MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • Karnataka| ಬಂಡವಾಳ ಹೂಡಿಕೆಗೆ ‘ಅಕ್ಕ’ ಮೊರೆ ಹೋದ ಸಿಎಂ

Karnataka| ಬಂಡವಾಳ ಹೂಡಿಕೆಗೆ ‘ಅಕ್ಕ’ ಮೊರೆ ಹೋದ ಸಿಎಂ

ಬೆಂಗಳೂರು(ನ.21):  ರಾಜ್ಯದಲ್ಲಿ(Karnataka) ಹೂಡಿಕೆಗೆ(Investment) ಪೂರಕವಾಗಿರುವ ಔದ್ಯೋಗಿಕ ವಾತಾವರಣದ ಬಗ್ಗೆ ಅಮೆರಿಕದಲ್ಲಿರುವವರಿಗೆ ತಿಳಿಸಿ ರಾಜ್ಯದಲ್ಲಿ ಹೂಡಿಕೆ ಮಾಡಲು ಉತ್ತೇಜಿಸಿ. ಇಲ್ಲಿ ಬಂಡವಾಳ ಹೂಡುವವರಿಗೆ ಎಲ್ಲಾ ರೀತಿಯ ನೆರವು ಹಾಗೂ ಸಹಕಾರ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಅಮೆರಿಕದಲ್ಲಿ(America) ನೆಲೆಸಿರುವ ಕನ್ನಡಿಗರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಭರವಸೆ ನೀಡಿದ್ದಾರೆ.

2 Min read
Kannadaprabha News | Asianet News
Published : Nov 21 2021, 07:32 AM IST| Updated : Nov 21 2021, 07:46 AM IST
Share this Photo Gallery
  • FB
  • TW
  • Linkdin
  • Whatsapp
16

ರಾಜ್ಯದ ಎಲ್ಲಾ ಉದ್ಯಮಗಳಲ್ಲಿ ಕನ್ನಡಿಗರಿಗೆ(Kannadigas) ಅತಿ ಹೆಚ್ಚು ಉದ್ಯೋಗ ಕೊಡಿಸಲು ನಾವು ಬದ್ಧವಾಗಿದ್ದೇವೆ. ಉದ್ಯೋಗದಲ್ಲಿ(Job) ಕನ್ನಡಿಗರಿಗೆ ಅವಕಾಶ ಕೊಡಿಸುವ ಪ್ರಯತ್ನ ಹಲವು ಬಾರಿ ಸಫಲತೆ ನೀಡಿಲ್ಲ. ಹಾಗಾಗಿ ಇದಕ್ಕೆ ವಿಶೇಷ ಕಾರ್ಯಕ್ರಮವನ್ನು ರೂಪಿಸಬೇಕಿದೆ. ಬರುವ ದಿನಗಳಲ್ಲಿ ಎಲ್ಲಾ ಉದ್ಯಮಗಳಲ್ಲಿ ಕನ್ನಡಿಗರಿಗೆ ಅತಿ ಹೆಚ್ಚು ಉದ್ಯೋಗ ಕೊಡಬೇಕು ಎಂದು ನಾವು ಈಗಾಗಲೇ ತಿಳಿಸಿದ್ದೇವೆ. ಕಾನೂನಿನಲ್ಲಿಯೂ ಅವಕಾಶ ಇದೆ. ಅದನ್ನು ಅಕ್ಷರಶಃ ಪಾಲಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ ಸಿಎಂ ಬೊಮ್ಮಾಯಿ

26

ಅಮೆರಿಕ ಕನ್ನಡ ಕೂಟಗಳ ಸಂಘ(Association of Kannada Kootas of America) (ಅಕ್ಕ) ವತಿಯಿಂದ ಶನಿವಾರ ಆಯೋಜಿಸಿದ್ದ ‘ಕನ್ನಡ ರಾಜ್ಯೋತ್ಸವ(Karnataka Rajyotsava) ಸಂಭ್ರಮ 2021’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ತಮ್ಮ ನಿವಾಸದಿಂದ ವರ್ಚುಯಲ್‌ ಆಗಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

36

ಕನ್ನಡಿಗರಿಗೆ ಎಲ್ಲಾ ಅರ್ಹತೆಗಳಿದ್ದು ಅವಕಾಶ ಬೇಕಿದೆ. ಅಮೆರಿಕಕ್ಕೆ ಹೋಗಿರುವವರು ನೂರಕ್ಕೆ ನೂರರಷ್ಟು ಅಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮವರು ವಿದೇಶಕ್ಕೆ ಹೋಗಿ ಅಲ್ಲಿನ ಪರಿಸರಕ್ಕೆ ಹೊಂದಿಕೊಂಡು ಅಲ್ಲಿ ಯಶಸ್ವಿಯಾಗಲು ಸಾಧ್ಯವಿದ್ದರೆ, ನಮ್ಮ ಕನ್ನಡನಾಡಿನಲ್ಲಿ ಆಗುವುದು ಕಷ್ಟವೇನಲ್ಲ. ಅದಕ್ಕೆ ಅವರಿಗೆ ಅವಕಾಶಗಳನ್ನು ಕಲ್ಪಿಸಬೇಕಿದೆ ಎಂದ ಬೊಮ್ಮಾಯಿ

46

ಅಮೆರಿಕದಲ್ಲಿ ನೆಲೆಸಿರುವ ನೀವು ರಾಜ್ಯದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಒಂದು ರೀತಿಯಲ್ಲಿ ರಾಯಭಾರಿಗಳು. ಹೀಗಾಗಿ ರಾಜ್ಯದಲ್ಲಿರುವ ಅತ್ಯುತ್ತಮ ಔದ್ಯೋಗಿಕ ವಾತಾವರಣದ ಬಗ್ಗೆ ಅವರಿಗೆ ತಿಳಿಸಿ. ಇಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಪ್ರಯತ್ನ ಮಾಡಿ. ಇದಕ್ಕಾಗಿ ರಾಜ್ಯ ಸರ್ಕಾರ(Government of Karnataka) ತನ್ನ ಎಲ್ಲಾ ಸಹಕಾರ ನೀಡಲಿದ್ದು, ತಮ್ಮ ಎಲ್ಲ ಕಾರ್ಯಕ್ರಮಗಳಿಗೆ ಸಂಪೂರ್ಣ ಜತೆಗೆ ನಿಲ್ಲಲಿದೆ ಎಂದು ಭರವಸೆ ನೀಡಿದ ಮುಖ್ಯಮಂತ್ರಿಗಳು

56

ಕಡು ಬಡ ಕನ್ನಡಿಗನಿಗೆ ಆರ್ಥಿಕ ಸಬಲತೆ ಕೊಡುವ ಅವಶ್ಯಕತೆ ಇದೆ. ಇದಕ್ಕೆ ಪೂರಕವಾಗಿ ನಮಗೆ ಶಿಕ್ಷಣ(Education) ಕ್ಷೇತ್ರದ ಬೆಂಬಲ ಬೇಕು. ಕೌಶಲ್ಯ ತರಬೇತಿ, ಉನ್ನತ ಶಿಕ್ಷಣದಲ್ಲಿ ಕನ್ನಡ ಬಳಕೆ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಬೇಕಿದೆ. ಅದಕ್ಕೆ ನಾವು ಸಿದ್ಧವಾಗಿದ್ದೇವೆ ಎಂದರು. ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್‌, ಅಕ್ಕ ಸಂಘಟನೆಯ ಅಧ್ಯಕ್ಷ ತುಮಕೂರು ದಯಾನಂದ ಸೇರಿ ಹಲವರು ಹಾಜರಿದ್ದರು.

66

ನನ್ನ ಸರ್ಕಾರ ಕನ್ನಡದಿಂದ ಹುಟ್ಟಿರುವ ಸರ್ಕಾರ. ಕನ್ನಡಕ್ಕಾಗಿ ಹುಟ್ಟಿರುವ ಸರ್ಕಾರ. ಕನ್ನಡ ಪರ ಸರ್ಕಾರ ನಿರಂತರವಾಗಿ ಇರಲಿದೆ. ಜಾಗತೀಕರಣ, ಉದಾರೀಕರಣದ, ಖಾಸಗೀಕರಣದ ಹಿನ್ನೆಲೆಯಲ್ಲಿ ಅಂತಃಕರಣವನ್ನು ಮರೆತಿದ್ದೇವೆ. ಆದರೆ, ಅಂತಹ ಅಂತಃಕರಣವನ್ನು ಈಗ ಅಕ್ಕ ಸಂಘಟನೆ ಮೂಲಕ ನೋಡುತ್ತಿದ್ದೇವೆ. ಈ ಅಂತಃಕರಣ ಸದಾಕಾಲ ಇರಲಿ ಎಂದು ಸಿಎಂ ಬೊಮ್ಮಾಯಿ ಹಾರೈಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಹೂಡಿಕೆ
ಬಸವರಾಜ ಬೊಮ್ಮಾಯಿ
ಅಮೇರಿಕಾ

Latest Videos
Recommended Stories
Recommended image1
ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
Recommended image2
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
Recommended image3
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved