MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ದಂಡಂ ದಶಗುಣಂ ನಟಿ ರಮ್ಯಾ ಬೆನ್ನಿಗೆ ನಿಂತ FIRE; ನೇರವಾಗಿ ಸರ್ಕಾರಕ್ಕೆ ಹೋಯ್ತು ಪತ್ರ

ದಂಡಂ ದಶಗುಣಂ ನಟಿ ರಮ್ಯಾ ಬೆನ್ನಿಗೆ ನಿಂತ FIRE; ನೇರವಾಗಿ ಸರ್ಕಾರಕ್ಕೆ ಹೋಯ್ತು ಪತ್ರ

Actress Ramya And Darshan Fans: ನಟಿ ರಮ್ಯಾ ಅವರ ಸಾಮಾಜಿಕ ಜಾಲತಾಣ ಪೋಸ್ಟ್‌ಗೆ ಅಸಭ್ಯ ಕಾಮೆಂಟ್‌ಗಳನ್ನು ಖಂಡಿಸಿ FIRE ಸಂಸ್ಥೆ ಗೃಹ ಸಚಿವರಿಗೆ ಪತ್ರ ಬರೆದಿದೆ. ದರ್ಶನ್ ಅಭಿಮಾನಿಗಳೆಂದು ಹೇಳಲಾದವರಿಂದ ಈ ಟ್ರೋಲಿಂಗ್ ನಡೆದಿದ್ದು, ಪ್ರಥಮ್ ಸೇರಿದಂತೆ ಹಲವರು ರಮ್ಯಾ ಪರ ನಿಂತಿದ್ದಾರೆ.

2 Min read
Author : Mahmad Rafik
| Updated : Jul 28 2025, 04:51 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Instagram

ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ ಅವರ ಪೋಸ್ಟ್‌ಗೆ ಕಿಡಿಗೇಡಿಗಳು ಅಸಭ್ಯವಾಗಿ ಕಮೆಂಟ್ ಹಾಕುತ್ತಿದ್ದಾರೆ. ಈ ಸಂಬಂಧ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು, ನಟ ದರ್ಶನ್ ಅಭಿಮಾನಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

26
Image Credit : Instagram

ಇತ್ತೀಚೆಗೆ ನಟ ದರ್ಶನ್ ಆಂಡ್ ಗ್ಯಾಂಗ್ ಜಾಮೀನಿನ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆದಿತ್ತು. ಈ ವಿಚಾರಣೆ ಸಂಬಂಧ ಕುರಿತ ಕೆಲವು ಲೇಖನಗಳನ್ನು ರಮ್ಯಾ ಶೇರ್ ಮಾಡಿಕೊಂಡಿದ್ದರು. ಈ ಪೋಸ್ಟ್ ಶೇರ್ ಮಾಡಿಕೊಂಡ ನಂತರ ನಟ ದರ್ಶನ್ ಅಭಿಮಾನಿಗಳು ಎಂದು ಕರೆದುಕೊಳ್ಳುವ ಪುಂಡರು ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ ಎಂದು ರಮ್ಯಾ ಆರೋಪಿಸಿದ್ದಾರೆ.

Related Articles

Related image1
ದರ್ಶನ್‌ ಫ್ರಾನ್ಸ್‌ಗೆ ಕುಮ್ಮಕ್ಕು ಕೊಡ್ತಿದಾರೆ... 'ಏಷ್ಯಾನೆಟ್ ಸುವರ್ಣ'ಗೆ ನಟಿ ರಮ್ಯಾ ನೇರಾನೇರ ಮಾತು!
Related image2
ರಮ್ಯಾ ವರ್ಸಸ್ ದರ್ಶನ್ ಫ್ಯಾನ್ಸ್ ರಣರಂಗಕ್ಕೆ ವಿಜಯಲಕ್ಷ್ಮೀ ಎಂಟ್ರಿ: ಏನಿದು ರೋಚಕ ಟ್ವಿಸ್ಟ್?
36
Image Credit : Asianet News

ಇದೀಗ ರಮ್ಯಾ ಧ್ವನಿಗೆ ಒಬ್ಬೊಬ್ಬರೇ ಸಾಥ್ ನೀಡುತ್ತಿದ್ದಾರೆ. ಬಿಗ್‌ಬಾಸ್ ವಿನ್ನರ್, ನಟ ಪ್ರಥಮ್, ಪ್ರತಿಯೊಬ್ಬರು ರಮ್ಯಾ ಪರವಾಗಿ ನಿಲ್ಲಬೇಕೆಂದು ಕರೆ ನೀಡಿದ್ದಾರೆ. ಇದೀಗ ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ & ಈಕ್ವಾಲಿಟಿ ಸಂಸ್ಥೆ, ನಟಿಯ ವಿರುದ್ಧ ಟ್ರೋಲಿಂಗ್ ಖಂಡಿಸಿದೆ. ಈ ಸಂಬಂಧ ಗೃಹ ಸಚಿವರಿಗೆ FIRE ಸಂಸ್ಥೆ ಪತ್ರವನ್ನು ಬರೆದಿದೆ

46
Image Credit : Ramya FB

ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ & ಈಕ್ವಾಲಿಟಿ (FIRE) ಸಂಸ್ಥೆಯು ನಟಿ ಹಾಗೂ ಮಾಜಿ ಸಂಸದರಾದ ರಮ್ಯಾ (ದಿವ್ಯ ಸ್ಪಂದನ) ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಶ್ಲೀ ಲ ಹಾಗೂ ಮಹಿಳಾವಿರೋಧಿ ಟ್ರೋಲಿಂಗ್ ಅನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ರಮ್ಯಾರವರಿಗೆ ನಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತದೆ

56
Image Credit : Asianet News

ಭಾರತದ ಸಂವಿಧಾನದಲ್ಲಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮಗಳ ಹಕ್ಕುಗಳು (ಆರ್ಟಿಕಲ್ 19) ನಮ್ಮ ಪ್ರಜಾಪ್ರಭುತ್ವದ ಬಾಳಿಗೆ ಆಧಾರಸ್ತಂಭವಾಗಿವೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು ಅವುಗಳ ನಡುವೆ ಸಂವಾದ ನಡೆಯಬೇಕು. ಆದರೆ ಆ ಸಂವಾದ ಸಭ್ಯತೆಯೊಂದಿಗೆ ಮತ್ತು ಗೌರವಪೂರ್ಣ ವಾಗಿ ನಡೆಯಬೇಕು. ರಮ್ಯಾ ಅವರ ವಿರುದ್ಧ ನಡೆಯುತ್ತಿರುವ ದ್ವೇಷಪೂರಿತ ದೌರ್ಜನ್ಯ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಪಮಾನವಾಗಿದೆ ಮತ್ತು ಇದು ಆನ್ ಲೈನ್ ಮಹಿಳಾ ದ್ವೇಷದ ಆಳವಾದ ಸಮಸ್ಯೆಯನ್ನು ತೋರಿಸುತ್ತದೆ.

66
Image Credit : Asianet News

ಮಹಿಳೆಯರ ವಿರುದ್ಧದ ಅವಮಾನಕಾರಕ ಸಾಮಾಜಿಕ ಜಾಲತಾಣ ಪೋಸ್ಟ್ ಗಳು ಭಾರತ ದಂಡ ಸಂಹಿತೆಯ ಸೆಕ್ಷನ್ ಗಳು (499, 500, 505(2), 509) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ (ಸೈಬರ್ ಕಾನೂನು) ಅಡಿಯಲ್ಲಿ ದಂಡನೀಯವಾಗಿವೆ. ಕರ್ನಾಟಕ ಗೃಹ ಇಲಾಖೆ ಮತ್ತು ಸೈಬರ್ ಕ್ರೈ ಮ್ ಪ್ರಾಧಿಕಾರಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು FIRE ಸಂಸ್ಥೆಯು ಒತ್ತಾಯಿಸುತ್ತಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ದರ್ಶನ್ ತೂಗುದೀಪ
ರಮ್ಯಾ
ಸುದ್ದಿ
ಸ್ಯಾಂಡಲ್‌ವುಡ್
ರೇಣುಕಾಸ್ವಾಮಿ ಪ್ರಕರಣ
ಚೇತನ್ ಅಹಿಂಸಾ

Latest Videos
Recommended Stories
Recommended image1
ಲಾಡ್-ಜಕ್ಕಪ್ಪನವರ ಜಟಾಪಟಿ: 120 ಎಕರೆ ಭೂಮಿ ಹುಡುಕಾಟದಲ್ಲಿ ಹೈರಾಣದ್ರು ಅಧಿಕಾರಿಗಳು
Recommended image2
ದರ್ಶನ್- ರೇಣುಕಾಸ್ವಾಮಿ ಕೇಸ್: ಪೊಲೀಸರ ವಿರುದ್ಧವೇ ಸುಳ್ಳು ಸಾಕ್ಷ್ಯ ಸೃಷ್ಟಿಸಿರುವ ಆರೋಪ
Recommended image3
ರಕ್ಷಣಾ ಉತ್ಪನ್ನ ಉತ್ಪಾದನೆಗೆ 200 ಎಕರೆ ಪಾರ್ಕ್‌: ಸಚಿವ ಎಂ.ಬಿ.ಪಾಟೀಲ್
Related Stories
Recommended image1
ದರ್ಶನ್‌ ಫ್ರಾನ್ಸ್‌ಗೆ ಕುಮ್ಮಕ್ಕು ಕೊಡ್ತಿದಾರೆ... 'ಏಷ್ಯಾನೆಟ್ ಸುವರ್ಣ'ಗೆ ನಟಿ ರಮ್ಯಾ ನೇರಾನೇರ ಮಾತು!
Recommended image2
ರಮ್ಯಾ ವರ್ಸಸ್ ದರ್ಶನ್ ಫ್ಯಾನ್ಸ್ ರಣರಂಗಕ್ಕೆ ವಿಜಯಲಕ್ಷ್ಮೀ ಎಂಟ್ರಿ: ಏನಿದು ರೋಚಕ ಟ್ವಿಸ್ಟ್?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved