- Home
- News
- State
- ಇದ್ದರೆ ಸಿದ್ದರಾಮಯ್ಯನಂಥ ರಾಜನಿರಬೇಕು..., ಸಿಎಂ ಆಗಿ ಮುಂದುವರಿಯುವಂತೆ ಆಶೀರ್ವಾದಿಸಿದ ಬೋವಿ ಶ್ರೀಗಳು!
ಇದ್ದರೆ ಸಿದ್ದರಾಮಯ್ಯನಂಥ ರಾಜನಿರಬೇಕು..., ಸಿಎಂ ಆಗಿ ಮುಂದುವರಿಯುವಂತೆ ಆಶೀರ್ವಾದಿಸಿದ ಬೋವಿ ಶ್ರೀಗಳು!
'ಇದ್ದರೆ ಸಿದ್ದರಾಮಯ್ಯನಂತೆ ರಾಜನಿರಬೇಕು, ನಿರಂಜನಾನಂದಪುರಿ ಸ್ವಾಮೀಜಿಯವರಂಥ ರಾಜಗುರು ಇರಬೇಕು' ಎಂದು ಬೋವಿ ಪೀಠಾಧಿಪತಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹಾಡಿಹೊಗಳಿದರು.

ಹರಿಹರ ಜಿಲ್ಲಾ ಕುರುಬ ಸಮಾಜ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ 537ನೇ ಕನಕದಾಸರ ಜಯಂತ್ಯುತ್ಸವವನ್ನು ಉದ್ಘಾಟಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀಗಳು, ಕುರುಬ ಸಮುದಾಯ ಮತ್ತು ಅಹಿಂದ ಸಮುದಾಯದಿಂದ ಸಿದ್ದರಾಮಯ್ಯ ಶಕ್ತಿ ಪ್ರದರ್ಶಿಸುತ್ತಿದ್ದಾರೆ. ಅನ್ನ ನೀಡಿದಾತನಿಗೆ ಅಧಿಕಾರ ಯಾವಾಗಲೂ ಇರಬೇಕು, ಆಗ ಮಾತ್ರ ನಾವೆಲ್ಲ ನೆಮ್ಮದಿಯಿಂದ ಇರಲು ಸಾಧ್ಯ
ಅನ್ನದಾತೋ ನನ್ನು ಬದಲಿಸಿ ನಾವು ಅಧಿಕಾರಭವೋ ಎಂದು ಹೇಳಬೇಕು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಮುಂದೆಯೂ ಅಧಿಕಾರದಲ್ಲಿ ಮುಂದುವರಿಯಲಿ ಎಂದರು.
ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಡೆದಿರುವ ಹೊತ್ತಲ್ಲಿ ಬೋವಿ ಗುರುಪೀಠದ ಶ್ರೀಗಳು ಸಿಎಂ ಸಿದ್ದರಾಮಯ್ಯನವರು ಮುಂದಿನ ಅವಧಿವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದ ಆಶೀರ್ವಾದಿಸಿರುವುದು ವಿಶೇಷ;
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ