ಚಾಮುಂಡಿ ದೇವಿ, ಸಿದ್ಧಾರೂಡ, ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ಪುನೀತರಾದ ಭಕ್ತರು..!
ಬೆಂಗಳೂರು(ಜೂ.08): ಎರಡೂವರೆ ತಿಂಗಳ ಬಳಿಕ ಇಂದು(ಸೋಮವಾರ) ರಾಜ್ಯಾದ್ಯಂತ ಚರ್ಚ್, ಮಸೀದಿ, ದೇವಸ್ಥಾನಗಳು ಓಪನ್ ಅಗಿವೆ. ಹೀಗಾಗಿ ಬೆಳಿಗ್ಗೆಯಿಂದಲೇ ಭಕ್ತರು ದೇವಸ್ಥಾನಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೊರೋನಾ ಕಾಟದ ಹಿನ್ನೆಲೆಯಲ್ಲಿ ರಾಷ್ಟ್ರದಾದ್ಯಂತ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಹೀಗಾಗಿ ಧಾರ್ಮಿಕ ಕೇಂದ್ರಗಳು ಬರೋಬ್ಬರಿ ಎರಡೂವರೆ ತಿಂಗಳ ಕಾಲ ಬಂದ್ ಆಗಿದ್ದವು.
ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇಗುಲದಲ್ಲಿ ದೇವಿಯ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತ ಭಕ್ತರು
ಮೈಸೂರಿನ ಚಾಮುಂಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಭಕ್ತರು
ಅಂತರ ಕಾಪಾಡಿಕೊಳ್ಳಲು ಬಾಕ್ಸ್ ಮಾರ್ಕ್ ಮಾಡಲಾಗಿದ್ದು, ಎಲ್ಲ ಭಕ್ತರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದ್ದು, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ
ಮಾಸ್ಕ್ ಧರಿಸಿಯೇ ಭಗವಂತನಿಗೆ ಪೂಜೆ ಸಲ್ಲಿಸಿದ ಅರ್ಚಕ
ಸಾಮಾಜಿಕ ಅಂತರ ಕಾಯ್ದುಕೊಂಡು ದೇವರ ದರ್ಶನಕ್ಕೆ ಪಡೆದ ಭಕ್ತಾಧಿಗಳು
ಮುಂಜಾಗ್ರತಾ ಕ್ರಮವಾಗಿ ಭಕ್ತರಿಗೆ ಸ್ಕ್ರೀನಿಂಗ್ ಮಾಡುತ್ತಿರುವ ದೇವಸ್ಥಾನದ ಸಿಬ್ಬಂದಿ
ಕನ್ನಡಪ್ರಭ ಪತ್ರಿಕೆ ಓದುತ್ತಿರುವ ಕೊಪ್ಪಳದ ಗವಿಮಠದ ಶ್ರೀಗಳು
ಹುಬ್ಬಳ್ಳಿ ನಗರದ ಸದ್ಗುರು ಸಿದ್ಧಾರೂಢ ಮಠದಲ್ಲಿ ಬೆಳಗ್ಗೆಯಿಂದ ಸಿಧ್ಧಾರೂಢರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥ ದೇವಾಲಯದಲ್ಲಿ ಭಕ್ತರಿಗಾಗಿ ಕಾಯುತ್ತಿರುವ ದೇವರು