MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಶ್ರೀರಂಗಪಟ್ಟಣ: ಮಳೆಗಾಗಿ ಸಿಎಂ ಪರ್ಜನ್ಯ ಹೋಮ

ಶ್ರೀರಂಗಪಟ್ಟಣ: ಮಳೆಗಾಗಿ ಸಿಎಂ ಪರ್ಜನ್ಯ ಹೋಮ

ಶ್ರೀರಂಗಪಟ್ಟಣ(ಅ.08): ಕಾವೇರಿ ಕಣಿವೆ ಪ್ರದೇಶದಲ್ಲಿ ಮಳೆಯ ಕೊರತೆ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಜಲಾಶಯ ಭರ್ತಿ ಭಾಗ್ಯ ಕಾಣಲಿ ಎಂಬ ಸದಾಶಯದೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ ಗುರುವಾರ ಕೆಆರ್‌ಎಸ್‌ನಲ್ಲಿ ವರುಣನಿಗೆ ಪ್ರಾರ್ಥಿಸಿ ಪರ್ಜನ್ಯ ಹೋಮ ನಡೆಸಿದರು. 

1 Min read
Kannadaprabha News | Asianet News
Published : Oct 08 2021, 09:42 AM IST| Updated : Oct 08 2021, 09:44 AM IST
Share this Photo Gallery
  • FB
  • TW
  • Linkdin
  • Whatsapp
15

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡುವ ಮುನ್ನ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಕಾವೇರಿ ಮಾತೆಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

25

ಈ ಬಾರಿ ಮಳೆ ಕೈ ಕೊಟ್ಟು ಅಣೆಕಟ್ಟೆ ಭರ್ತಿಯಾಗದಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಾಗಿನ ಅರ್ಪಿಸುವ ಯೋಗ ಇದುವರೆಗೆ ದೊರಕಿಲ್ಲ. ಇದೀಗ ಕೆಆರ್‌ಎಸ್‌ ಜಲಾಶಯ ಭರ್ತಿಗಾಗಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿಗಳು ಲೋಕ ಕಲ್ಯಾಣಾರ್ಥ ಡಾ.ಭಾನುಪ್ರಕಾಶ್‌ಶರ್ಮಾ ನೇತೃತ್ವದಲ್ಲಿ ಪರ್ಜನ್ಯಜಪ ಸೇರಿದಂತೆ ಹೋಮ ಹವನ ನೆರವೇರಿಸಿದರು.

35

ದಸರಾ ಉದ್ಘಾಟನೆ ಕಾರ್ಯಕ್ರಮದ ನಿಮಿತ್ತ ಬುಧವಾರ ರಾತ್ರಿ ಕೆಆರ್‌ಎಸ್‌ನ ಹೋಟೆಲ್‌ನಲ್ಲಿ ಪತ್ನಿ ಚನ್ನಮ್ಮ ಸಮೇತ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿಗಳು ಗುರುವಾರ ಮುಂಜಾನೆ ಹಿಂದೂ ಸಂಪ್ರದಾಯದಂತೆ ರೇಷ್ಮೆ ಪಂಚೆ ಹಾಗೂ ಶಲ್ಯ ಧರಿಸಿ ಸಕಲ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ನಂತರ ಮೈಸೂರು ದಸರಾ ಉದ್ಘಾಟನೆಗಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು.

45

ರಾಜ್ಯದ ಹಲವೆಡೆ ಉತ್ತಮ ಮಳೆಯಾಗದ ಕಾರಣ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕಾವೇರಿ, ಹೇಮಾವತಿ, ಕಪಿಲಾ, ಲಕ್ಷ್ಮೀಣ ತೀರ್ಥ ಸೇರಿದಂತೆ ರಾಜ್ಯದ ಪ್ರಮುಖ ನದಿಗಳು ತುಂಬಿ ಹರಿಯುತ್ತಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿ ಅಣೆಕಟ್ಟೆಗಳು ಸುಭಿಕ್ಷವಾಗಿ ಭರ್ತಿಯಾಗಲೆಂದು ಪರ್ಜನ್ಯ ಹೋಮ ಮಾಡಲಾಯಿತು ಎಂದು ವೇದ ಬ್ರಹ್ಮ ಡಾ ಭಾನುಪ್ರಕಾಶ್‌ಶರ್ಮಾ ತಿಳಿಸಿದರು.

55

ಈ ವೇಳೆ ಸಚಿವರಾದ ಕೆ.ಸಿ.ನಾರಾಯಣಗೌಡ, ಸಚಿವರಾದ ಆರ್‌.ಆಶೋಕ್‌, ಭೈರತಿ ಬಸವರಾಜು, ಬಿ.ಸಿ.ಪಾಟೀಲ್‌, ಶಿವರಾಂ ಹೆಬ್ಬಾರ್‌, ಶಾಸಕ ಅರವಿಂದ ಬೆಲ್ಲದ್‌ ಸೇರಿದಂತೆ ಇತರರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved