MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಗಾಂಧಿ ಕುಟುಂಬದ 3 ತಲೆಮಾರಿನೊಂದಿಗೆ ಬಿ.ಕೆ. ಹರಿಪ್ರಸಾದ್; ವಿದ್ಯಾರ್ಥಿ ನಾಯಕನಿಂದ ಕೆಪಿಸಿಸಿ ಅಧ್ಯಕ್ಷ ಪಟ್ಟದವರೆಗೆ!

ಗಾಂಧಿ ಕುಟುಂಬದ 3 ತಲೆಮಾರಿನೊಂದಿಗೆ ಬಿ.ಕೆ. ಹರಿಪ್ರಸಾದ್; ವಿದ್ಯಾರ್ಥಿ ನಾಯಕನಿಂದ ಕೆಪಿಸಿಸಿ ಅಧ್ಯಕ್ಷ ಪಟ್ಟದವರೆಗೆ!

ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರಮಟ್ಟದ ನಾಯಕರಾಗಿ ಬೆಳೆದ ಅವರ ಐದು ದಶಕಗಳ ರಾಜಕೀಯ ಪಯಣ ಹಾಗೂ ಗಾಂಧಿ ಕುಟುಂಬದೊಂದಿಗಿನ 3 ತಲೆಮಾರಿನ ಸಂಬಂಧದ ಬಗ್ಗೆ ತಿಳಿಯಿರಿ.

3 Min read
Author : Sathish Kumar KH
Published : Jun 03 2026, 09:36 PM IST
Share this Photo Gallery
  • FB
  • TW
  • Linkdin
  • Whatsapp
110
Image Credit : Asianet News

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಸಾರಥಿಯಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ನೇಮಕಗೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ತೆರವಾದ ಈ ಸ್ಥಾನಕ್ಕೆ, ಐದು ದಶಕಗಳ ಕಾಲ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಮುತ್ಸದ್ದಿ ನಾಯಕನನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ದೆಹಲಿ ರಾಜಕಾರಣದಿಂದ ಹಿಡಿದು ಹಳ್ಳಿ ಹಳ್ಳಿಯ ಕಾಂಗ್ರೆಸ್ ಕಾರ್ಯಕರ್ತನವರೆಗೂ ಪರಿಚಿತರಾಗಿರುವ ಹರಿಪ್ರಸಾದ್ ಅವರ ಪಯಣ ಅತ್ಯಂತ ರೋಚಕವಾದುದು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
210
Image Credit : Asianet News

ಜನನ ಮತ್ತು ಶಿಕ್ಷಣ:

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಕೆಂಪಯ್ಯ ಮತ್ತು ತಾಯಿ ಗುಣವತಿ ಕೆ. ಅವರ ಪುತ್ರರಾದ ಇವರು ಬೆಂಗಳೂರಿನಲ್ಲೇ ತಮ್ಮ ವಿದ್ಯಾಭ್ಯಾಸ ಪೂರೈಸಿದರು. ಬಿ.ಕಾಂ ಪದವೀಧರರಾಗಿರುವ ಹರಿಪ್ರಸಾದ್ ಅವರು ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡಿದ್ದರು. ಇವರ ಪತ್ನಿ ಶ್ರೀಮತಿ ಉಷಾ ಮತ್ತು ಇವರಿಗೆ ಒಬ್ಬ ಪುತ್ರಿ ಇದ್ದಾರೆ.

Related Articles

Related image1
ಕೆಪಿಸಿಸಿಗೆ ಹೊಸ ಸಾರಥಿ: ಬಿ.ಕೆ. ಹರಿಪ್ರಸಾದ್ ನೂತನ ರಾಜ್ಯಾಧ್ಯಕ್ಷ; ಅಧಿಕೃತ ಆದೇಶ ಹೊರಡಿಸಿದ ಎಐಸಿಸಿ!
Related image2
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಹೈಕಮಾಂಡ್ ಮಣೆ!
310
Image Credit : Asianet News

ವಿದ್ಯಾರ್ಥಿ ಸಂಘಟನೆಯಿಂದ ಆರಂಭವಾದ ಪಯಣ:

ಹರಿಪ್ರಸಾದ್ ಅವರ ರಾಜಕೀಯ ಜೀವನ ಆರಂಭವಾಗಿದ್ದು 1972ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯತ್ವ ಪಡೆಯುವ ಮೂಲಕ. ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಸದಸ್ಯರಾಗಿ (1973-78), ಎಂಇಇಎಸ್ ಕಾಲೇಜು ಮತ್ತು ಎಸ್‌ಜೆಆರ್‌ಸಿ ಕಾನೂನು ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅವರು ಯುವ ಶಕ್ತಿಯನ್ನು ಸಂಘಟಿಸಿದರು.

410
Image Credit : Asianet News

ಕಾಲೇಜು ಸಂಘಟನೆ ಮತ್ತು ಹೋರಾಟಗಳಿಂದಲೇ 1979-81ರ ಅವಧಿಯಲ್ಲಿ ಅಖಿಲ ಭಾರತ ಎನ್‌ಎಸ್‌ಯುಐ (NSUI) ಪ್ರಧಾನ ಕಾರ್ಯದರ್ಶಿಯಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡರು. ಇದಾದ ನಂತರ ರಾಜಕೀಯದ ಅವಕಾಶಗಳ ಬಾಗಿಲು ತೆರೆದುಕೊಳ್ಳುತ್ತಾ ಹೋದವು.

510
Image Credit : Asianet News

ರಾಷ್ಟ್ರಮಟ್ಟದ ಸಂಘಟನಾ ಚತುರ:

ಕಾಂಗ್ರೆಸ್ ಪಕ್ಷದ ಸಂಘಟನಾತ್ಮಕ ವಿಭಾಗಗಳಲ್ಲಿ ಹರಿಪ್ರಸಾದ್ ಅವರು ನಿರ್ವಹಿಸಿದ ಜವಾಬ್ದಾರಿಗಳು ಅಪಾರ. ಅಖಿಲ ಭಾರತ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಪ್ರಧಾನ ಕಾರ್ಯದರ್ಶಿಯಾಗಿ ದೀರ್ಘಕಾಲ ಕೆಲಸ ಮಾಡಿದ್ದಾರೆ.

610
Image Credit : Asianet News

ವಿಶೇಷವೆಂದರೆ, ಇವರು ದೇಶದ ಸುಮಾರು 18ಕ್ಕೂ ಹೆಚ್ಚು ರಾಜ್ಯಗಳಿಗೆ (ಗುಜರಾತ್, ಹರಿಯಾಣ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ) ಎಐಸಿಸಿ ಉಸ್ತುವಾರಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಹೈಕಮಾಂಡ್‌ನ ಅತ್ಯಂತ ನಂಬಿಕಸ್ತ ನಾಯಕರಲ್ಲಿ ಇವರು ಒಬ್ಬರು.

ಇನ್ನು ಗಾಂಧಿ ಕುಟುಂಬದೊಂದಿಗೆ 3 ತಲೆಮಾರಿನ ಸಂಬಂಧವನ್ನು ಹೊಂದಿದ್ದಾರೆ. ಇಂದಿರಾಗಾಂಧಿ, ರಾಜೀವ್ ಗಾಂಧಿ-ಸೋನಿಯಾ ಗಾಂಧಿ ಹಾಗೂ ಇದೀಗ ರಾಹುಲ್ ಗಾಂಧಿ ಅವರೊಂದಿಗೆ ಉತ್ತಮ ಒಡನಾಟವನ್ನು ಹೊಂದಿದ್ದಾರೆ.

710
Image Credit : Asianet News

ಸಂಸದೀಯ ಪಟುವಾಗಿ ಮಿಂಚು:

ಬಿ.ಕೆ. ಹರಿಪ್ರಸಾದ್ ಅವರು ಕೇವಲ ಸಂಘಟಕರಷ್ಟೇ ಅಲ್ಲ, ಒಬ್ಬ ಸಮರ್ಥ ಸಂಸದೀಯ ಪಟುವೂ ಹೌದು. ಒಟ್ಟು ನಾಲ್ಕು ಬಾರಿ (1990, 2004, 2013, 2014) ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಇವರು, ಸಂಸತ್ತಿನಲ್ಲಿ ರಾಜ್ಯದ ಧ್ವನಿಯಾಗಿ ಕೆಲಸ ಮಾಡಿದ್ದಾರೆ. 

ರಾಸಾಯನಿಕ ಮತ್ತು ರಸಗೊಬ್ಬರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಅನೇಕ ಪ್ರಮುಖ ಸಂಸದೀಯ ಸಮಿತಿಗಳಲ್ಲಿ ಸದಸ್ಯರಾಗಿ ಮಹತ್ವದ ಕೊಡುಗೆ ನೀಡಿದ್ದಾರೆ. 2020ರಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಇವರು, ವಿರೋಧ ಪಕ್ಷದ ನಾಯಕರಾಗಿಯೂ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದರು.

810
Image Credit : Asianet News

ವಿದೇಶಿ ಪ್ರವಾಸ ಮತ್ತು ಅಂತರರಾಷ್ಟ್ರೀಯ ಅನುಭವ:

ಹರಿಪ್ರಸಾದ್ ಅವರ ಜ್ಞಾನ ಮತ್ತು ಅನುಭವ ಕೇವಲ ಭಾರತಕ್ಕೆ ಸೀಮಿತವಾಗಿಲ್ಲ. 1980ರಲ್ಲಿ ಮಾಸ್ಕೋಗೆ ಭೇಟಿ ನೀಡಿದ್ದ ಯುವ ಒಲಿಂಪಿಕ್ ನಿಯೋಗದ ನೇತೃತ್ವ ವಹಿಸಿದ್ದರು. 1989ರಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಧ್ಯಯನ ಪ್ರವಾಸ ತಂಡದ ನೇತೃತ್ವ ವಹಿಸಿದ್ದರು.

2009ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿಯೂ ಭಾಗವಹಿಸಿದ್ದರು. ಜಿನೀವಾ, ಲಂಡನ್ ಮತ್ತು ಕೊರಿಯಾದಂತಹ ದೇಶಗಳಲ್ಲಿ ನಡೆದ ಅಂತರರಾಷ್ಟ್ರೀಯ ಸಮಾವೇಶಗಳಲ್ಲಿ ಪಾಲ್ಗೊಂಡು ಜಾಗತಿಕ ರಾಜಕಾರಣದ ಅರಿವು ಪಡೆದಿದ್ದಾರೆ.

910
Image Credit : Asianet News

ಸಾಮಾಜಿಕ ನ್ಯಾಯದ ಬದ್ಧತೆ:

ಹಿಂದುಳಿದ ವರ್ಗಗಳ ಸಮಿತಿಯ ಸದಸ್ಯರಾಗಿ ಮತ್ತು ಸಾಮಾಜಿಕ ನ್ಯಾಯ ಸಚಿವಾಲಯದ ಸಲಹಾ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿರುವ ಹರಿಪ್ರಸಾದ್ ಅವರಿಗೆ ತಳಮಟ್ಟದ ಜನರ ಸಮಸ್ಯೆಗಳ ಬಗ್ಗೆ ಅಪಾರ ಕಾಳಜಿ ಇದೆ. ಕೊಳಚೆ ನಿರ್ಮೂಲನಾ ಮಂಡಳಿಯ ಅಧ್ಯಕ್ಷರಾಗಿ ಅವರು ಮಾಡಿದ ಕೆಲಸ ಇಂದಿಗೂ ಸ್ಮರಣೀಯ.

1010
Image Credit : Asianet News

ಇದೀಗ ಡಿ.ಕೆ. ಶಿವಕುಮಾರ್ ಅವರಿಂದ ಕೆಪಿಸಿಸಿ ಸಾರಥ್ಯವನ್ನು ವಹಿಸಿಕೊಂಡಿರುವ ಬಿ.ಕೆ. ಹರಿಪ್ರಸಾದ್ ಅವರಿಗೆ ದೊಡ್ಡ ಸವಾಲುಗಳಿವೆ. ಮುಂದಿನ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವುದು, ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವುದು ಮತ್ತು ಎಲ್ಲ ನಾಯಕರನ್ನು ಒಗ್ಗೂಡಿಸಿ ಕೊಂಡು ಹೋಗುವ ಜವಾಬ್ದಾರಿ ಅವರ ಮೇಲಿದೆ. ಐದು ದಶಕಗಳ ರಾಜಕೀಯ ಅನುಭವ ಹೊಂದಿರುವ ಈ 'ಸಂಘಟನಾ ಚತುರ' ಕೆಪಿಸಿಸಿ ಅಧ್ಯಕ್ಷರಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಮತ್ತಷ್ಟು ಬಲಿಷ್ಠಗೊಳಿಸುತ್ತಾರೆ ಎಂಬುದು ಕಾರ್ಯಕರ್ತರ ನಂಬಿಕೆಯಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬಿ.ಕೆ. ಹರಿಪ್ರಸಾದ್
ಡಿ.ಕೆ. ಶಿವಕುಮಾರ್
ರಾಹುಲ್ ಗಾಂಧಿ
ಕಾಂಗ್ರೆಸ್
Latest Videos
Recommended Stories
Recommended image1
ಮನೆ ನಿರ್ಮಾಣ,ಸಂಘಕ್ಕೆ 10 ಲಕ್ಷ ರೂ ಸೇರಿ ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ
Recommended image2
ಕೆಪಿಸಿಸಿಗೆ ಹೊಸ ಸಾರಥಿ: ಬಿ.ಕೆ. ಹರಿಪ್ರಸಾದ್ ನೂತನ ರಾಜ್ಯಾಧ್ಯಕ್ಷ; ಅಧಿಕೃತ ಆದೇಶ ಹೊರಡಿಸಿದ ಎಐಸಿಸಿ!
Recommended image3
ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್, ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿವಕುಮಾರ್ ಘೋಷಣೆ
Related Stories
Recommended image1
ಕೆಪಿಸಿಸಿಗೆ ಹೊಸ ಸಾರಥಿ: ಬಿ.ಕೆ. ಹರಿಪ್ರಸಾದ್ ನೂತನ ರಾಜ್ಯಾಧ್ಯಕ್ಷ; ಅಧಿಕೃತ ಆದೇಶ ಹೊರಡಿಸಿದ ಎಐಸಿಸಿ!
Recommended image2
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಹೈಕಮಾಂಡ್ ಮಣೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved