MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ರಾಯಚೂರು ಕೃಷ್ಣ ನದಿಯಲ್ಲಿ ಪತ್ತೆಯಾದ ದಶಾವತಾರಿ ವಿಷ್ಣು ಮತ್ತು ಶಿವಲಿಂಗ ವಿಗ್ರಹಗಳು

ರಾಯಚೂರು ಕೃಷ್ಣ ನದಿಯಲ್ಲಿ ಪತ್ತೆಯಾದ ದಶಾವತಾರಿ ವಿಷ್ಣು ಮತ್ತು ಶಿವಲಿಂಗ ವಿಗ್ರಹಗಳು

ರಾಯಚೂರು (ಫೆ.06): ರಾಯಚೂರು ಜಿಲ್ಲೆಯ ದೇವಸೂಗೂರು ಬಳಿ ಕೃಷ್ಣ ನದಿಯನ್ನು ದಾಟಲು ಸೇತುವೆ ನಿರ್ಮಾಣದ ಕಾಮಗಾರಿ ವೇಳೆ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ. ದಶಾವತಾರದ ವಿಷ್ಣು ಹಾಗೂ ಶಿವಲಿಂಗ ಸೇರಿ ವಿವಿಧ ವಿಗ್ರಹಗಳ ಪೋಟೋಗಳು ಇಲ್ಲಿವೆ ನೋಡಿ..

1 Min read
Sathish Kumar KH
Published : Feb 06 2024, 04:17 PM IST
Share this Photo Gallery
  • FB
  • TW
  • Linkdin
  • Whatsapp
18

ರಾಯಚೂರು ತಾಲೂಕಿನ ದೇವಸೂಗೂರಿನ ಬಳಿಯ ಸೇತುವೆ ಕಾಮಗಾರಿ ವೇಳೆ ಕೃಷ್ಣ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿದ್ದು, ಕಾಮಗಾರಿ ಮಾಡುವ ಸಿಬ್ಬಂದಿ ಆಶ್ಚರ್ಯಚಕಿತರಾಗಿದ್ದಾರೆ.
 

28

ರಾಯಚೂರು ತಾ. ದೇವಸೂಗೂರು ಬಳಿಯ ಕೃಷ್ಣ ನದಿಯಲ್ಲಿ ವಿಗ್ರಹಗಳು ಪತ್ತೆಯಾಗಿದ್ದು, ಇವುಗಳನ್ನು ಪುರಾತನ ವಿಗ್ರಹಗಳೆಂದು ಗುರುತಿಸಲಾಗಿದೆ. ಸೇತುವೆ ನಿರ್ಮಾಣದ ಕಾಮಗಾರಿ ಸಿಬ್ಬಂದಿಯಿಂದ ವಿಗ್ರಹಗಳನ್ನು ವಶಕ್ಕೆ ಪಡೆದ ಸ್ಥಳೀಯರು, ಅವುಗಳನ್ನು ನದಿ ನೀರಿನಲ್ಲಿ ಶುಚಿಗೊಳಿಸಿ ಪೂಜೆಯನ್ನು ಮಾಡಿದ್ದಾರೆ.
 

38

ವಿಗ್ರಹಗಳು ಸಿಕ್ಕಿದ ಜಾಗದಲ್ಲಿಯೇ ಮೂರ್ತಿಗಳಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಗುತ್ತಿದೆ. ಇನ್ನು ವಿಗ್ರಹ ದರ್ಶನಕ್ಕೆ ಬರುವ ಭಕ್ತರು ಕೂಡ ನದಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡುತ್ತಿದ್ದು, ಮತ್ತಷ್ಟು ಹೆಚ್ಚಿನ ಜನರು ಆಗಮಿಸುವ ನಿರೀಕ್ಷೆಯಿತ್ತು.
 

48

ಆದರೆ, ಈಗ ವಿಷ್ಣುವಿನ ದಶಾವತಾರ ಮೂರ್ತಿಗಾಗಿ ತೆಲಂಗಾಣ ಮತ್ತು ಕರ್ನಾಟಕ ಸೇರಿ ಎರಡು ರಾಜ್ಯಗಳ ಭಕ್ತರ ಮಧ್ಯೆ ಪೈಪೋಟಿ ಶುರುವಾಗಿದೆ. ಈ ಮೂರ್ತಿಗಳು ಕರ್ನಾಟಕದ ಗಡಿಯಲ್ಲಿ ಸಿಕ್ಕಿದ್ದರೂ, ಇವು ನಮ್ಮ ರಾಜ್ಯಕ್ಕೆ ಸೇರಿದ ಮೂರ್ತಿವೆಂದು ತೆಲಂಗಾಣ ಭಕ್ತರು ತಕರಾರು ತೆಗೆದಿದ್ದಾರೆ.
 

58

ವಿಗ್ರಹಗಳ ಒಡೆತನಕ್ಕಾಗಿ ಭಕ್ತರ ನಡುವೆ ವಾಗ್ವಾದ ಶುರುವಾಗಿದ್ದು, ಇದು ಅತಿರೇಕಕ್ಕೆ ಹೋಗುವ ಮುನ್ನವೇ ದೇವಸೂಗೂರು ಗ್ರಾಮಸ್ಥರು ವಿಗ್ರಹಗಳನ್ನು ತಮ್ಮ ಗ್ರಾಮಕ್ಕೆ ತಂದು ರಾಮಲಿಂಗೇಶ್ವರ ಮಂದಿರದಲ್ಲಿ ಇಟ್ಟು ಪೂಜೆ ಸಲ್ಲಿಸಲು ಮುಂದಾಗಿದ್ದಾರೆ.
 

68

ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ದೋ-ಅಬ್ ಪ್ರದೇಶವಾಗಿರುವ ಕೃಷ್ಣ ನದಿ ಪ್ರದೇಶದಲ್ಲಿ ಬಿಜಾಪುರದ ಮುಸ್ಲಿಮರ ದಾಳಿಯ ವೇಳೆ ಯಾವುದೋ ದೇವಸ್ಥಾನ ನಾಶಗೊಳಿಸಿ, ಮೂರ್ತಿಗಳನ್ನು ನದಿಯಲ್ಲಿ ಬೀಸಾಡಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

78

ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಮಾತನಾಡಿ, ರಾಯಚೂರು ಭಾಗದಲ್ಲಿ 163 ಯುದ್ಧಗಳು ನಡೆದಿವೆ. ವಿಜನಗರ ಸಾಮ್ರಾಜ್ಯದ ಮೇಲೆ ಬಹುಮನಿ ಸುಲ್ತಾನರು ಹಾಗೂ ಆದಿಲ್ ಶಾಹಿಗಳು ದಾಳಿ ಮಾಡಿದ ಅವಧಿಯಲ್ಲಿ ಕಲ್ಯಾಣದ ಚಾಲುಕ್ಯರು ನಿರ್ಮಿಸಿದ್ದ ದೇವಾಲಯದ ಗರ್ಭಗುಡಿಯ ವಿಗ್ರಹಗಳನ್ನು ನದಿಯಲ್ಲಿ ಬೀಸಾಡಿರಬಹುದು ಎಂದು ಹೇಳಿದ್ದಾರೆ.
 

88

ಒಟ್ಟಿನಲ್ಲಿ ಕೃಷ್ಣ ನದಿಯಲ್ಲಿ ಸಿಕ್ಕಿದ ವಿಗ್ರಹಗಳನ್ನು ಸ್ಥಳೀಯರು ಶುಚಿಗೊಳಿಸಿ ಪೂಜೆ ಮಾಡುತ್ತಿದ್ದು, ಪುರಾತತ್ವ ಇಲಾಖೆಯಿಂದ ಬಂದು ಪರಿಶೀಲನೆ ಮಾಡಿ ವಿಗ್ರಹಗಳ ಬಗ್ಗೆ ಮಾಹಿತಿ ನೀಡುವುದು ಅಗತ್ಯವಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕೃಷ್ಣಾ ನದಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved