MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಗಾಂಜಾ ಪೆಡ್ಲರ್‌ ಬಂಧಿಸಿ ಕರೆತರುವಾಗ ಪಿಎಸ್‌ಐಗೆ ಗುದ್ದಿ ಹೋದ ಲಾರಿ; ಚಿಕಿತ್ಸೆ ಫಲಿಸದೇ ಸಾವು

ಗಾಂಜಾ ಪೆಡ್ಲರ್‌ ಬಂಧಿಸಿ ಕರೆತರುವಾಗ ಪಿಎಸ್‌ಐಗೆ ಗುದ್ದಿ ಹೋದ ಲಾರಿ; ಚಿಕಿತ್ಸೆ ಫಲಿಸದೇ ಸಾವು

ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಕರೆತರುವಾಗ ಪಿಎಸ್ಐ ಮೆಹಬೂಬ್ ಹಿಟ್ ಅಂಡ್ ರನ್‌ಗೆ ಬಲಿಯಾಗಿದ್ದಾರೆ. ಚಂದಾಪುರ ಬಳಿ ಕಾರು ಕೆಟ್ಟುನಿಂತಾಗ ಲಾರಿ ಡಿಕ್ಕಿ ಹೊಡೆದಿದೆ. ಆರೋಪಿಗಳು ಪರಾರಿಯಾಗಿದ್ದಾರೆ.

1 Min read
Author : Sathish Kumar KH
Published : Jun 29 2025, 06:48 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಬೆಂಗಳೂರು (ಜೂ. 29): ಗಾಂಜಾ ಪೆಡ್ಲರ್‌ಗಳನ್ನು ವಶಕ್ಕೆ ತೆಗೆದುಕೊಂಡು ಠಾಣೆಗೆ ಕರೆತರುವ ವೇಳೆ ನಡೆದ ಭೀಕರ ಅಪಘಾತದಲ್ಲಿ ಪೊಲೀಸ್ ಉಪನಿರೀಕ್ಷಕ (ಪಿಎಸ್ಐ) ಮೆಹಬೂಬ್ ಗುಡ್ಡಳ್ಳಿ ಹಿಟ್‌‌ಅಂಡ್‌ರನ್‌ಗೆ ಬಲಿಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಬಳಿ ನಡೆದಿದೆ.

26
Image Credit : Asianet News

ಮೃತ ಪಿಎಸ್ಐ ಮೆಹಬೂಬ್ ಕಳೆದ ಎರಡು ವರ್ಷಗಳಿಂದ ಬೆಂಗಳೂರು ದಕ್ಷಿಣ ವಿಭಾಗದ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಜೂನ್ 23 ರಂದು ಗಾಂಜಾ ಪೆಡ್ಲಿಂಗ್‌ನಲ್ಲಿ ತಲಘಟ್ಟಪುರ ಪೊಲೀಸರಿಗೆ ವಾಂಟೆಡ್ ಆಗಿದ್ದ ಇಬ್ಬರು ಆರೋಪಿಗಳು ಹೊಸೂರು ಬಳಿ ಇದ್ದಾರೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಮೆಹಬೂಬ್ ಮತ್ತು ತಂಡ ಅತ್ತಿಬೆಲೆ ಬಳಿ ಇಬ್ಬರನ್ನು ವಶಕ್ಕೆ ಪಡೆದಿದ್ದರು.

Related Articles

Related image1
Nanjangud Accident: ನಂಜನಗೂಡಿನಲ್ಲಿ ಭೀಕರ ಅಪಘಾತ: ದಂಪತಿ ಸೇರಿ ಮೂವರ ಸಾವು!
Related image2
Maddur Fatal Accident: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು: ಐವರ ಪ್ರಾಣ ಉಳಿಸಿದ ವಿದ್ಯುತ್ ಕಡಿತ!
36
Image Credit : Asianet News

ಆರೋಪಿಗಳನ್ನು ತಲಘಟ್ಟಪುರ ಠಾಣೆಗೆ ಕರೆತರುತ್ತಿರುವಾಗ, ಹೊಸೂರು ಮುಖ್ಯ ರಸ್ತೆಯ ಚಂದಾಪುರ ಬಳಿ ಪೊಲೀಸರು ಪ್ರಯಾಣಿಸುತ್ತಿದ್ದ ಕಾರು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದೆ. ಈ ಸಂದರ್ಭ ಪಿಎಸ್ಐ ಮೆಹಬೂಬ್ ಕಾರಿನಿಂದ ಇಳಿದು ಫೋನ್‌ನಲ್ಲಿ ಮಾತಾಡುತ್ತಿದ್ದಾಗ, ವೇಗದಲ್ಲಿ ಬಂದ ಲಾರಿ ಅವರ ಮೇಲೆ ಹರಿದು ಬಂದು ಡಿಕ್ಕಿ ಹೊಡೆದಿದೆ.

46
Image Credit : Asianet News

ಈ ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೆಹಬೂಬ್ ಅವರನ್ನು ತಕ್ಷಣವೇ ಚಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

56
Image Credit : Asianet News

ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪೊಲೀಸ್ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಆಕ್ಸಿಡೆಂಟ್ ಸಮಯದ ಲಾಭ ಪಡೆದ ಆರೋಪಿತ ಗಾಂಜಾ ಪೆಡ್ಲರ್‌ಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

66
Image Credit : Asianet News

ಅಪಘಾತದ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಅಪಘಾತದ ನಂತರ ಲಾರಿ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಲಾರಿ ಚಾಲಕನ ಪತ್ತೆಗಾಗಿ ಪೊಲೀಸರು ಗಂಭೀರ ತನಿಖೆ ಮುಂದುವರೆಸಿದ್ದಾರೆ.

ಪಿಎಸ್ಐ ಮೆಹಬೂಬ್ ಅವರ ಸಾವಿಗೆ ಪೊಲೀಸ್ ಇಲಾಖೆ ಮತ್ತು ಸಹೋದ್ಯೋಗಿಗಳು ದುಃಖ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ಕ್ರೈಮ್ ನ್ಯೂಸ್
ಅಪಘಾತ

Latest Videos
Recommended Stories
Recommended image1
ನ್ಯಾಯಾಂಗ ಅಪರಾಧ ದ್ವೇಷಿಸಬೇಕೇ ವಿನಃ ಅಪರಾಧಿಯನ್ನಲ್ಲ: ಹೈಕೋರ್ಟ್
Recommended image2
ರಾಜ್ಯದಲ್ಲಿ ಒಣಹವೆ ನಡುವೆಯೂ ಮಳೆ; ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ವರುಣನ ಅಬ್ಬರ
Recommended image3
Karnataka News Live: ಲೂಡೊ ಕಾಯಿ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು; ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕೋನ್ ಪತ್ತೆ
Related Stories
Recommended image1
Nanjangud Accident: ನಂಜನಗೂಡಿನಲ್ಲಿ ಭೀಕರ ಅಪಘಾತ: ದಂಪತಿ ಸೇರಿ ಮೂವರ ಸಾವು!
Recommended image2
Maddur Fatal Accident: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು: ಐವರ ಪ್ರಾಣ ಉಳಿಸಿದ ವಿದ್ಯುತ್ ಕಡಿತ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved