MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಸೌಜನ್ಯ ಪ್ರಕರಣ ಮರುತನಿಖೆಗೆ ಕೋರಿ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾರ್ಚ್ 23ಕ್ಕೆ ಮುಂದೂಡಿದ ಸುಪ್ರೀಂ

ಸೌಜನ್ಯ ಪ್ರಕರಣ ಮರುತನಿಖೆಗೆ ಕೋರಿ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾರ್ಚ್ 23ಕ್ಕೆ ಮುಂದೂಡಿದ ಸುಪ್ರೀಂ

ಧರ್ಮಸ್ಥಳದ ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಕೋರಿ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ. ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಈ ಮೇಲ್ಮನವಿಯ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಮಾರ್ಚ್ 23ಕ್ಕೆ ಮುಂದೂಡಿದೆ.

2 Min read
Author : Gowthami K
Published : Jan 06 2026, 11:53 AM IST
Share this Photo Gallery
  • FB
  • TW
  • Linkdin
  • Whatsapp
15
ಮರು ತನಿಖೆ ಕೋರಿ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ ಅರ್ಜಿ
Image Credit : Asianet News

ಮರು ತನಿಖೆ ಕೋರಿ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ ಅರ್ಜಿ

ಧರ್ಮಸ್ಥಳ ಗ್ರಾಮದ ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ಇದೀಗ ಪರಿಶೀಲನೆ ನಡೆಸಿದ ಸುಪ್ರೀಂ ಮುಂದಿನ ವಿಚಾರಣೆಯನ್ನು ಮಾರ್ಚ್ 23ಕ್ಕೆ ಮುಂದೂಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಜಸ್ಟೀಸ್ ಸಂಜಯ್ ಕುಮಾರ್ ಪೀಠದ ಮುಂದೆ ನಡೆಯಿತು.

25
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ
Image Credit : Asianet News

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ

ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು ಸೆಷನ್ಸ್ ನ್ಯಾಯಾಲಯ ಹಾಗೂ ನಂತರ ಸಿಬಿಐ ನ್ಯಾಯಾಲಯವು ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಹಾಗೂ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸೌಜನ್ಯ ತಾಯಿ ಕುಸುಮಾವತಿ ಗೌಡ ಅವರು ಮೊದಲು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ದ್ವಿಸದಸ್ಯ ಪೀಠವು ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ವಿಶೇಷ ಅನುಮತಿ ಮೇಲ್ಮನವಿ ಅರ್ಜಿ (SLP) ಸಲ್ಲಿಸುವ ಮೂಲಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. 

Related Articles

Related image1
ಸೌಜನ್ಯ ಪ್ರಕರಣ: ವಿಠಲ ಗೌಡ ವಿರುದ್ದ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ದೂರು!
Related image2
ಎಸ್‌ಐಟಿ ಸೌಜನ್ಯ ಪ್ರಕರಣದ ಮರು ತನಿಖೆ ಮಾಡ್ತಿಲ್ಲ: ಗೃಹ ಸಚಿವ ಪರಮೇಶ್ವರ್‌
35
ಅರ್ಜಿಯಲ್ಲಿದ್ದ ದೋಷ, ಮತ್ತೆ ಸಲ್ಲಿಕೆ
Image Credit : our own

ಅರ್ಜಿಯಲ್ಲಿದ್ದ ದೋಷ, ಮತ್ತೆ ಸಲ್ಲಿಕೆ

ಕುಸುಮಾವತಿ ಗೌಡ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯಲ್ಲಿ ಕೆಲವು ತಾಂತ್ರಿಕ ದೋಷಗಳಿದ್ದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಅದನ್ನು ಡಿಫೆಕ್ಟ್ ಲಿಸ್ಟ್‌ನಲ್ಲಿ ಸೇರಿಸಿತ್ತು. ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸಲು ಅರ್ಜಿದಾರರ ಪರ ವಕೀಲರಿಗೆ 90 ದಿನಗಳ ಕಾಲಾವಕಾಶ ನೀಡಲಾಗಿತ್ತು. ಸುಪ್ರೀಂ ಕೋರ್ಟ್ ನೀಡಿದ್ದ ಸೂಚನೆಯಂತೆ, ದೋಷಗಳನ್ನು ಸರಿಪಡಿಸಿ ಕುಸುಮಾವತಿ ಗೌಡ ಅವರ ಪರ ವಕೀಲರು 2025ರ ನವೆಂಬರ್ 19ರಂದು ಅರ್ಜಿಯನ್ನು ಮರುಸಲ್ಲಿಕೆ ಮಾಡಿದ್ದಾರೆ. ಇದೀಗ ಆ ಅರ್ಜಿ ವಿಚಾರಣೆಗೆ ಬಂದಿದ್ದು, ವಿಚಾರಣೆಯನ್ನು ಮಾರ್ಚ್ 23ಕ್ಕೆ ಮುಂದೂಡಿಕೆ ಮಾಡಿದೆ. ಧರ್ಮಸ್ಥಳ ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣವು ರಾಜ್ಯದಲ್ಲಿ ಅತ್ಯಂತ ಸಂವೇದನಶೀಲ ಪ್ರಕರಣಗಳಲ್ಲಿ ಒಂದಾಗಿದ್ದು, ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೈಗೊಳ್ಳುವ ನಿರ್ಧಾರವನ್ನು ದೇಶಾದ್ಯಂತ ಕುತೂಹಲದಿಂದ ನಿರೀಕ್ಷಿಸಲಾಗುತ್ತಿದೆ.

45
ಅರ್ಜಿಯಲ್ಲಿ ಯಾರ್ಯಾರು ಪ್ರತಿವಾದಿಗಳು?
Image Credit : our own

ಅರ್ಜಿಯಲ್ಲಿ ಯಾರ್ಯಾರು ಪ್ರತಿವಾದಿಗಳು?

ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ ಕೇಂದ್ರ ತನಿಖಾ ದಳ (CBI), ಕರ್ನಾಟಕ ರಾಜ್ಯ ಸರ್ಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (DGP), ಪ್ರಕರಣದ ಆರೋಪಿಯಾಗಿದ್ದ ಸಂತೋಷ್ ರಾವ್ ಇವರನ್ನು ಪ್ರತಿವಾದಿಗಳನ್ನಾಗಿ ಉಲ್ಲೇಖಿಸಲಾಗಿದೆ.

ಸಂತೋಷ್ ರಾವ್ ಕೂಡ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

ಈ ನಡುವೆ, ಸಂತೋಷ್ ರಾವ್ ಕೂಡ 2025ರ ಸೆಪ್ಟೆಂಬರ್ 2ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಅರ್ಜಿಯಲ್ಲಿಯೂ ದೋಷಗಳಿರುವುದರಿಂದ, ಅವುಗಳನ್ನು ಸರಿಪಡಿಸಲು ಸುಪ್ರೀಂ ಕೋರ್ಟ್ 90 ದಿನಗಳ ಕಾಲಾವಕಾಶ ನೀಡಿದೆ.

55
ಪ್ರಕರಣದ ಹಿನ್ನೆಲೆ
Image Credit : X

ಪ್ರಕರಣದ ಹಿನ್ನೆಲೆ

2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದ ಬಳಿ ಸೌಜನ್ಯ ಎಂಬ ಯುವತಿ ಅತ್ಯಾ*ಚಾರಕ್ಕೆ ಒಳಗಾಗಿ ಹತ್ಯೆಯಾಗಿದ್ದ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು 2012ರ ಅಕ್ಟೋಬರ್ 11ರಂದು ಸಂತೋಷ್ ರಾವ್ ಅವರನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ಕುರಿತು ವ್ಯಾಪಕ ಹೋರಾಟಗಳು ಮತ್ತು ಸಾರ್ವಜನಿಕ ಒತ್ತಡದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ 2013ರಲ್ಲಿ ಸಂತೋಷ್ ರಾವ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು. ನಂತರ, ಮತ್ತಷ್ಟು ಸಾರ್ವಜನಿಕ ಆಗ್ರಹದ ಹಿನ್ನೆಲೆಯಲ್ಲಿ ತನಿಖೆಯನ್ನು ಕೇಂದ್ರ ತನಿಖಾ ದಳ (CBI)ಗೆ ಹಸ್ತಾಂತರಿಸಲಾಗಿತ್ತು. ಸಿಬಿಐ ಕೂಡ ಸಂತೋಷ್ ರಾವ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು. ಆದರೆ, ದೀರ್ಘ ವಿಚಾರಣೆಯ ನಂತರ 2023ರ ಜುಲೈನಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತ್ತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಧರ್ಮಸ್ಥಳ
ಸೌಜನ್ಯ ಪ್ರಕರಣ
ಸೌಜನ್ಯ ಪ್ರಕರಣ
ಸುಪ್ರೀಂ ಕೋರ್ಟ್

Latest Videos
Recommended Stories
Recommended image1
ದೀರ್ಘಾವಧಿ ಸಿಎಂ ಬೆನ್ನಲ್ಲೇ, ಪೂರ್ಣಾವಧಿ ಸಿಎಂ ಆಸೆ ಬಿಚ್ಚಿಟ್ಟ ಸಿದ್ದರಾಮಯ್ಯ! ಹೈಕಮಾಂಡ್ ಮೇಲೆ ಹೆಚ್ಚಿದ ವಿಶ್ವಾಸ!
Recommended image2
ಮನೆಗೆಲಸದವರಿಂದ ₹1.37 ಕೋಟಿ ಚಿನ್ನಾಭರಣ ಕಳ್ಳತನ; ನಂಬಿಕಸ್ಥರಿಂದಲೇ 900 ಗ್ರಾಂ ಬಂಗಾರ ದರೋಡೆ!
Recommended image3
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಗಣಿತ ಪೂರ್ವಸಿದ್ಧತಾ ಪರೀಕ್ಷೆ: ವಾಟ್ಸಾಪ್‌ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್!
Related Stories
Recommended image1
ಸೌಜನ್ಯ ಪ್ರಕರಣ: ವಿಠಲ ಗೌಡ ವಿರುದ್ದ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ದೂರು!
Recommended image2
ಎಸ್‌ಐಟಿ ಸೌಜನ್ಯ ಪ್ರಕರಣದ ಮರು ತನಿಖೆ ಮಾಡ್ತಿಲ್ಲ: ಗೃಹ ಸಚಿವ ಪರಮೇಶ್ವರ್‌
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved