ವೇಳೆ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಕರೀಗೌಡ, ವಲಯ ಆಯುಕ್ತರಾದ ಸತೀಶ್, ರಮೇಶ್, ಜಂಟಿ ಆಯುಕ್ತರಾದ ಸಂಗಪ್ಪ, ದಾಕ್ಷಾಯಿಣಿ, ಎಲ್ಲಾ ವಲಯ ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ಬಿಬಿಎಂಪಿ
ಕರ್ನಾಟಕ ಸುದ್ದಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved