MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಚಕ್ರವರ್ತಿ ಸೂಲಿಬೆಲೆ ಪಿತೃವಿಯೋಗ, ಅಪ್ಪನ ಬಗ್ಗೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಮಗ

ಚಕ್ರವರ್ತಿ ಸೂಲಿಬೆಲೆ ಪಿತೃವಿಯೋಗ, ಅಪ್ಪನ ಬಗ್ಗೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಮಗ

ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವದಾಸ್ ಸುಬ್ರಾಯ ಶೇಟ್ ನಿಧನರಾಗಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದ ಶೇಟ್ ಅವರು ಸೂಲಿಬೆಲೆ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದರು. ಹಲವು ಗಣ್ಯರು ಸೂಲಿಬೆಲೆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

1 Min read
Author : Gowthami K
Published : Sep 07 2025, 12:26 PM IST
Share this Photo Gallery
  • FB
  • TW
  • Linkdin
  • Whatsapp
14
Image Credit : Asianet News

ಖ್ಯಾತ ವಾಗ್ಮಿ, ಚಿಂತಕ, ಅಂಕಣಕಾರ, ಬರಹಗಾರ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಜೊತೆಗೆ ಯುವ ಬ್ರಿಗೇಡ್ ಸಂಘಟನೆಯ ಸಂಸ್ಥಾಪಕರಾದ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪಿತೃವಿಯೋಗವಾಗಿದೆ. ಅವರ ತಂದೆ ದೇವದಾಸ್ ಸುಬ್ರಾಯ ಶೇಟ್ (80) ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ದೇವದಾಸ್ ಸುಬ್ರಾಯ ಶೇಟ್ ಅವರು ತಮ್ಮ ಜೀವನವನ್ನು ಶಿಕ್ಷಣ ಸೇವೆಗೆ ಮೀಸಲಿಟ್ಟು, ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ದೀರ್ಘಕಾಲ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಶಿಸ್ತಿನ ಶಿಕ್ಷಕ, ಶ್ರಮಜೀವಿ ಹಾಗೂ ಸರಳ ಜೀವನಶೈಲಿಯೊಂದಿಗೆ ಅವರು ವಿದ್ಯಾರ್ಥಿಗಳಲ್ಲಿ ಪ್ರೇರಣೆಯ ಶಕ್ತಿಯಾಗಿದ್ದರು. ಅವರ ಮಾರ್ಗದರ್ಶನದಲ್ಲಿ ಬೆಳೆದ ಅನೇಕ ವಿದ್ಯಾರ್ಥಿಗಳು ಸಮಾಜದಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.

24
Image Credit : Asianet News

ತಂದೆಯ ಅಗಲಿಕೆಯಿಂದ ಮನಸ್ಸು ಮಿಡಿದ ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಭಾವನಾತ್ಮಕವಾಗಿ ತಮ್ಮ ಪಿತಾಜಿಯ ನೆನಪುಗಳನ್ನು ಹಂಚಿಕೊಂಡಿದ್ದಾರೆ. "ಬದುಕಿನ ಪಯಣದಲ್ಲಿ ಶಾಶ್ವತವಾಗಿ ಯಾರೂ ಜೊತೆಗಿರಲಾರರು. ಆದರೆ ಕೆಲವರ ವಿಯೋಗ ಅನಿರೀಕ್ಷಿತ ಮತ್ತು ದುಃಖಮಯ. ಅಪ್ಪ ಇಂದು ಬೆಳಿಗ್ಗೆಯಷ್ಟೇ ಯಾತ್ರೆ ಮುಗಿಸಿ ಅಗಲಿದರು. ಕೆಲದಿನಗಳ ಶ್ವಾಸಕೋಶದ ಸಮಸ್ಯೆ ಅವರನ್ನು ಈ ಹಂತಕ್ಕೊಯ್ಯುವುದೆಂದು ನಾನೆಣಿಸಿರಲಿಲ್ಲ. ಅವರನ್ನು ಪ್ರೀತಿಸುವವರ ಬಹಳ ಮಂದಿ. ಎಲ್ಲರಿಗೂ ವಿಷಯ ಮುಟ್ಟಿಸುವುದು ಹೇಗೆ? ಅದಕ್ಕೇ ಇಲ್ಲಿ ಹಂಚಿಕೊಳ್ಳುತ್ತಿರುವೆ. ಅವರ ಸದ್ಗತಿ ಗೆ ಪ್ರಾರ್ಥಿಸಿಕೊಳ್ಳಿ" ಎಂದು ಬರೆದುಕೊಂಡಿದ್ದಾರೆ.

Related Articles

Related image1
ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗ
Related image2
ಕನ್ನಡ 'ಭುವನೇಶ್ವರಿ' ಒಪ್ಪದವರಿಗೆ ಚಾಮುಂಡಿಯ ದಸರಾ ಉದ್ಘಾಟನೆ ಏಕೆ? ಪ್ರಶ್ನೆ ಮಾಡಿದ ಚಕ್ರವರ್ತಿ ಸೂಲಿಬೆಲೆ!
34
Image Credit : Social Media

ಈ ದುಃಖಕರ ಸುದ್ದಿ ತಿಳಿದು, ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಂಸದ ನಳೀನ್ ಕುಮಾರ್ ಕಟೀಲು ಸೇರಿದಂತೆ ಅನೇಕರು ಟ್ವೀಟ್ ಮೂಲಕ ತಮ್ಮ ದುಃಖವನ್ನು ಹಂಚಿಕೊಂಡು, ಚಕ್ರವರ್ತಿ ಸೂಲಿಬೆಲೆ ಹಾಗೂ ಅವರ ಕುಟುಂಬಕ್ಕೆ ಧೈರ್ಯ ಸಂದೇಶವನ್ನು ಕಳುಹಿಸಿದ್ದಾರೆ.

44
Image Credit : Instagram

ಸಮಾಜಮುಖಿ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಅವರ ಜೀವನ ಹಾಗೂ ಸೇವೆಗೆ ತಂದೆ ದೇವದಾಸ್ ಸುಬ್ರಾಯ ಶೇಟ್ ಅವರ ದೀಕ್ಷೆ, ಸಂಸ್ಕಾರ ಮತ್ತು ತತ್ವಗಳು ಹಿನ್ನಲೆಯಲ್ಲಿ ನಿಂತಿದ್ದವು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಸೂಲಿಬೆಲೆ ಕುಟುಂಬಕ್ಕೆ ತಂದೆಯ ಅಗಲಿಕೆಯ ದುಃಖವು ಅಪಾರವಾದರೂ, ಅವರ ಬದುಕಿನ ಮೌಲ್ಯಗಳು ಹಾಗೂ ಬೋಧನೆಗಳು ಮುಂದಿನ ಪೀಳಿಗೆಯವರಿಗೂ ಬೆಳಕಿನ ದಾರಿಯಾಗಿರಲಿವೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಚಕ್ರವರ್ತಿ ಸೂಲಿಬೆಲೆ
ಕರ್ನಾಟಕ ಸುದ್ದಿ
ಸುದ್ದಿ

Latest Videos
Recommended Stories
Recommended image1
ರಾಯರ ಸನ್ನಿಧಿಯಲ್ಲಿ ಕಾಂಗ್ರೆಸ್ ವಿರುದ್ಧ ಅಶ್ವತ್ಥ್ ನಾರಾಯಣ ಕಿಡಿ: ದೇಶದಲ್ಲೇ ನಂಬರ್ 1 ಭ್ರಷ್ಟ ಸರ್ಕಾರ ಎಂದು ವಾಗ್ದಾಳಿ!
Recommended image2
Karnataka Rains: ಬಂಗಾಳಕೊಲ್ಲಿ ವಾಯುಭಾರ ಕುಸಿತ; ಉತ್ತರಕನ್ನಡದಲ್ಲಿ ಗುಡುಗು ಸಹಿತ ಮಳೆ, ಕಾಫಿನಾಡಲ್ಲೂ ವರ್ಷಧಾರೆ!
Recommended image3
ರೈಲ್ವೆ ರಕ್ಷಣೆ ತರಬೇತಿ ಕಲಿಯಲು ಬೆಂಗಳೂರಿನ ಭಾರತೀಯ ರೈಲ್ವೆ ವಿಭಾಗಕ್ಕೆ ಬಂದ ತಾಂಜೇನಿಯಾ ಸಿಬ್ಬಂದಿಗಳು
Related Stories
Recommended image1
ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗ
Recommended image2
ಕನ್ನಡ 'ಭುವನೇಶ್ವರಿ' ಒಪ್ಪದವರಿಗೆ ಚಾಮುಂಡಿಯ ದಸರಾ ಉದ್ಘಾಟನೆ ಏಕೆ? ಪ್ರಶ್ನೆ ಮಾಡಿದ ಚಕ್ರವರ್ತಿ ಸೂಲಿಬೆಲೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved