ಕೊರೋನಾ ಅಟ್ಟಹಾಸ: ಕೋವಿಡ್ ಕೇರ್ ಸೆಂಟರ್ ನಿರ್ವಹಣೆ, ತುರ್ತು ಸಭೆ ನಡೆಸಿದ BSY
ಬೆಂಗಳೂರು(ಜು.08): ರಾಜ್ಯದಲ್ಲಿ ಮಹಾಮಾರಿ ಕೊರೋನಾ ಕೇಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿ ದಿನ ಕೋವಿಡ್ ಪ್ರಕರಣಗಳು, ಹೆಚ್ಚುತ್ತಿರುವ ಸಾವಿನ ಕೇಸ್ಗಳಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಕೊರೋನಾ ಹಾವಳಿಯನ್ನ ಮಟ್ಟ ರಾಜ್ಯ ಸರ್ಕಾರ ಕೂಡ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಂಡಿದೆ. ಆದರೂ ಕೂಡ ಕೊರೋನಾ ವೈರಸ್ ನಿಯಂತ್ರಣಕ್ಕೆ ಸಿಗುತ್ತಿಲ್ಲ.
ಇಂದು(ಬುಧವಾರ) ಬೆಳಿಗ್ಗೆ ತಮ್ಮ ನಿವಾಸದಲ್ಲಿ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತಾದ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ
ನಾಳೆ(ಗುರುವಾರ) ಸಿಎಂ ಬಿ. ಎಸ್. ಯಡಿಯೂರಪ್ಪ ಖುದ್ದು ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ
ಕೋವಿಡ್ ಕೇರ್ ಸೆಂಟರ್ಗಳಲ್ಲಿನ ರೋಗಿಗಳಿಗೆ ಕಲ್ಪಿಸಿರುವ ವ್ಯವಸ್ಥೆ ಬಗ್ಗೆ ಸಿಎಂ ಬಿಎಸ್ವೈ ಪರಿಶೀಲನೆ ಸಾಧ್ಯತೆ ಇದೆ
ಸಾಮಾಜಿಕ ಅಂತರ ಕಾಯ್ದುಕೊಂಡೇ ಸಭೆ ನಡೆಸಿದ ಸಿಎಂ ಯಡಿಯೂರಪ್ಪ
ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್, ಸಚಿವ ಡಾ.ಕೆ. ಸುಧಾಕರ್, ರಾಜಕೀಯ ಕಾರ್ಯದರ್ಶಗಳಾದ ವಿಶ್ವನಾಥ್, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು