MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಫಸ್ಟ್ ಡೇ, ಫಸ್ಟ್ ಶೋ ನಿಂದಲೇ ಹೌಸ್ ಫುಲ್! ಸಂಸದ ತೇಜಸ್ವಿ ಸೂರ್ಯ ಜೊತೆ ಸೆಲ್ಫಿಗೆ ಮುಗಿಬಿದ್ದ ಜನತೆ!

ಫಸ್ಟ್ ಡೇ, ಫಸ್ಟ್ ಶೋ ನಿಂದಲೇ ಹೌಸ್ ಫುಲ್! ಸಂಸದ ತೇಜಸ್ವಿ ಸೂರ್ಯ ಜೊತೆ ಸೆಲ್ಫಿಗೆ ಮುಗಿಬಿದ್ದ ಜನತೆ!

ಬೆಂಗಳೂರಿನಲ್ಲಿ ಬಿಡುಗಡೆಯಾದ ಮೊದಲ ದಿನವೇ ಹೌಸ್‌ಫುಲ್ ಆಗಿರುವುದು ಭಾರೀ ವಿಶೇಷ. ಕುಳಿತುಕೊಳ್ಳುವುದಕ್ಕೂ ಆಸನ ಇಲ್ಲದ ರೀತಿಯಲ್ಲಿ ಜನರ ನೂಕು ನುಗ್ಗಲು ಆಗುವುದನ್ನು ನೋಡಿ ಸ್ವತಃ ಸಂಸದ ತೇಜಸ್ವಿ ಸೂರ್ಯು ಸಂತಸಗೊಂಡಿದ್ದಾರೆ. ಈ ಬಗ್ಗೆ ಅವರೇ ಫಸ್ಟ್ ಡೇ ಫಸ್ಟ್ ಶೋ ಹೌಸ್ ಫುಲ್ ಎಂದು ಬರೆದುಕೊಂಡಿದ್ದಾರೆ.

2 Min read
Sathish Kumar KH
Published : Aug 12 2025, 11:22 AM IST| Updated : Aug 12 2025, 11:34 AM IST
Share this Photo Gallery
  • FB
  • TW
  • Linkdin
  • Whatsapp
16
Image Credit : FB

ಅರೆರೇ ಇದೇನಪ್ಪಾ..! ಸಂಸದ ತೇಜಸ್ವಿ ಸೂರ್ಯ ಸಿನಿಮಾ ಹೀರೋ ಆಗಿಬಿಟ್ರಾ ಎಂದು ಗಾಬರಿ ಆಗಬೇಡಿ. ಅವರು ಭಾನುವಾರ ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಂಡು, ಸೋಮವಾರ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಂಡ ಹಳದಿ ಮಾರ್ಗದ ಮೆಟ್ರೋ ಸಂಚಾರದ ಬಗ್ಗೆ ಫಸ್ಟ್ ಡೇ ಫಸ್ಟ್ ಶೋ ಹೌಸ್‌ಫುಲ್ ಎಂದು ಬರೆದುಕೊಂಡಿದ್ದಾರೆ. 

ಕೋವಿಡ್ ಹಾಗೂ ಇತರೆ ಕಾರಣಗಳಿಂದ ನಿರೀಕ್ಷೆಗಿಂತ ಕೊಂಚ ತಡವಾಗಿ ಆರಂಭವಾದರೂ ಹಳದಿ ಮಾರ್ಗದ ಮೆಟ್ರೋಗೆ ಜನರ ಸಂಚಾರ ಮೊದಲ ದಿನದಿಂದಲೇ ಫುಲ್‌ ರಶ್ ಆಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಕೆಲವು ಫೋಟೋ ಹಂಚಿಕೊಂಡು, ಒಂದಷ್ಟು ಸಂತಸದ ಕ್ಷಣಗಳ ಮಾಹಿತಿಯನ್ನು ಅಕ್ಷರಕ್ಕಿಳಿಸಿದ್ದಾರೆ.

26
Image Credit : FB

ತೇಜಸ್ವಿ ಸೂರ್ಯ ಬರೆದುಕೊಂಡಿದ್ದೇನು?

'ಇಂದು, ನಮ್ಮ ಮೆಟ್ರೋ ಹಳದಿ ಮಾರ್ಗ ಸಂಚಾರದ ಮೊದಲ ದಿನದಂದು, ಸಾವಿರಾರು ಪ್ರಯಾಣಿಕರೊಂದಿಗೆ ನಾನೂ ಪ್ರಯಾಣಿಸಿದೆ. ವಿದ್ಯಾರ್ಥಿಗಳು, ಐಟಿ ವೃತ್ತಿಪರರು, ಬೊಮ್ಮಸಂದ್ರದ ಕಾರ್ಖಾನೆಯ ಕಾರ್ಮಿಕರು, ಗಾರ್ಮೆಂಟ್ಸ್ ಕಾರ್ಮಿಕರು ಮತ್ತು ಇತರ ಸಾವಿರಾರು ಜನ ಅಲ್ಲಿ ನಮ್ಮೊಂದಿಗೆ ಪ್ರಯಾಣಿಸಿದ್ದು, ನೂತನ ಮಾರ್ಗದಲ್ಲಿನ ಅವರ ಪ್ರಯಾಣ ಅತ್ಯಂತ ಖುಷಿ ಮೂಡಿಸಿದೆ. ಬಹುದಿನಗಳಿಂದ ಕಾಯುತ್ತಿದ್ದ ಈ ಮಾರ್ಗದಲ್ಲಿನ ಸಂಚಾರ ಆರಂಭವಾಗಿರುವುದು ಹೆಚ್ಚಿನವರಲ್ಲಿ ಖುಷಿ ತಂದಿದ್ದು ವಿಶೇಷ.

Related Articles

Related image1
ಮೆಟ್ರೋ ಹಳದಿ ಮಾರ್ಗಕ್ಕೆ ಫಸ್ಟ್ ಡೇ 56000 ಜನ!
Related image2
ಮೋದಿ ಉದ್ಘಾಟಿಸಿದ ಹಳದಿ ಮೆಟ್ರೋ ನಾಳೆಯಿಂದ ಸಂಚಾರ, ಟಿಕೆಟ್ ದರ,ರೈಲು ವೇಳಾಪಟ್ಟಿ
36
Image Credit : FB

ದೈನಂದಿನ ಪ್ರಯಾಣವು ಈ ಹಿಂದೆ ಈ ಒಂದು ಮಾರ್ಗದಲ್ಲಿ ಎರಡು ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು, ಈಗ ಕೇವಲ 35 ನಿಮಿಷಗಳಲ್ಲಿ ತಲುಪಬಹುದು ಎಂದು ಹಲವರು ನನ್ನೊಂದಿಗೆ ಸಂತೋಷ ಹಂಚಿಕೊಂಡಿದ್ದಾರೆ. ಉಳಿಸಿದ ಸಮಯದಲ್ಲಿ ಅವರು ಏನು ಮಾಡುತ್ತಾರೆ ಎಂದು ನಾನು ಕೇಳಿದಾಗ, ಅವರ ಉತ್ತರಗಳು ಸ್ಪೂರ್ತಿದಾಯಕವಾಗಿದ್ದವು, ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವುದು, ಮಕ್ಕಳಿಗೆ ಪಾಠ ಮಾಡಲು ಸಹಾಯ ಮಾಡುವುದು, ಆರೋಗ್ಯದ ಕಡೆ ಗಮನಹರಿಸುವುದು, ಅಥವಾ ಕಚೇರಿಯಲ್ಲಿ ಇನ್ನಷ್ಟು ಕೆಲಸ ಮಾಡುವುದು.

46
Image Credit : FB

ಪ್ರತಿಯೊಬ್ಬರ ಉತ್ತರದಲ್ಲಿ, ಉತ್ತಮ ಜೀವನಮಟ್ಟದ ಆಶಯವಿತ್ತು. ಹಲವಾರು ಪ್ರಯಾಣಿಕರು ತಮ್ಮ ಖಾಸಗಿ ವಾಹನಗಳನ್ನು ಬಿಟ್ಟು ಸಂತೋಷದಿಂದ ಮೆಟ್ರೋದಲ್ಲಿ ಪ್ರಯಾಣಿಸುವುದಾಗಿ ತಿಳಿಸಿದ್ದು, ಸಾರ್ವಜನಿಕ ಸಾರಿಗೆಯು ಆರಾಮದಾಯಕ, ವಿಶ್ವಾಸಾರ್ಹ ಮತ್ತು ಕೈಗೆಟುಕುವಂತಿದ್ದರೆ, ಜನರು ಅದನ್ನು ತಮ್ಮ ಮೊದಲ ಆಯ್ಕೆಯಾಗಿ ಸ್ವೀಕರಿಸುತ್ತಾರೆ ಎಂಬುದಕ್ಕೆ ಇದು ಸ್ಪಷ್ಟ ಸಂಕೇತವಾಗಿದೆ. ಹೆಚ್ಚು ಮೆಟ್ರೋ ಸೇವೆಗಳನ್ನು ಒದಗಿಸಬೇಕೆಂಬುದು ಒಂದು ಸಾಮಾನ್ಯ ಕೋರಿಕೆಯಾಗಿತ್ತು. ಈಗಾಗಲೇ ಈ ಕೆಲಸ ಮಾಡುತ್ತಿದ್ದೇವೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ.

56
Image Credit : FB

ನಾನು ಟಿಟಾಗಢ್‌ನ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ್ದು, ಅಕ್ಟೋಬರ್‌ನಿಂದ ಪ್ರತಿ ತಿಂಗಳು ಎರಡು ಹೊಸ ರೈಲು ಸೆಟ್‌ಗಳನ್ನು ತಲುಪಿಸಲಾಗುವುದು ಮತ್ತು ಈ ತಿಂಗಳ ಅಂತ್ಯದ ವೇಳೆಗೆ ಒಂದು ಹೆಚ್ಚುವರಿ ರೈಲು ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ದೃಢಪಡಿಸಿರುತ್ತಾರೆ. ಆರ್.ವಿ. ರಸ್ತೆ ನಿಲ್ದಾಣದಲ್ಲಿ ಜನಸಂದಣಿಯನ್ನು ಗಮನಿಸಿ, ಉತ್ತಮ ಪ್ರಯಾಣಿಕರ ಸಂಚಾರಕ್ಕಾಗಿ ತಕ್ಷಣವೇ ಸ್ಟೀಲ್ ಬ್ಯಾರಿಕೇಡ್‌ಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ. 

ಜನರಲ್ಲಿ ಇಂತಹ ಉತ್ಸಾಹ, ನಿರಾಳತೆ ಮತ್ತು ಸಂತೋಷವನ್ನು ನೋಡುವುದು ವೈಯಕ್ತಿಕವಾಗಿಯೂ ನನಗೆ ಸಂತಸ ತಂದಿದೆ. ಜನರಲ್ಲಿನ ಸಂತೃಪ್ತಿ ನಿಜಕ್ಕೂ ಪ್ರೇರಣಾದಾಯಿಯಾಗಿದ್ದು, ಜನರ ಸ್ಪಂದನೆ ಗಮನಿಸಿದರೆ, ಈ ರೀತಿಯ ಕಾರ್ಯಗಳು ನಮ್ಮಲ್ಲಿಯೂ ಇನ್ನಷ್ಟು ಹುಮ್ಮಸ್ಸು ತರಲಿವೆ' ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

66
Image Credit : FB

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿ ಹಳದಿ ಮಾರ್ಗದ ಮೆಟ್ರೋಗೆ ಚಾಲನೆ ನೀಡಿದ್ದರು. ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಂಸದರಾದ ತೇಜಸ್ವಿ ಸೂರ್ಯ, ಡಾ.ಸಿ.ಎನ್. ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ತೇಜಸ್ವಿ ಸೂರ್ಯ
ಬಿಎಂಆರ್‌ಸಿಎಲ್
ಬೆಂಗಳೂರು ಸಂಚಾರ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved