MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಬೆಂಗ್ಳೂರಲ್ಲಿ ಜೋರಾದ ಕಾವೇರಿ ಕಿಚ್ಚು: ಪ್ರತಿಭಟನೆ ವೇಳೆ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಮುಂದಾದ ಅನ್ನದಾತ

ಬೆಂಗ್ಳೂರಲ್ಲಿ ಜೋರಾದ ಕಾವೇರಿ ಕಿಚ್ಚು: ಪ್ರತಿಭಟನೆ ವೇಳೆ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಮುಂದಾದ ಅನ್ನದಾತ

ಬೆಂಗಳೂರು(ಸೆ.26): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿದ ವಿವಿಧ ಕನ್ನಡ ಪರ ಸಂಘಟನೆಗಳು ಹಾಗೂ ರೈತರು ಇಂದು(ಮಂಗಳಾವರ) ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ಹೀಗಾಗಿ ಇಂದು ಬೆಂಗಳೂರಿನಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.    

2 Min read
Girish Goudar
Published : Sep 26 2023, 01:32 PM IST| Updated : Sep 26 2023, 01:50 PM IST
Share this Photo Gallery
  • FB
  • TW
  • Linkdin
  • Whatsapp
110

ಇನ್ನು ಇಂದಿನ ಬೆಂಗಳೂರು ಬಂದ್‌ ಹಾಗೂ ಕಾವೇರಿ ಹೋರಾಟಕ್ಕೆ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್‌ ಸೇರಿದಂತೆ, ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ.(ಚಿತ್ರ ಕೃಪೆ: ರವಿ, ಕನ್ನಡಪ್ರಭ)

210

ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಇಂದು ಬೆಂಗಳೂರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ನೂರಾರು ಜನರು ಬೆಂಬಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.(ಚಿತ್ರ ಕೃಪೆ: ರವಿ, ಕನ್ನಡಪ್ರಭ)

310

ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಧರಣಿ ನಡೆಯುವ ಸ್ಥಳದ ಸುತ್ತಮುತ್ತ ಭಾರೀ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. ಪೋಲೀಸರು ಬ್ಯಾರಿಕೇಡ್‌ ಹಾಕಿ ಬಿಗಿ ಬಂದೋಬಸ್ತ್‌ ಕಲ್ಪಿಸಿದ್ದಾರೆ. (ಚಿತ್ರ ಕೃಪೆ: ರವಿ, ಕನ್ನಡಪ್ರಭ)

410

ಪ್ರತಿಭಟನೆಯಲ್ಲಿ ಕರ್ನಾಟಕದ ಸಾಹಿತಿಗಳನ್ನ ಫೋಟೋಗಳನ್ನ ಬೈಕಿನಲ್ಲಿ ಹಾಕಿಕೊಂಡು ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. (ಚಿತ್ರ ಕೃಪೆ: ರವಿ, ಕನ್ನಡಪ್ರಭ)

510

ನಡುರಸ್ತೆಯಲ್ಲೇ ತಿಂಡಿ ಸವಿಯುವ ಮೂಲಕ ಯಾವುದೇ ಕಾರಣಕ್ಕೆ ಕಾವೇರಿಯನ್ನ ಬಿಟ್ಟುಕೊಡಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ.(ಚಿತ್ರ ಕೃಪೆ: ರವಿ, ಕನ್ನಡಪ್ರಭ)

610

ನಾವು ಗಲಾಟೆ ಮಾಡಲ್ಲ ಶಾಂತಿ ರೀತಿಯಲ್ಲಿ ಪ್ರತಿಭಟನೆ ಮಾಡುತ್ತೇವೆ. ಸಾಮಾಜಘಾತುಕ ಶಕ್ತಿಗಳು ದುಷ್ಕೃತ್ಯ ಮಾಡಿದ್ರೆ ಅವರನ್ನು ಬಂಧಿಸಿ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ನಾವು ರೈತರ ಋಣ ತೀರಿಸೋಕೆ ಕೆಲಸ ಮಾಡುತ್ತಿದ್ದೇವೆ. ಎಲ್ಲಾ ಪಕ್ಷಗಳು ನಮಗೆ ಸಹಕಾರ ಕೊಟ್ಟಿವೆ. ನಾವು ಸರ್ಕಾರಕ್ಕೆ ಪಾಠ ಕಲಿಸೇ ಕಲಿಸುತ್ತೇವೆ. ಕರ್ನಾಟಕದ ರೈತರು ಬೀದಿಗಿಳಿದ್ರೆ, ಎಲ್ಲಾವನ್ನು ಸರ್ಕಾರ ನೋಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.(ಚಿತ್ರ ಕೃಪೆ: ರವಿ, ಕನ್ನಡಪ್ರಭ)

710

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ ಅವರ ಸ್ನೇಹ, ಪ್ರೀತಿಗಾಗಿ ಕರ್ನಾಟಕ ಜನರನ್ನು ಬಲಿಕೊಡಬೇಡಿ ಎಂದು ರಾಜ್ಯ ಸರ್ಕಾರವನ್ನ ಕುರುಬೂರು ಶಾಂತಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. (ಚಿತ್ರ ಕೃಪೆ: ರವಿ, ಕನ್ನಡಪ್ರಭ)

810

ಸರ್ಕಾರ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಜನರೇ ಬುದ್ಧಿ ಕಲಿಸುತ್ತಾರೆ. ಈ ಸರ್ಕಾರ ರಾತ್ರೋ ರಾತ್ರಿ ಕದ್ದುಮುಚ್ಚಿ ನೀರನ್ನು ಬಿಡುತ್ತಿದೆ. ಇದು ತಮಿಳುನಾಡು ಸರ್ಕಾರದ ಏಜೆಂಟ್‌ ಸರ್ಕಾರ ಇದಾಗಿದೆ ಎಂದು ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರೈತರೊಂದಿಗೆ ರಸ್ತೆಯಲ್ಲೇ ತಿಂಡಿ ಮಾಡಿ ವಿನೂತನ ಪ್ರತಿಭಟನೆ ಮಾಡಿದ ಕುರುಬೂರು ಶಾಂತಕುಮಾರ್. (ಚಿತ್ರ ಕೃಪೆ: ರವಿ, ಕನ್ನಡಪ್ರಭ)

910

ಪ್ರತಿಭಟನೆಯ ಮಧ್ಯೆ ರೈತರೊಬ್ಬರು ಮರಕ್ಕೆ ನೇಣು ಬಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ತಕ್ಷ ಪೊಲೀಸರು ರೈತರು ಸಮಾಧಾನ ಪಡಿಸಿ ರೈತರನ್ನು ಆತ್ಮಹತ್ಯೆ ಮಾಡಿಕೊಳ್ಳುವುದರನ್ನು ತಡೆದಿದ್ದಾರೆ. (ಚಿತ್ರ ಕೃಪೆ: ರವಿ, ಕನ್ನಡಪ್ರಭ)

1010

ಕಾವೇರಿ ಉಳಿಸಿ ಎಂದು ಘೋಷಣೆಯನ್ನ ಕೂಗಿ ರಸ್ತೆಯಲ್ಲಿ ಮಲಗಿ ರೈತರು ಪ್ರತಿಭಟನೆಯನ್ನ ನಡೆಸಿದ್ದಾರೆ. ಇನ್ನು ಕೆಲವು ರೈತರು ಅರೆಬೆತ್ತಲೆ ಮೆರವಣಿಗೆ ಮಾಡುವ ಮೂಲಕ ರಾಜ್ಯ ಸರ್ಕಾರ ಕಣ್ಣು ತೆರೆಸುವ ಪ್ರಯತ್ನ ಮಾಡಿದ್ದಾರೆ. (ಚಿತ್ರ ಕೃಪೆ: ರವಿ, ಕನ್ನಡಪ್ರಭ)

About the Author

GG
Girish Goudar
ಏಷ್ಯಾನೆಟ್‌ ಸುವರ್ಣ ನ್ಯೂಸ್‌.ಕಾಮ್‌ನಲ್ಲಿ ಹಿರಿಯ ಉಪ ಸಂಪಾದಕ. ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದೇನೆ. ನನ್ನ ಊರು ಬಾಗಲಕೋಟೆ ಜಿಲ್ಲೆಯ ಹುನಗುಂದ . ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂಎಸ್‌ಸಿ ಎಲೆಕ್ಟ್ರಾನಿಕ್‌ ಮೀಡಿಯಾ ಪದವಿ ಪಡೆದಿದ್ದೇನೆ. ಈಟಿವಿ ಭಾರತ್‌, ವೇ ಟು ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಕ್ರೀಡೆ, ಚಲನಚಿತ್ರ, ರಾಜಕೀಯ ಸುದ್ದಿಗಳ ಬಗ್ಗೆ ಅತೀವ ಆಸಕ್ತಿ ಇದೆ. ಸಂಗೀತ ಕೇಳುವುದು, ಕ್ರಿಕೆಟ್‌ ಆಡುವುದು ನೆಚ್ಚಿನ ಹವ್ಯಾಸಗಳಾಗಿವೆ.
ರೈತರು
ಪ್ರತಿಭಟನೆ
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved