MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಡೆವಿಲ್ ಇನ್ ಟ್ರಬಲ್: ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು

ಡೆವಿಲ್ ಇನ್ ಟ್ರಬಲ್: ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳಿ ಪರವಾನಗಿ ಪಡೆದ ಎರಡು ಶಸ್ತ್ರಾಸ್ತ್ರಗಳಿದ್ದವು. ಬೆಂಗಳೂರು ಪೊಲೀಸರು ಪಿಸ್ತೂಲನ್ನು ವಶಪಡಿಸಿಕೊಂಡಿದ್ದರೂ, ಮೈಸೂರಿನಲ್ಲಿ ಪರವಾನಗಿ ಪಡೆದ .22 mm ರೈಫಲ್ ಮತ್ತು ಬುಲೆಟ್‌ಗಳು ಇನ್ನೂ ಸೀಜ್ ಆಗಿಲ್ಲ.

2 Min read
Sathish Kumar KH
Published : Dec 12 2025, 12:52 PM IST
Share this Photo Gallery
  • FB
  • TW
  • Linkdin
  • Whatsapp
15
ದರ್ಶನ್ ಬಳಿ ಮತ್ತೊಂದು ಪಿಸ್ತೂಲ್
Image Credit : FB

ದರ್ಶನ್ ಬಳಿ ಮತ್ತೊಂದು ಪಿಸ್ತೂಲ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಸಂಬಂಧಿಸಿದ ಮತ್ತೊಂದು ಸ್ಫೋಟಕ ಸುದ್ದಿ ಈಗ ಬೆಳಕಿಗೆ ಬಂದಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್ ಬಳಿ ಪರವಾನಗಿ ಪಡೆದ ಎರಡು ಶಸ್ತ್ರಾಸ್ತ್ರಗಳಿದ್ದವು. ಇವುಗಳಲ್ಲಿ .32 mm ವಾಲ್ಥರ್ PPK ಪಿಸ್ತೂಲನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರೂ, .22 mm ರೈಫಲ್ ಮತ್ತು ಬುಲೆಟ್‌ಗಳು ಇನ್ನೂ ಸೀಜ್ ಆಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

25
ಒಂದು ಮಾತ್ರ ಕೊಟ್ಟು, ಇನ್ನೊಂದು ಕೊಡಲು ಕಳ್ಳಾಟ
Image Credit : Asianet News

ಒಂದು ಮಾತ್ರ ಕೊಟ್ಟು, ಇನ್ನೊಂದು ಕೊಡಲು ಕಳ್ಳಾಟ

ಕಳೆದ ವರ್ಷ ಡಿಸೆಂಬರ್ 24ರಂದೇ ದರ್ಶನ್ ಅವರ ಪಿಸ್ತೂಲ್ ಲೈಸೆನ್ಸ್ ಅನ್ನು ಸಸ್ಪೆಂಡ್ ಮಾಡಲಾಗಿತ್ತು. ನಂತರ ಜನವರಿ 22ರಂದು RR ನಗರ ಪೊಲೀಸರು ನಟನ ಅಪಾರ್ಟ್ಮೆಂಟ್‌ನಿಂದ ಪಿಸ್ತೂಲನ್ನು ವಶಪಡಿಸಿಕೊಂಡಿದ್ದರು. ಆದರೆ, ಇದರ ಜೊತೆಗೆ ದರ್ಶನ್ ಬಳಿ ಮೈಸೂರು ಗ್ರಾಮಾಂತರ ಪೊಲೀಸರು ನೀಡಿದ ಪರವಾನಗಿ ಹೊಂದಿರುವ .22 mm ರೈಫಲ್ ಮತ್ತು ಬುಲೆಟ್‌ಗಳೂ ಇವೆ. ಈ ರೈಫಲ್ ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ಅಥವಾ ಬೆಂಗಳೂರಿನ ಮನೆಯಲ್ಲಿ ಅಡಗಿದೆ ಎನ್ನಲಾಗಿದೆ.

Related Articles

Related image1
'ಕಾಲವೇ ಸತ್ಯ ಹೇಳುತ್ತದೆ, ಸಮಯವೇ ಉತ್ತರಿಸುತ್ತದೆ'.. ನಟ ದರ್ಶನ್ ಮೆಸೇಜ್‌ಗೆ 'ಡೆವಿಲ್' ಉತ್ತರ ಕೊಟ್ಟಿದೆಯೇ!
Related image2
‘The Devil’ ಸಿನಿಮಾ ನೋಡಿ ಭಾವುಕರಾದ ದರ್ಶನ್ ಪತ್ನಿ… ಅಭಿಮಾನಿಗಳಿಗೆ ಪ್ರೀತಿಯ ಪತ್ರ
35
ಪೊಲೀಸ್ ನಿರ್ಲಕ್ಷ್ಯವೋ? ದರ್ಶನ್ ಕಳ್ಳಾಟವೋ?
Image Credit : instagram

ಪೊಲೀಸ್ ನಿರ್ಲಕ್ಷ್ಯವೋ? ದರ್ಶನ್ ಕಳ್ಳಾಟವೋ?

ಕೊಲೆ ಅಥವಾ ಗಂಭೀರ ಅಪರಾಧ ಪ್ರಕರಣದಲ್ಲಿ ಆರೋಪಿಯಾದ ತಕ್ಷಣವೇ ಆತನ ಬಳಿಯಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ತಕ್ಷಣ ವಶಕ್ಕೆ ಪಡೆಯಬೇಕು ಎಂಬ ನಿಯಮವಿದೆ. ಗನ್ ಬಳಸಿ ಆರೋಪಿಯು ಸಾಕ್ಷಿಗಳಿಗೆ ಬೆದರಿಕೆ ಹಾಕುವ ಅಥವಾ ಬೇರೆ ಅಪರಾಧ ಚಟುವಟಿಕೆ ನಡೆಸುವ ಸಾಧ್ಯತೆ ಇರುವುದರಿಂದ ಈ ಕ್ರಮ ಅನಿವಾರ್ಯ. ಆರೋಪಿಯು ಶಸ್ತ್ರಾಸ್ತ್ರ ನೀಡಲು ನಿರಾಕರಿಸಿದರೆ, ಆತನ ಮೇಲೆ ‘ಆರ್ಮ್ಸ್ ಆ್ಯಕ್ಟ್’ ಅಡಿಯಲ್ಲಿ ಪ್ರತ್ಯೇಕ ಪ್ರಕರಣ ಸಹ ದಾಖಲಿಸಬಹುದು.

45
ರೈಫಲ್, ಬುಲೆಟ್ ಎರಡೂ ಸೀಜ್ ಮಾಡಿಲ್ಲ
Image Credit : instagram

ರೈಫಲ್, ಬುಲೆಟ್ ಎರಡೂ ಸೀಜ್ ಮಾಡಿಲ್ಲ

ಆದರೆ, ರೇಣುಕಾಸ್ವಾಮಿ ಕೊಲೆ ಕೇಸ್ ದಾಖಲಾಗಿ ತಿಂಗಳುಗಳು ಕಳೆದರೂ ಮೈಸೂರು ಗ್ರಾಮಾಂತರ ಪೊಲೀಸರು ದರ್ಶನ್ ಬಳಿ ಇರುವ ರೈಫಲ್ ಮತ್ತು ಬುಲೆಟ್‌ಗಳನ್ನು ಸೀಜ್ ಮಾಡಿಲ್ಲ. ಒಂದು ಕಡೆ ಬೆಂಗಳೂರು ಪೊಲೀಸರು ತಕ್ಷಣ ಕ್ರಮ ಕೈಗೊಂಡರೆ, ಇನ್ನೊಂದು ಕಡೆ ಮೈಸೂರು ಗ್ರಾಮಾಂತರ ಪೊಲೀಸರು ಕೊಲೆ ಆರೋಪಿಯ ಬಳಿ ಇರುವ ಮಾರಕ ರೈಫಲ್‌ನ ಕುರಿತು ನಿರ್ಲಕ್ಷ್ಯ ತಾಳಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

55
ದರ್ಶನ್ ಪ್ರಭಾವಕ್ಕೆ ಮಣಿದರೇ ಪೊಲೀಸರು
Image Credit : instagram

ದರ್ಶನ್ ಪ್ರಭಾವಕ್ಕೆ ಮಣಿದರೇ ಪೊಲೀಸರು

ಇದು ಪೊಲೀಸರ ಕರ್ತವ್ಯ ಲೋಪವೇ ಅಥವಾ ದರ್ಶನ್‌ನ ಪ್ರಭಾವಕ್ಕೆ ಮಣಿದಿರುವ ಕಳ್ಳಾಟವೇ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಕೂಡಲೇ ಮೈಸೂರು ಗ್ರಾಮಾಂತರ ಪೊಲೀಸರು ಈ ರೈಫಲನ್ನು ವಶಕ್ಕೆ ಪಡೆದು, ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ದರ್ಶನ್ ತೂಗುದೀಪ
ಸ್ಯಾಂಡಲ್‌ವುಡ್
ಕ್ರೈಮ್ ನ್ಯೂಸ್

Latest Videos
Recommended Stories
Recommended image1
Now Playing
Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Recommended image2
ಗ್ಯಾರಂಟಿ ಸ್ಕೀಮ್ ಅಧ್ಯಕ್ಷ ರೇವಣ್ಣ ಪುತ್ರನಿಂದ ಹಿಟ್ ಅಂಡ್ ರನ್; ಕಾರು ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು!
Recommended image3
Now Playing
ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Related Stories
Recommended image1
'ಕಾಲವೇ ಸತ್ಯ ಹೇಳುತ್ತದೆ, ಸಮಯವೇ ಉತ್ತರಿಸುತ್ತದೆ'.. ನಟ ದರ್ಶನ್ ಮೆಸೇಜ್‌ಗೆ 'ಡೆವಿಲ್' ಉತ್ತರ ಕೊಟ್ಟಿದೆಯೇ!
Recommended image2
‘The Devil’ ಸಿನಿಮಾ ನೋಡಿ ಭಾವುಕರಾದ ದರ್ಶನ್ ಪತ್ನಿ… ಅಭಿಮಾನಿಗಳಿಗೆ ಪ್ರೀತಿಯ ಪತ್ರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved