ಬಸವೇಶ್ವರನಗರ ಕೋವಿಡ್ ನಿಗಾ ಕೇಂದ್ರ ಉದ್ಘಾಟನೆ: ಸೋಂಕು ಲಕ್ಷಣ ಇಲ್ಲದವರಿಗೆ ಇಲ್ಲಿ ಚಿಕಿತ್ಸೆ
ಬೆಂಗಳೂರು(ಜು.23): ನಗರದ ಬಸವೇಶ್ವರ ನಗರದ ಸರ್ಕಾರಿ ಯುನಾನಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಸ್ಥಾಪಿಸಲಾಗಿರುವ ‘ಕೋವಿಡ್ ನಿಗಾ ಕೇಂದ್ರ’ ಬುಧವಾರ ಉದ್ಘಾಟನೆಗೊಂಡಿದೆ.

<p>175 ಹಾಸಿಗೆ ಸಾಮರ್ಥ್ಯದ ಕೋವಿಡ್ ನಿಗಾ ಕೇಂದ್ರ ಉದ್ಘಾಟಿಸಿದ ವಸತಿ ಸಚಿವ ವಿ. ಸೋಮಣ್ಣ </p>
175 ಹಾಸಿಗೆ ಸಾಮರ್ಥ್ಯದ ಕೋವಿಡ್ ನಿಗಾ ಕೇಂದ್ರ ಉದ್ಘಾಟಿಸಿದ ವಸತಿ ಸಚಿವ ವಿ. ಸೋಮಣ್ಣ
<p>ಈ ಭಾಗದಲ್ಲಿ ಎಸಿಮ್ಟಮ್ಯಾಟಿಕ್ ಮತ್ತು ಕಡಿಮೆ ಲಕ್ಷಣಗಳಿರುವವರ ಆರೈಕೆಗಾಗಿ ಈ ಆಸ್ಪತ್ರೆ ಉದ್ಘಾಟಿಸಲಾಗಿದೆ. ಯಾವುದೇ ಲಕ್ಷಣಗಳಿಲ್ಲದ ಹಾಗೂ ಕಡಿಮೆ ಲಕ್ಷಣಗಳಿರುವ ಸೋಂಕಿತರು ಮನೆಯಲ್ಲೇ ಆರೈಕೆಯಲ್ಲಿರಬಹುದು. ಒಂದು ವೇಳೆ ಮನೆಯಲ್ಲಿ ಸೂಕ್ತ ಸೌಲಭ್ಯ ಇಲ್ಲದವರನ್ನು ಈ ಕೇಂದ್ರಕ್ಕೆ ಕರೆತಂದು ಆರೈಕೆ ಮಾಡಲಾಗುತ್ತದೆ ಎಂದು ಹೇಳಿದ ಸಚಿವ ವಿ. ಸೋಮಣ್ಣ</p>
ಈ ಭಾಗದಲ್ಲಿ ಎಸಿಮ್ಟಮ್ಯಾಟಿಕ್ ಮತ್ತು ಕಡಿಮೆ ಲಕ್ಷಣಗಳಿರುವವರ ಆರೈಕೆಗಾಗಿ ಈ ಆಸ್ಪತ್ರೆ ಉದ್ಘಾಟಿಸಲಾಗಿದೆ. ಯಾವುದೇ ಲಕ್ಷಣಗಳಿಲ್ಲದ ಹಾಗೂ ಕಡಿಮೆ ಲಕ್ಷಣಗಳಿರುವ ಸೋಂಕಿತರು ಮನೆಯಲ್ಲೇ ಆರೈಕೆಯಲ್ಲಿರಬಹುದು. ಒಂದು ವೇಳೆ ಮನೆಯಲ್ಲಿ ಸೂಕ್ತ ಸೌಲಭ್ಯ ಇಲ್ಲದವರನ್ನು ಈ ಕೇಂದ್ರಕ್ಕೆ ಕರೆತಂದು ಆರೈಕೆ ಮಾಡಲಾಗುತ್ತದೆ ಎಂದು ಹೇಳಿದ ಸಚಿವ ವಿ. ಸೋಮಣ್ಣ
<p>ಕೊರೋನಾ ಸೋಂಕು ಭಯಾನಕ ಕಾಯಿಲೆಯೇನೂ ಅಲ್ಲ. ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಂಡರೆ ಕೇವಲ ಎಂಟು ದಿನಗಳಲ್ಲಿ ಕೊರೋನಾ ಮುಕ್ತರಾಗಿ ಮನೆಗೆ ಮರಳುವ ಸಾಧ್ಯತೆ ಇರುತ್ತದೆ. ಸರ್ಕಾರ ಯಾವುದೇ ರೋಗಿಗೂ ಸಮಸ್ಯೆಯಾಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.</p>
ಕೊರೋನಾ ಸೋಂಕು ಭಯಾನಕ ಕಾಯಿಲೆಯೇನೂ ಅಲ್ಲ. ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಂಡರೆ ಕೇವಲ ಎಂಟು ದಿನಗಳಲ್ಲಿ ಕೊರೋನಾ ಮುಕ್ತರಾಗಿ ಮನೆಗೆ ಮರಳುವ ಸಾಧ್ಯತೆ ಇರುತ್ತದೆ. ಸರ್ಕಾರ ಯಾವುದೇ ರೋಗಿಗೂ ಸಮಸ್ಯೆಯಾಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
<p>ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸ್ಥಳೀಯ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.</p>
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸ್ಥಳೀಯ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ