666 ಕೋಟಿ ರೂ. ರಿಲೀಸ್, ರೈತರಿಗೆ ಕರೆ ಮಾಡಿ ಹಣ ವರ್ಗಾವಣೆ ಖಾತ್ರಿಪಡಿಸಿಕೊಂಡ ಸಿಎಂ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ 666 ಕೋಟಿ ರೂಪಾಯಿಗಳ ಪರಿಹಾರ ಮೊತ್ತವನ್ನು ಆನ್ಲೈನ್ ಮೂಲಕ ರೈತರ ಖಾತೆಗೆ ಬಿಡುಗಡೆ ಮಾಡಿದರು. ಮಂಗಳವಾರ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ನಂತರ ಸ್ವತಃ ತಾವೇ ರೈತರಿಗೆ ಕರೆ ಮಾಡಿ ಪರಿಹಾರ ಹಣ ಖಾತೆಗಳಿಗೆ ವರ್ಗಾವಣೆ ಆಗಿರುವುದನ್ನು ಖಾತ್ರಿಪಡಿಸಿಕೊಂಡರು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ 666 ಕೋಟಿ ರೂಪಾಯಿಗಳ ಪರಿಹಾರ ಮೊತ್ತವನ್ನು ಆನ್ಲೈನ್ ಮೂಲಕ ರೈತರ ಖಾತೆಗೆ ಬಿಡುಗಡೆ ಮಾಡಿದರು.
. ಮಂಗಳವಾರ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ 666 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ರಿಲೀಸ್ ಮಾಡಿದರು,
ನಂತರ ಸ್ವತಃ ತಾವೇ ರೈತರಿಗೆ ಕರೆ ಮಾಡಿ ಪರಿಹಾರ ಹಣ ಖಾತೆಗಳಿಗೆ ವರ್ಗಾವಣೆ ಆಗಿರುವುದನ್ನು ಖಾತ್ರಿಪಡಿಸಿಕೊಂಡರು.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಘೋಷಿಸಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ತಮ್ಮ ಬೆಳೆಯನ್ನು ಮಾರಾಟ ಮಾಡಲಾಗದೆ ಭಾರಿ ನಷ್ಟ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರೈತರಿಗೆ ಪರಿಹಾರ ಘೋಷಣೆ ಮಾಡಿತ್ತು.
ಹೂವು ಬೆಳೆದು ನಷ್ಟ ಅನುಭವಿಸುತ್ತಿರುವ ರೈತರಿಗೆ 5000 ರೂ, ಘೋಷಿಸಿದ್ದರು
ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸುತ್ತಿರುವ ರೈತರಿಗೆ 5000 ರೂ, ಪರಿಹಾರ ನೀಡುವುದಾಗಿ ಹೇಳಿದ್ದರು