MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಶಿಡ್ಲಘಟ್ಟ ಪೌರಾಯುಕ್ತೆಗೆ ರೌಡಿ ದರ್ಪ ತೋರಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನಿಂದ ಕ್ಷಮೆ ಕೇಳಿಸಿದ ಸುವರ್ಣ ನ್ಯೂಸ್!

ಶಿಡ್ಲಘಟ್ಟ ಪೌರಾಯುಕ್ತೆಗೆ ರೌಡಿ ದರ್ಪ ತೋರಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನಿಂದ ಕ್ಷಮೆ ಕೇಳಿಸಿದ ಸುವರ್ಣ ನ್ಯೂಸ್!

ಸಚಿವ ಜಮೀರ್ ಅಹಮದ್ ಖಾನ್ ಪುತ್ರನ ಸಿನಿಮಾ ಪೋಸ್ಟರ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಏಷ್ಯಾನೆಟ್ ಸುವರ್ಣ ನ್ಯೂಸ್ ರಾಜೀವ್ ಗೌಡನಿಂದ ಕ್ಷಮೆ ಕೇಳಿಸಿದೆ.

3 Min read
Author : Sathish Kumar KH
Published : Jan 14 2026, 06:35 PM IST
Share this Photo Gallery
  • FB
  • TW
  • Linkdin
  • Whatsapp
17
ಜಮೀರ್ ಪುತ್ರನ ಪೋಸ್ಟರ್ ವಿಚಾರಕ್ಕೆ ಗೂಂಡಾ ವರ್ತನೆ
Image Credit : Asianet News

ಜಮೀರ್ ಪುತ್ರನ ಪೋಸ್ಟರ್ ವಿಚಾರಕ್ಕೆ ಗೂಂಡಾ ವರ್ತನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಪುತ್ರ ಜೈದ್ ಖಾನ್ ಅವರ ಕಲ್ಟ್ ಸಿನಿಮಾದ ಪೋಸ್ಟರ್ ಅನ್ನು ರಸ್ತೆಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡ ರಾಜೀವ್ ಅವರು, ವಾಹನ ಸಂಚಾರಕ್ಕೆ ತೊಂದರೆಯುಂಟಾಗುವಂತೆ ಅಳವಡಿಕೆ ಮಾಡಿದ್ದನ್ನು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರು ತೆರವುಗೊಳಿಸಿದ್ದರು. 

ಅಷ್ಟಕ್ಕೂ ಈ ಬ್ಯಾನರ್ ಅಳವಡಿಕೆಗೆ ನಗರಸಭೆಯಿಂದ ಅನುಮತಿಯನ್ನೂ ಪಡೆದಿರಲಿಲ್ಲ. ಹೀಗಿದ್ದರೂ ಶಿಡ್ಲಘಟ್ಟ ವ್ಯಾಪ್ತಿಯ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋಲು ಅನುಭವಿಸಿದ್ದ ರಾಜೀವ್ ಗೌಡ ಅವರು ಮಹಿಳೆ ಎಂಬುದನ್ನೂ ನೋಡದೇ ರಾಜಕೀಯ ದರ್ಪದಿಂದ ಪೌರಾಯುಕ್ತೆ ಅಮೃತಾ ಗೌಡಗೆ ಅವ್ಯಾಚ್ಯವಾಗಿ ನಿಂದನೆ ಮಾಡಿದ್ದರು. ಜೊತೆಗೆ, ಕೊಲೆ ಬೆದರಿಕೆಯನ್ನೂ ಹಾಕಿದ್ದರು.

27
ಕ್ಷಮೆ ಕೇಳಿದ ರಾಜೀವ್
Image Credit : Asianet News

ಕ್ಷಮೆ ಕೇಳಿದ ರಾಜೀವ್

ಈ ಬಗ್ಗೆ ವರದಿ ಮಾಡಿದ ಏಷ್ಯಾನೆಟ್ ಸುವರ್ಣ ನ್ಯೂಸ್ ಮಹಿಳಾ ಅಧಿಕಾರಿ ಪರವಾಗಿ ನಿಂತು, ಕಾಂಗ್ರೆಸ್ ರಾಜೀವ್ ಗೌಡ ಹಾಗೂ ಪೌರಾಯುಕ್ತೆ ಅಮೃತಾ ಗೌಡ ಅವರನ್ನು ಫೋನ್‌ಗೆ ತೆಗೆದುಕೊಂಡು ಸರಿ-ತಪ್ಪು ವಿಚಾರಣೆ ಮಾಡಲಾಯಿತು. ಈ ವೇಳೆ ರಾಜೀವ್ ಗೌಡ ಮಹಿಳಾ ಅಧಿಕಾರಿ ಅಮೃತಾ ಗೌಡ ಅವರು ನನ್ನ ಸಹೋದರಿ ಸಮಾನ, ಅವರಿಗೆ ಮಾತನಾಡಿದ್ದು ತಪ್ಪಾಗಿದೆ ಎಂದು ಹೇಳಿ ಕ್ಷಮೆ ಕೇಳಿದ್ದಾರೆ.

Related Articles

Related image1
ಚಿಕ್ಕಬಳ್ಳಾಪುರ: ಜನ್ಮದಿನದಂದೇ ಸ್ವಾಮೀಜಿ ಮೇಲೆ ಹಲ್ಲೆ, ಮಠಕ್ಕೆ ನುಗ್ಗಿ ಹೊಡೆದ ವೃದ್ಧೆಯ ಕುಟುಂಬಸ್ಥರು !
Related image2
ಚಿಕ್ಕಬಳ್ಳಾಪುರ: ಜಾತಿ ಗಣತಿ ವೇಳೆ ಹೃದಯಾಘಾತ, ಶಿಕ್ಷಕ ದಾರುಣ ಸಾವು
37
ದೂರು ದಾಖಲಿಸಿದ ಪೌರಾಯುಕ್ತೆ ಅಮೃತಾ ಗೌಡ
Image Credit : Asianet News

ದೂರು ದಾಖಲಿಸಿದ ಪೌರಾಯುಕ್ತೆ ಅಮೃತಾ ಗೌಡ

ರಾಜಕೀಯ ದರ್ಪ ತೋರುವ ಮುಖಂಡರಿಗೆ ಬುದ್ಧಿ ಕಲಿಸಬೇಕಾದರೆ ಕಾನೂನಾತ್ಮಕವಾಗಿ ದೂರು ನೀಡಿ ಅರ್ ಶಿಕ್ಷೆಯಾಗುವಂತೆ ಮಾಡಬೇಕಿದೆ. ಹೀಗಾಗಿ, ರಾಜೀವ್ ಗೌಡ ವಿರುದ್ಧ ದೂರು ನೀಡುವಂತೆ ಏಷ್ಯಾನೆಟ್ ಸುವರ್ಣ ನ್ಯೂಸ್‌ ಕೂಡ ಬೆಂಬಲ ವ್ಯಕ್ತಪಡಿಸಿತ್ತು. 

ಇದರ ಬೆನ್ನಲ್ಲಿಯೇ ಪೌರಾಯುಕ್ತೆ ಅಮೃತಾ ಗೌಡ ಅವರು, ಕಾಂಗ್ರೆಸ್ ಮುಖಂಡ ರಾಜುಗೌಡ ವಿರುದ್ಧ ಶಿಡ್ಲಘಟ್ಟ ಠಾಣೆಗೆ ದೂರು ನೀಡಿದ್ದಾರೆ. ಅನಧಿಕೃತ ಹಾಗೂ ಅವೈಜ್ಞಾನಿಕವಾಗಿ ಅಳವಡಿಕೆ ಮಾಡಿದ್ದ ಬ್ಯಾನರ್ ತೆರೆವು ಗೊಳಿಸಿರುವ ಹಿನ್ನೆಲೆಯಲ್ಲಿ ರಾಜೀವ್ ಗೌಡ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲು ಮಾಡಿದ್ದಾರೆ.

47
ಬಿಎನ್‌ಎಸ್ 5 ಸೆಕ್ಷನ್‌ ಅಡಿ ದೂರು
Image Credit : Asianet News

ಬಿಎನ್‌ಎಸ್ 5 ಸೆಕ್ಷನ್‌ ಅಡಿ ದೂರು

ಒಬ್ಬ ಸರ್ಕಾರಿ ಅಧಿಕಾರಿ ಮಾತ್ರವಲ್ಲದೇ ಒಂದು ಹೆಣ್ಣು ಅಂತ ನೋಡದೆ ಏಕವಚನದಲ್ಲಿ ನಿಂದಿಸಿದ್ದಾರೆ. ಬೆಂಕಿ ಇಟ್ಟು ಸುಟ್ಟು ಹಾಕುವುದಾಗಿ ಬೆದರಿಸಿದ್ದಾರೆ. ಈ ಮೂಲಕ ನನ್ನನ್ನು ತೇಜೋವಧೆ ಮಾಡಿರುತ್ತಾರೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ನನ್ನ ಕುಟುಂಬ ಹಾಗೂ ನನಗೆ ಆಘಾತವಾಗಿದೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಆತ್ಮಸ್ಥೈರ್ಯ ಕಳೆದುಕೊಂಡಿದ್ದೇನೆ. 

ಶಿಡ್ಲಘಟ್ಟ ಕೇಂದ್ರ ಸ್ಥಾನದಲ್ಲಿ ನಾನು ಒಬ್ಬಳೇ ವಾಸ ಮಾಡುತ್ತಿದ್ದೇನೆ. ಈ ಘಟನೆಯಿಂದ ಮುಂದೆ ಏನಾದರೂ ಆದರೆ ಅದಕ್ಕೆ ರಾಜು ಗೌಡ ಅವರೇ ನೇರ ಕಾರಣ. ಇವರ ವಿರುದ್ಧ ಸೆಕ್ಷನ್ 79, 132, 352, 199 ಹಾಗೂ 54 ಬಿಎನ್ಎಸ್ ಕಾಯ್ದೆ ಅಡಿ ಕ್ರಮ ಕೈಗೊಳ್ಳಲು ದೂರು ದಾಖಲು ಮಾಡಿದ್ದಾರೆ. ನಗರ ಸಭೆಯಲ್ಲಿ ಕೆಲಸ ಮಾಡುವ ನನಗೆ ಹಾಗೂ ನನ್ನ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸರಿಗೆ ಆಯುಕ್ತೆ ಅಮೃತ ಗೌಡ ಮನವಿ ಮಾಡಿದ್ದಾರೆ.

57
ಜೆಡಿಎಸ್ ಪಕ್ಷದಿಂದ ಆಕ್ರೋಶ
Image Credit : Asianet News

ಜೆಡಿಎಸ್ ಪಕ್ಷದಿಂದ ಆಕ್ರೋಶ

ಈ ಕುರಿತು ಟ್ವೀಟ್‌ ಮಾಡಿರುವ ಜೆಡಿಎಸ್, ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ವಸತಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆಕ್ರೋಶ ಹೊರಹಾಕಿದೆ.

67
ರಾಜೀವ್‌ ಗೌಡ ಬಂಧನಕ್ಕೆ ಆಗ್ರಹ
Image Credit : Asianet News

ರಾಜೀವ್‌ ಗೌಡ ಬಂಧನಕ್ಕೆ ಆಗ್ರಹ

ಶಿಡ್ಲಘಟ್ಟದ ಕೋಟೆ ಸರ್ಕಲ್‌ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್‌ ಬ್ಯಾನರ್‌ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್‌ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಗೂಂಡಾ ರಾಜೀವ್‌ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕರ್ನಾಕಟ ಕಾಂಗ್ರಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ, #KPCC ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್‌ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ ಎಂದು ಜೆಡಿಎಸ್ ಪಕ್ಷದಿಂದ ಆಗ್ರಹಿಸಲಾಗಿದೆ.

" @INCKarnataka ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. 

ಸಚಿವ @BZZameerAhmedK ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ… pic.twitter.com/c65czp6k9j

— Janata Dal Secular (@JanataDal_S) January 14, 2026

77
ಚಿಕ್ಕಬಳ್ಳಾಪುರ ಕಾಂಗ್ರೆಸ್ ಮುಖಂಡನ ವಿರುದ್ಧ ಎಎಪಿ ಯುವ ಘಟಕ ದೂರು
Image Credit : Asianet News

ಚಿಕ್ಕಬಳ್ಳಾಪುರ ಕಾಂಗ್ರೆಸ್ ಮುಖಂಡನ ವಿರುದ್ಧ ಎಎಪಿ ಯುವ ಘಟಕ ದೂರು

ಚಿಕ್ಕಬಳ್ಳಾಪುರ ನಗರದ ಪೌರಾಯುಕ್ತೆ ಅಮೃತ ಗೌಡ ರಿಗೆ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆಂಕಿ ಹಾಕಿ ಕಚೇರಿಯನ್ನೇ ಸುಡುತ್ತೇನೆಂದು ಬೆದರಿಕೆ ಹಾಕುವ ಮೂಲಕ ಭಯಭೀತ ವಾತಾವರಣ ಉಂಟು ಮಾಡಿರುವ ಪ್ರಕರಣದ ವಿರುದ್ಧ ಆಮ್ ಆದ್ಮಿ ಪಕ್ಷದ ಯುವ ಘಟಕ ಇಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರನ್ನು ಸಲ್ಲಿಸಿತು. 

ಇದೇ ಸಂದರ್ಭದಲ್ಲಿ ಮಾತನಾಡಿದ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ' ಮಹಿಳಾ ಅಧಿಕಾರಿಯೊಬ್ಬರಿಗೆ ಸ್ಥಳೀಯ ಮುಖಂಡನೊಬ್ಬ ಈ ರೀತಿಯ ಪ್ರಾಣ ಹಾನಿ, ಮಾನಹಾನಿ ಹಾಗೂ ಪುರಸಭೆಯ ಸಿಬ್ಬಂದಿಗಳಿಗೆಲ್ಲ ಪ್ರಾಣ ಬೆದರಿಕೆ ಹಾಕಿರುವುದು ನಾಗರೀಕ ಸಮಾಜ ಸಹಿಸಲು ಸಾಧ್ಯವಿಲ್ಲ. ಈತನ ವಿರುದ್ಧ ಕೂಡಲೇ ಗೂಂಡ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು. ಆಮ್ ಆದ್ಮಿ ಪಕ್ಷವು ಸದಾ ಪ್ರಾಮಾಣಿಕರೊಂದಿಗಿದ್ದು ಈ ರೀತಿಯ ಪುಡಿ ರಾಜಕಾರಣಿಗಳ ಅಟ್ಟಹಾಸವನ್ನು ಸಾರ್ವಜನಿಕರೆಲ್ಲರೂ ಒಕ್ಕೂ ರಲಿನಿಂದ ಖಂಡಿಸ ಬೇಕೆಂದು ತಿಳಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಚಿಕ್ಕಬಳ್ಳಾಪುರ
ಕರ್ನಾಟಕ ರಾಜಕೀಯ
ಸರ್ಕಾರಿ ಉದ್ಯೋಗ

Latest Videos
Recommended Stories
Recommended image1
25 ವರ್ಷದಲ್ಲಿ ಕೇವಲ 1 ಕಿ.ಮೀ ರಸ್ತೆ ನಿರ್ಮಾಣ: ನೈಸ್ ರಸ್ತೆಯ ಕಥೆ ಅಂತ್ಯ? ಹೈಕೋರ್ಟ್‌ನಿಂದ ಮಹತ್ವದ ಆದೇಶ
Recommended image2
ನಿಧಿ ಸಿಕ್ಕ ಕುಟುಂಬ ಸರ್ವನಾಶ; ಅರ್ಧಾಯುಷ್ಯಕ್ಕೆ ಪತನ? ಪುರಾಣ, ಮನುಸ್ಮೃತಿಯಂತೆ ಏನು ಮಾಡಬೇಕು?
Recommended image3
ಸಿದ್ದರಾಮಯ್ಯ ಮುಡಾ ಪ್ರಕರಣಕ್ಕೆ ಮಹತ್ವದ ತಿರುವು, ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ವಿರುದ್ಧ ತನಿಖೆಗೆ ಸರ್ಕಾರ ಅಸ್ತು!
Related Stories
Recommended image1
ಚಿಕ್ಕಬಳ್ಳಾಪುರ: ಜನ್ಮದಿನದಂದೇ ಸ್ವಾಮೀಜಿ ಮೇಲೆ ಹಲ್ಲೆ, ಮಠಕ್ಕೆ ನುಗ್ಗಿ ಹೊಡೆದ ವೃದ್ಧೆಯ ಕುಟುಂಬಸ್ಥರು !
Recommended image2
ಚಿಕ್ಕಬಳ್ಳಾಪುರ: ಜಾತಿ ಗಣತಿ ವೇಳೆ ಹೃದಯಾಘಾತ, ಶಿಕ್ಷಕ ದಾರುಣ ಸಾವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved