MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಬೆಂಗಳೂರು: ಚಿನ್ನಯ್ಯನಪಾಳ್ಯ ಭೀಕರ ಸ್ಫೋಟಕ್ಕೆ ನೆಲಸಮವಾದ 10 ಮನೆಗಳು! ಬ್ಲಾಸ್ಟ್ ಬಗ್ಗೆ ತೀವ್ರ ಅನುಮಾನ

ಬೆಂಗಳೂರು: ಚಿನ್ನಯ್ಯನಪಾಳ್ಯ ಭೀಕರ ಸ್ಫೋಟಕ್ಕೆ ನೆಲಸಮವಾದ 10 ಮನೆಗಳು! ಬ್ಲಾಸ್ಟ್ ಬಗ್ಗೆ ತೀವ್ರ ಅನುಮಾನ

ಬೆಂಗಳೂರಿನ ಚಿನ್ನಯ್ಯನಪಾಳ್ಯದಲ್ಲಿ ಭೀಕರ ಸ್ಫೋಟ ಸಂಭವಿಸಿ ಒಂದು ಮಗು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಫೋಟದ ಕಾರಣ ಇನ್ನೂ ನಿಗೂಢವಾಗಿದ್ದು, ತನಿಖೆ ಮುಂದುವರಿದಿದೆ. ಸ್ಥಳೀಯರು ಸಿಲಿಂಡರ್ ಸ್ಫೋಟವಲ್ಲ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

3 Min read
Gowthami K
Published : Aug 15 2025, 12:43 PM IST
Share this Photo Gallery
  • FB
  • TW
  • Linkdin
  • Whatsapp
19
Image Credit : Asianet News

ಬೆಂಗಳೂರು: ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಲ್ಸನ್ ಗಾರ್ಡನ್‌ ಚಿನ್ನಯ್ಯನಪಾಳ್ಯದಲ್ಲಿ ಇಂದು ಬೆಳಿಗ್ಗೆ ಭಾರೀ ಸ್ಫೋಟ ಸಂಭವಿಸಿ ಒಂದು ಮಗು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಬೆಳಿಗ್ಗೆ 7.30 ರಿಂದ 8 ಗಂಟೆಯ ನಡುವೆ ಈ ಘಟನೆ ನಡೆದಿದ್ದು, ಸ್ಫೋಟದ ರಭಸಕ್ಕೆ ಕನಿಷ್ಠ 10 ಮನೆಗಳು ಹಾನಿಗೊಂಡಿವೆ, ಕೆಲವು ಮನೆಗಳು ಸಂಪೂರ್ಣವಾಗಿ ನೆಲಸಮವಾಗಿದೆ. ಈ ಭೀಕರ ಸ್ಫೋಟದ ಬಗ್ಗೆ ಭಾರೀ ಅನುಮಾನ ವ್ಯಕ್ತವಾಗಿದ್ದು, ಇದು ಸಿಲಿಂಡರ್ ಸ್ಟೋಟವಲ್ಲ ಈ ಬಗ್ಗೆ ತನಿಖೆ ನಡೆಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

29
Image Credit : Asianet News

ಸ್ಫೋಟದ ತೀವ್ರತೆಗೆ ಹಲವು ಮನೆಗಳ ಗೋಡೆ, ಛಾವಣಿ ಹಾಗೂ ಕಿಟಕಿಗಳು ಹಾರಿ ಬಿದ್ದಿವೆ. ಮೊದಲ ಮಹಡಿಯಲ್ಲಿದ್ದ ಕಸ್ತೂರಿ (35) ಹಾಗೂ ಆಕೆಯ ಮಗಳು ಕಾಯಾಲ (8) ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. 50 ವರ್ಷದ ಸರಸಮ್ಮಗೆ ತಲೆಗೆ ತೀವ್ರ ಪೆಟ್ಟು ತಗುಲಿದೆ. ಶಬ್ರಿನ್ ಬಾನು (35), ಅವರ ಗಂಡ ಅಮಾನುಲ್ಲಾ ಹಾಗೂ ಮಕ್ಕಳಾದ ಲತೀಫ್ (15), ಫಾತೀಮಾ (8) ಗಾಯಗೊಂಡಿದ್ದಾರೆ. 10 ವರ್ಷದ ಮುಬಾರಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

39
Image Credit : Asianet News

ಗಾಯಾಳುಗಳ ಪಟ್ಟಿ

ಕಸ್ತೂರಮ್ಮ (35) – ವಿಕ್ಟೋರಿಯಾ ಆಸ್ಪತ್ರೆ, ಸುಟ್ಟಗಾಯ ವಿಭಾಗ

ಕಾಯಾಲ (8) – ವಿಕ್ಟೋರಿಯಾ ಆಸ್ಪತ್ರೆ, ಸುಟ್ಟಗಾಯ ವಿಭಾಗ

ಸರಸಮ್ಮ (50) – ಸಂಜಯ್ ಗಾಂಧಿ ಆಸ್ಪತ್ರೆ

ಶಬ್ರಿನ್ ಬಾನು (35) – ಸಂಜಯ್ ಗಾಂಧಿ ಆಸ್ಪತ್ರೆ

ಫಾತೀಮಾ (8) – ಸಂಜಯ್ ಗಾಂಧಿ ಆಸ್ಪತ್ರೆ

ಸುಬ್ರಹ್ಮಣಿ (62) – ಅಗಡಿ ಆಸ್ಪತ್ರೆ

ಶೇಖ್ ನಜೀಬ್ ಉಲ್ಲಾ (37) – ನಿಮ್ಹಾನ್ಸ್

ಮುಬಾರಕ್ (10) – ಮೃತ

49
Image Credit : Asianet News

ಸ್ಥಳೀಯರ ಪ್ರಕಾರ, ಆಗಸ್ಟ್ 14ರಂದು ಕಸ್ತೂರಿ ಎಂಬಾಕೆ ಹೋಟೆಲ್‌ನಿಂದ ಟಿಫಿನ್ ತರಿಸಿಕೊಂಡಾಗ “ಸಿಲಿಂಡರ್ ಖಾಲಿಯಾಗಿದೆ” ಎಂದು ಹೇಳಿದ್ದಳು. ಇಂದಿನ ಬೆಳಿಗ್ಗೆ 8 ಗಂಟೆ ಹೊತ್ತಿಗೆ ಆಕೆಯ ಮನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಕೆಲವು ಸ್ಥಳೀಯರು ಇದು ಗ್ಯಾಸ್ ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಹೇಳಿದರೆ, ಇತರರು ಸ್ಫೋಟದ ಬಳಿಕ ಗ್ಯಾಸ್ ವಾಸನೆ ಬರದ ಕಾರಣ ತೀವ್ರ ಅನುಮಾನ ವ್ಯಕ್ತಪಡಿಸಿದ್ದಾರೆ.

59
Image Credit : Asianet News

ಸ್ಫೋಟದ ನಂತರ ಸ್ಥಳಕ್ಕೆ ಅಗ್ನಿಶಾಮಕ ದಳ, ಆಡುಗೋಡಿ ಠಾಣೆ ಪೊಲೀಸರು, ಸೋಕೋ ತಂಡ, ಬಾಂಬ್ ಡಿಸ್ಪೋಸಲ್ ಸ್ಕ್ವಾಡ್ ಮತ್ತು NDRF ತಂಡ ಧಾವಿಸಿ, ಅವಶೇಷಗಳೊಳಗೆ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ, ಆಡುಗೋಡಿ ಇನ್ಸ್‌ಪೆಕ್ಟರ್ ರವಿಕುಮಾರ್, ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಸ್ಥಳೀಯ ಶಾಸಕ ಉದಯ್ ಗರುಡಾಚಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

69
Image Credit : Asianet News

ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು, “ಘಟನೆಯಲ್ಲಿ ಒಂದು ಮಗು ಸಾವನ್ನಪ್ಪಿದೆ. ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಒಟ್ಟು ಎಂಟು ಜನರಿಗೆ ಗಾಯಗಳಾಗಿದ್ದು, ಐದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇಲ್ ನೋಟಕ್ಕೆ ಆರು ರಿಂದ ಏಳು ಮನೆ ಹಾನಿಯಾಗಿದೆ. ಸ್ಫೋಟದ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರಿದಿದೆ” ಎಂದು ಹೇಳಿದರು.

ಸ್ಥಳೀಯ ಶಾಸಕ ಉದಯ್ ಗರುಡಾಚಾರ್ ಅವರು, “ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ, ಎಂಟು ಜನರಿಗೆ ಗಾಯವಾಗಿದೆ. ಸ್ಥಳೀಯರು ಸಿಲಿಂಡರ್ ಸ್ಫೋಟವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನಿಖರ ಕಾರಣ ತನಿಖೆಯ ಬಳಿಕ ಗೊತ್ತಾಗಲಿದೆ” ಎಂದು ಹೇಳಿದರು.

79
Image Credit : Asianet News

ಚಿನ್ನಯ್ಯನಪಾಳ್ಯದ ನಿವಾಸಿ ಅಬೀಬ್, “ಬೆಳಿಗ್ಗೆ 7.30ಕ್ಕೆ ಭಾರೀ ಶಬ್ಧ ಕೇಳಿಸಿತು. ಸ್ಥಳಕ್ಕೆ ಬಂದು ನೋಡಿದಾಗ ಮನೆಗಳು ನೆಲಸಮವಾಗಿದ್ದವು. ಅಮಾನುಲ್ಲಾ ಕುಟುಂಬ ನನಗೆ ವರ್ಷಗಳಿಂದ ಪರಿಚಿತ. ಮುಬಾರಕ್ ಪ್ರತೀ ಶುಕ್ರವಾರ ಮಸೀದಿಗೆ ಹೋಗುತ್ತಿದ್ದ. ಇಂದು ಅವನು ಇಲ್ಲ ಎನ್ನುವುದು ತುಂಬಾ ದುಃಖಕರ” ಎಂದು ಕಣ್ಣೀರಿಟ್ಟು ಹೇಳಿದರು. ಇನ್ನೊಬ್ಬ ಸ್ಥಳೀಯ ಸಯ್ಯದ್ ಅಸಾದುಲ್ಲಾ, “ಸಿಲಿಂಡರ್ ಸ್ಫೋಟವಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ, ಆದರೆ ಗ್ಯಾಸ್ ವಾಸನೆ ಕಾಣಿಸಲಿಲ್ಲ. ಹೀಗಾಗಿ ನಿಖರ ಕಾರಣ ತಿಳಿದಿಲ್ಲ” ಎಂದರು.

89
Image Credit : Asianet News

ಗಾಯಾಳುಗಳಲ್ಲಿ ಇಬ್ಬರು ಮಕ್ಕಳು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬ ಮಗು ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಇನ್ನೊಬ್ಬ ಮಗು ಗೋಡೆ ಬಿದ್ದು ಕೈ ಕಾಲು ಮುರಿದುಕೊಂಡಿದೆ. ಅವಶ್ಯಕತೆ ಹಿನ್ನೆಲೆಯಲ್ಲಿ ಕೆಲವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸ್ಫೋಟದ ಕಾರಣ ಪತ್ತೆಹಚ್ಚಲು ತಜ್ಞರ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸ್ ಇಲಾಖೆಯ ತನಿಖೆ ಮುಂದುವರಿದಿದೆ.

99
Image Credit : Asianet News

ಸ್ಫೋಟದ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಗ್ಯಾಸ್ ಸಿಲಿಂಡರ್ ಸ್ಫೋಟವೇ ಕಾರಣವೇ ಅಥವಾ ಬೇರೆ ಕಾರಣ ಇದೆಯೇ ಎಂಬುದನ್ನು ಪೊಲೀಸರು ಹಾಗೂ ತಜ್ಞರ ತಂಡ ಪರಿಶೀಲಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಜಾರಿಯಲ್ಲಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಬೆಂಗಳೂರು
ಕ್ರೈಮ್ ನ್ಯೂಸ್
ಸಿದ್ದರಾಮಯ್ಯ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved