ಜನರಿಗೆ ಒಳಿತಾಗುವ ಕೆಲಸ ಮಾಡಿ: ಸಿಎಂ ಬೊಮ್ಮಾಯಿ
ಬೆಂಗಳೂರು(ನ.01): ಜನರಿಗೆ ಒಳಿತಾಗುವ ಕೆಲಸವನ್ನು ದಕ್ಷತೆ, ಪ್ರಾಮಾಣಿಕತೆ, ನಿಗದಿತ ಸಮಯದಲ್ಲಿ ಸ್ಥಿತಪ್ರಜ್ಞೆಯಿಂದ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.
‘ರಾಷ್ಟ್ರೀಯ ಏಕತಾ ದಿವಸ’ ಅಂಗವಾಗಿ ವಿಧಾನಸೌಧದಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್(Sardar Vallabhbhai Patel) ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ‘ರಾಷ್ಟ್ರೀಯ ಏಕತಾ ದಿವಸ’(National Unity Day) ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ
ವಿಧಾನಸೌಧ(Vidhanasoudha) ಶಕ್ತಿ ಕೇಂದ್ರ, ಸರ್ಕಾರದ ಒಂದು ಭಾಗವಾಗಿದ್ದು, ಜನತಂತ್ರದ ಮೂಲಕ ಜನರ ಶ್ರೇಯೋಭಿವೃದ್ದಿಗೆ ನಾವು ದುಡಿಯುತ್ತಿದ್ದೇವೆ ಎಂದು ತಿಳಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನಮ್ಮೆಲ್ಲರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಜನರ ಏಳಿಗೆಗಾಗಿ ದುಡಿದಾಗ ಮಾತ್ರ ಸರ್ಕಾರಿ ಕೆಲಸ ದೇವರ ಕೆಲಸ(Government Work is God’s Work) ಎಂಬ ಮಾತು ಸಾರ್ಥಕವಾಗುತ್ತದೆ ಎಂದ ಸಿಎಂ ಬೊಮ್ಮಾಯಿ
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸೇರಿದಂತೆ ಹಿರಿಯ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.