MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ವಿಐಪಿ ಕಾರು ಬಿಟ್ಟು ಮೆಟ್ರೋ ಏರಿದ ವಿಜಯೇಂದ್ರ; ಮೋದಿ ಕರೆಗೆ ಸ್ಪಂದನೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ!

ವಿಐಪಿ ಕಾರು ಬಿಟ್ಟು ಮೆಟ್ರೋ ಏರಿದ ವಿಜಯೇಂದ್ರ; ಮೋದಿ ಕರೆಗೆ ಸ್ಪಂದನೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ!

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಶನಿವಾರ ಮೆಜೆಸ್ಟಿಕ್‌ನಿಂದ ಕೆಂಗೇರಿ ತನಕ ಮೆಟ್ರೋದಲ್ಲಿ ಪ್ರಯಾಣ ಮಾಡಿ ಗಮನ ಸೆಳೆದರು. ಸಾಮಾನ್ಯ ಪ್ರಯಾಣಿಕರ ಜೊತೆಯಲ್ಲೇ ಮೆಟ್ರೋದಲ್ಲಿ ತೆರಳಿದ ವಿಜಯೇಂದ್ರ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

2 Min read
Author : Ravi Janekal
Published : May 16 2026, 09:49 AM IST
Share this Photo Gallery
  • FB
  • TW
  • Linkdin
  • Whatsapp
16
ನಮ್ಮ ಮೆಟ್ರೋದಲ್ಲಿ ಸಾಮಾನ್ಯರಂತೆ ಸರತಿ ಸಾಲಲ್ಲಿ ನಿಂತ ವಿಜಯೇಂದ್ರ!
Image Credit : Asianet News

ನಮ್ಮ ಮೆಟ್ರೋದಲ್ಲಿ ಸಾಮಾನ್ಯರಂತೆ ಸರತಿ ಸಾಲಲ್ಲಿ ನಿಂತ ವಿಜಯೇಂದ್ರ!

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಶನಿವಾರ ಮೆಜೆಸ್ಟಿಕ್‌ನಿಂದ ಕೆಂಗೇರಿ ತನಕ ಮೆಟ್ರೋದಲ್ಲಿ ಪ್ರಯಾಣ ಮಾಡಿ ಗಮನ ಸೆಳೆದರು.  ಸಾಮಾನ್ಯರಂತೆ ಮೆಟ್ರೋ ಒಳಗೆ ಪ್ರವೇಶಿಸಿದ ವಿಜಯೇಂದ್ರ ಟ್ರೈನ್ ಬರುವವರೆಗೆ ಪ್ರಯಾಣಿಕರ ಹಿಂದೆಯೇ ಸರತಿ ಸಾಲಿನಲ್ಲಿ ನಿಂತರು, ಮೆಟ್ರೋ ಬಂದ ಬಳಿಕ  ಸಾಮಾನ್ಯ ಪ್ರಯಾಣಿಕರ ಜೊತೆಯಲ್ಲೇ ಮೆಟ್ರೋದಲ್ಲಿ ತೆರಳಿದರು.

Add Asianetnews Kannada as a Preferred SourcegooglePreferred
26
ಮೋದಿ ಕರೆಗೂ ಸ್ಪಂದನೆ… ಅದಕ್ಕಾಗಿ ಮೆಟ್ರೋ ಬಳಕೆ: ವಿಜಯೇಂದ್ರ
Image Credit : Asianet News

ಮೋದಿ ಕರೆಗೂ ಸ್ಪಂದನೆ… ಅದಕ್ಕಾಗಿ ಮೆಟ್ರೋ ಬಳಕೆ: ವಿಜಯೇಂದ್ರ

ವಿಜಯೇಂದ್ರ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಮಿತವ್ಯಯದ ಕರೆಗೆ ಸ್ಪಂದಿಸಿರುವುದಾಗಿ ಹೇಳಿದ ವಿಜಯೇಂದ್ರ, 'ಅನಗತ್ಯ ಇಂಧನ ಬಳಕೆ ಕಡಿಮೆ ಮಾಡಬೇಕು ಎಂಬ ಸಂದೇಶದ ಭಾಗವಾಗಿ ನಾನು ಮೆಟ್ರೋ ಬಳಸುತ್ತಿದ್ದೇನೆ” ಎಂದರು.

Related Articles

Related image1
Convoy Size: ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿದ ಅಮಿತ್ ಶಾ, ಬೆಂಗಾವಲು ವಾಹನಗಳ ಸಂಖ್ಯೆ ಅರ್ಧಕ್ಕರ್ಧ ಕಡಿತ!
Related image2
PM Convoy: ಪ್ರಧಾನಿ ಮೋದಿ ಬೆಂಗಾವಲು ವಾಹನಗಳ ಸಂಖ್ಯೆ ಕಡಿತ! ದೇಶಭಕ್ತಿ ಹೇಳಿದ್ದೇಣು?
36
ಕುಂಬಳಗೋಡಿನ ಕಾರ್ಯಕ್ರಮಕ್ಕೆ ಮೆಟ್ರೋದಲ್ಲೇ ವಿಜಯೇಂದ್ರ ಪ್ರಯಾಣ
Image Credit : Asianet News

ಕುಂಬಳಗೋಡಿನ ಕಾರ್ಯಕ್ರಮಕ್ಕೆ ಮೆಟ್ರೋದಲ್ಲೇ ವಿಜಯೇಂದ್ರ ಪ್ರಯಾಣ

ಇದೇ ವೇಳೆ, ಕುಂಬಳಗೋಡಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೆಟ್ರೋ ಮೂಲಕ ತೆರಳುತ್ತಿರುವುದಾಗಿ ತಿಳಿಸಿದರು. ಕುಂಬಳಗೋಡಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗಬೇಕಾಗಿದೆ. ಹೀಗಾಗಿ ನಾನು ಮೆಟ್ರೋ ಬಳಕೆ ಮಾಡುತ್ತಿದ್ದೇನೆ ಎಂದರು.

46
ಪೆಟ್ರೋಲ್ ದರ ಹೆಚ್ಚಳ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ
Image Credit : Asianet News

ಪೆಟ್ರೋಲ್ ದರ ಹೆಚ್ಚಳ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ವಿಚಾರವಾಗಿ ಕಾಂಗ್ರೆಸ್ ಮಾಡುತ್ತಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ ವಿಜಯೇಂದ್ರ, ‘ ಪೆಟ್ರೋಲ್ ಡೀಸೆಲ್ ದರ ಏಕೆ ಏರಿಕೆಯಾಗಿದೆ ಅನ್ನೋದು ಸಾಮಾನ್ಯ ಜನರಿಗೂ ಗೊತ್ತಿದೆ,  ಕಾಂಗ್ರೆಸ್‌ಗೆ ಚೆನ್ನಾಗಿ ಗೊತ್ತಿದೆ. ಆದರೆ ವಿರೋಧಕ್ಕಾಗಿ ವಿರೋಧ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

56
ಮೋದಿ ರಾಜೀನಾಮೆ ಕೇಳಿದ ಕಾಂಗ್ರೆಸ್‌ಗೆ ವಿಜಯೇಂದ್ರ ತಿರುಗೇಟು
Image Credit : Asianet News

ಮೋದಿ ರಾಜೀನಾಮೆ ಕೇಳಿದ ಕಾಂಗ್ರೆಸ್‌ಗೆ ವಿಜಯೇಂದ್ರ ತಿರುಗೇಟು

ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕು ಎಂಬ ಕಾಂಗ್ರೆಸ್ ನಾಯಕರ ಒತ್ತಾಯಕ್ಕೆ ತಿರುಗೇಟು ನೀಡಿದ ವಿಜಯೇಂದ್ರ, 'ಹಾಗಾದರೆ ಎರಡು ವರ್ಷಗಳ ಹಿಂದೆಯೇ ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡಬೇಕಾಗಿತ್ತು. ರಾಜ್ಯದಲ್ಲೇ ಇಂಧನ ದರ ಏರಿಕೆ ಮಾಡಿರಲಿಲ್ಲವೇ?” ಎಂದು ಪ್ರಶ್ನಿಸಿದರು.

66
ಚುನಾವಣೆಗಾಗಿ ಮೋದಿ ದರ ಇಳಿಕೆ-ಏರಿಕೆ ಮಾಡುವವರಲ್ಲ: ವಿಜಯೇಂದ್ರ
Image Credit : Asianet News

ಚುನಾವಣೆಗಾಗಿ ಮೋದಿ ದರ ಇಳಿಕೆ-ಏರಿಕೆ ಮಾಡುವವರಲ್ಲ: ವಿಜಯೇಂದ್ರ

ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್ ದರ ಏರಿಸಲಾಗಿದೆ ಎಂಬ ಆರೋಪವೂ ತಪ್ಪು. ಪ್ರಧಾನಿ ಮೋದಿ ಚುನಾವಣೆ ಗಮನದಲ್ಲಿಟ್ಟು ಇಂಧನ ದರ ಇಳಿಕೆ ಅಥವಾ ಏರಿಕೆ ಮಾಡುವವರಲ್ಲ” ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಇಂಧನ ಮಿತವ್ಯಯದ ಬಗ್ಗೆ ಕರೆ ನೀಡಿದ್ದಾರೆ. ಅನಗತ್ಯ ವಾಹನ ಬಳಕೆ ಕಡಿಮೆ ಮಾಡುವುದು, ಸಾರ್ವಜನಿಕ ಸಾರಿಗೆ ಬಳಸುವುದು, ಕಾರ್‌ಪೂಲಿಂಗ್‌ ಮಾಡುವುದು ಮತ್ತು ಇಂಧನ ಉಳಿಸುವ ಜೀವನಶೈಲಿ ಅಳವಡಿಸಿಕೊಳ್ಳುವುದು ದೇಶದ ಆರ್ಥಿಕತೆಗೆ ಸಹಾಯಕ ಎಂದು ಮೋದಿ ಹೇಳಿದ್ದರು. ಇಂಧನ ಆಮದು ಮೇಲಿನ ಅವಲಂಬನೆ ಕಡಿಮೆ ಮಾಡುವ ಉದ್ದೇಶದಿಂದ ಈ ಕರೆ ನೀಡಲಾಗಿತ್ತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಬಿ. ವೈ. ವಿಜಯೇಂದ್ರ
ನಮ್ಮ ಮೆಟ್ರೋ
ಬಿಎಂಆರ್‌ಸಿಎಲ್
ನರೇಂದ್ರ ಮೋದಿ

Latest Videos
Recommended Stories
Recommended image1
ಮೋದಿ ಭೇಟಿ ಸಮಯದ ಜಿಲಿಟಿನ್ ಪತ್ತೆ ಪ್ರಕರಣ; ತನಿಖೆಯಲ್ಲಿ ಅಚ್ಚರಿ ವಿಷಯ ಬಹಿರಂಗ!
Recommended image2
ಸ್ವ ಕ್ಷೇತ್ರದಲ್ಲೇ ಎಸಿ ಕೋರ್ಟ್ ಕೇಸ್‌ ಬಾಕಿಗೆ ಕೃಷ್ಣ ಬೈರೇಗೌಡ ಗರಂ, ಸಚಿವರಿಗೆ ತಲೆನೋವಾದ ಆ ಅಧಿಕಾರಿ!
Recommended image3
ಹ್ಯಾಕರ್ ಶ್ರೀಕಿ ಮೂಲಕ ಹವಾಲಾ ದಂಧೆ! ಶ್ರೀಮಂತ ರಾಜಕಾರಣಿ ಪುತ್ರರ ಹೆಸರು ಕೇಳಿ ಬೆಚ್ಚಿಬಿದ್ದ ಇ.ಡಿ ಗೂಗಲ್ ಚಾಟ್’ನಲ್ಲಿ ಸಿಕ್ಕ ರಹಸ್ಯ ಏನು?
Related Stories
Recommended image1
Convoy Size: ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿದ ಅಮಿತ್ ಶಾ, ಬೆಂಗಾವಲು ವಾಹನಗಳ ಸಂಖ್ಯೆ ಅರ್ಧಕ್ಕರ್ಧ ಕಡಿತ!
Recommended image2
PM Convoy: ಪ್ರಧಾನಿ ಮೋದಿ ಬೆಂಗಾವಲು ವಾಹನಗಳ ಸಂಖ್ಯೆ ಕಡಿತ! ದೇಶಭಕ್ತಿ ಹೇಳಿದ್ದೇಣು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved