MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಕೊಲ್ಲಿ ದೇಶದಲ್ಲಿ ಯುದ್ಧ: ಇಂಧನ ಸಿಗದ ಭೀತಿ ಕರ್ನಾಟಕದ ಅಲ್ಲಲ್ಲಿ ಪಂಪ್ ಮುಂದೆ ಕ್ಯೂ ನಿಂತ ವಾಹನ ಸವಾರರು!

ಕೊಲ್ಲಿ ದೇಶದಲ್ಲಿ ಯುದ್ಧ: ಇಂಧನ ಸಿಗದ ಭೀತಿ ಕರ್ನಾಟಕದ ಅಲ್ಲಲ್ಲಿ ಪಂಪ್ ಮುಂದೆ ಕ್ಯೂ ನಿಂತ ವಾಹನ ಸವಾರರು!

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀತಿಯಿಂದಾಗಿ ಕರ್ನಾಟಕದ ಭಟ್ಕಳ, ಬೆಂಗಳೂರು ಸೇರಿದಂತೆ ಹಲವೆಡೆ ಪೆಟ್ರೋಲ್ ಬಂಕ್‌ಗಳಲ್ಲಿ ಜನಜಂಗುಳಿ ಉಂಟಾಗಿದೆ. ಇರಾನ್ ಹೋರ್ಮುಜ್ ಜಲಸಂಧಿಯನ್ನು ಬಂದ್ ಮಾಡುವ ಎಚ್ಚರಿಕೆ ನೀಡಿರುವುದರಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಆತಂಕ ಸೃಷ್ಟಿಯಾಗಿದೆ.

3 Min read
Author : Gowthami K
Published : Mar 04 2026, 01:27 PM IST
Share this Photo Gallery
  • FB
  • TW
  • Linkdin
  • Whatsapp
19
ಇಂಧನದ ದರ ಭಾರೀ ಪ್ರಮಾಣದಲ್ಲಿ ಏರಿಕೆ
Image Credit : Asianet News

ಇಂಧನದ ದರ ಭಾರೀ ಪ್ರಮಾಣದಲ್ಲಿ ಏರಿಕೆ

ಭಟ್ಕಳ: ಮಧ್ಯಪ್ರಾಚ್ಯದಲ್ಲಿ ಉಲ್ಬಣವಾಗುತ್ತಿರುವ ಯುದ್ಧಸನ್ನಿವೇಶದ ಹಿನ್ನೆಲೆ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಬಹುದು ಹಾಗೂ ಇಂಧನದ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಬಹುದು ಎಂಬ ವದಂತಿ ಹರಡುತ್ತಿದ್ದಂತೆ, ರಾಜ್ಯದ ಹಲವು ನಗರಗಳಲ್ಲಿ ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನಗಳ ಉದ್ದ ಸಾಲು ಕಂಡುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣ, ಬೆಂಗಳೂರಿನ ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನಗಳ ಉದ್ದ ಸಾಲು ಕಂಡುಬಂದಿದೆ.

29
ಮಂಗಳೂರಿನ ಎಂಆರ್‌ಪಿಎಲ್ ಘಟಕಗಳಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದೆ
Image Credit : Asianet News

ಮಂಗಳೂರಿನ ಎಂಆರ್‌ಪಿಎಲ್ ಘಟಕಗಳಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದೆ

ಮುನ್ನೆಚ್ಚರಿಕೆಯಾಗಿ ಜನರು ತಮ್ಮ ವಾಹನಗಳಿಗೆ ಇಂಧನ ತುಂಬಿಸಿಕೊಳ್ಳಲು ಧಾವಿಸಿರುವುದರಿಂದ ಕೆಲವೆಡೆ ತಾತ್ಕಾಲಿಕ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದೆ ಉಡುಪಿ ಮತ್ತು ಮಂಗಳೂರಿನ ಎಂಆರ್‌ಪಿಎಲ್ ಘಟಕಗಳಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದೆ, ಸದ್ಯಕ್ಕೆ ಯಾವುದೇ ಆತಂಕ ಅಗತ್ಯವಿಲ್ಲ ಎಂಬ ಮಾಹಿತಿ ಹೊರಬಿದ್ದಿತ್ತು. ಆದಾಗ್ಯೂ, ಯುದ್ಧದ ವ್ಯಾಪ್ತಿ ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಮತ್ತೆ ಭೀತಿ ಮೂಡಿದೆ.

Related Articles

Related image1
ಇರಾನ್​-ಅಮೆರಿಕ ಸಂಘರ್ಷ: ಭಾರತದ ಇಂಧನ ಜೀವನಾಡಿಯೇ ಕಟ್​! ಎದುರಾಗಲಿದೆ ಭಾರಿ ಸಂಕಷ್ಟ?
Related image2
ಮಧ್ಯಪ್ರಾಚ್ಯ ಸಂಘರ್ಷ: ಭಾರತ ಇನ್ನೂ ಕಾಯುವುದು ಸೂಕ್ತವಲ್ಲ, ತೈಲ, ಚಿನ್ನದ ಆಮದು ಅವಲಂಬನೆಗೆ ಅನಿಲ್ ಆರ್ಥಿಕ ಸಲಹೆ
39
ಸಂಘರ್ಷ 12ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪ್ತಿ
Image Credit : ANI

ಸಂಘರ್ಷ 12ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪ್ತಿ

ಇದುವರೆಗೆ ಇರಾನ್, ಇಸ್ರೇಲ್, ಸೌದಿ ಅರೇಬಿಯಾ, ಯುಎಇ, ಕುವೈತ್, ಬಹ್ರೈನ್ ಹಾಗೂ ಕತಾರ್ ದೇಶಗಳಿಗೆ ಸೀಮಿತವಾಗಿದ್ದ ಸಂಘರ್ಷ ಇದೀಗ ಲೆಬನಾನ್ ಮತ್ತು ಸೈಪ್ರಸ್ ಸೇರಿದಂತೆ ಒಟ್ಟು 12ಕ್ಕೂ ಹೆಚ್ಚು ರಾಷ್ಟ್ರಗಳಿಗೆ ವ್ಯಾಪಿಸಿದೆ. ಸೈಪ್ರಸ್‌ನಲ್ಲಿರುವ ಬ್ರಿಟನ್ ಸೇನಾ ನೆಲೆಗಳ ಮೇಲೆ ಇರಾನ್ ಡ್ರೋನ್ ದಾಳಿಗೆ ಯತ್ನಿಸಿರುವ ವರದಿಗಳು ಹೊರಬಂದಿವೆ. ಈ ಬೆಳವಣಿಗೆಯ ಬೆನ್ನಲ್ಲೇ ಫ್ರಾನ್ಸ್, ಬ್ರಿಟನ್, ಜರ್ಮನಿ ಸೇರಿದಂತೆ ನ್ಯಾಟೋ ರಾಷ್ಟ್ರಗಳು ಅಮೆರಿಕಾ–ಇಸ್ರೇಲ್ ಪರವಾಗಿ ನಿಲ್ಲಲು ಮುಂದಾಗಿವೆ. ಇದರಿಂದ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

49
ಹೋರ್ಮುಜ್ ಜಲಸಂಧಿ ಬಂದ್: ಜಾಗತಿಕ ಇಂಧನ ಮಾರುಕಟ್ಟೆಗೆ ಹೊಡೆತ
Image Credit : X

ಹೋರ್ಮುಜ್ ಜಲಸಂಧಿ ಬಂದ್: ಜಾಗತಿಕ ಇಂಧನ ಮಾರುಕಟ್ಟೆಗೆ ಹೊಡೆತ

 ತೈಲ ನಿಕ್ಷೇಪಗಳಲ್ಲಿ ಪ್ರಮುಖ ಸ್ಥಾನದಲ್ಲಿರುವ ಇರಾನ್ ಯುದ್ಧಗ್ರಸ್ತವಾಗಿರುವ ಸಂದರ್ಭದಲ್ಲೇ, ಜಗತ್ತಿನ ಬಹುಪಾಲು ಕಚ್ಚಾ ತೈಲ ಸಾಗುವ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯನ್ನು ಸಂಪೂರ್ಣ ಬಂದ್ ಮಾಡಿರುವುದಾಗಿ ಘೋಷಿಸಿದೆ. ‘ಅಲ್ಲಿಂದ ಸಾಗುವ ಎಲ್ಲಾ ಹಡಗುಗಳನ್ನು ಸುಟ್ಟುಹಾಕುತ್ತೇವೆ’ ಎಂದು ಇರಾನ್ ಎಚ್ಚರಿಕೆ ನೀಡಿದೆ.

ಇರಾನ್ ರೆವಲ್ಯೂಷನರಿ ಗಾರ್ಡ್‌ನ ಸಲಹೆಗಾರ ಬ್ರಿಗೇಡಿಯರ್ ಜನರಲ್ ಜಬ್ಬಾರಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, “ಹೋರ್ಮುಜ್ ಜಲಸಂಧಿ ಮುಚ್ಚಲಾಗಿದೆ. ಈ ಪ್ರದೇಶದಿಂದ ಯಾವುದೇ ಹಡಗು ಸಾಗಲು ಅವಕಾಶ ನೀಡುವುದಿಲ್ಲ. ದುಸ್ಸಾಹಸಕ್ಕೆ ಕೈ ಹಾಕಿದರೆ ಆ ನೌಕೆಗಳಿಗೆ ಬೆಂಕಿ ಹಚ್ಚಲಾಗುವುದು. ಪರಿಣಾಮವಾಗಿ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 200 ಡಾಲರ್ ದಾಟಬಹುದು,” ಎಂದು ಎಚ್ಚರಿಸಿದ್ದಾರೆ. ಜೊತೆಗೆ, ಪೈಪ್‌ಲೈನ್‌ಗಳನ್ನು ಧ್ವಂಸ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ.

59
ಇರಾನ್ ಹೋರ್ಮುಜ್ ಜಲಸಂಧಿಯನ್ನು ಮುಚ್ಚುವ ಪ್ರಕ್ರಿಯೆ ಆರಂಭ
Image Credit : X

ಇರಾನ್ ಹೋರ್ಮುಜ್ ಜಲಸಂಧಿಯನ್ನು ಮುಚ್ಚುವ ಪ್ರಕ್ರಿಯೆ ಆರಂಭ

ಮಾರ್ಚ್ 1ರಂದು ಹೋರ್ಮುಜ್ ಮೂಲಕ ಕೇವಲ ಮೂರು ಟ್ಯಾಂಕರ್‌ಗಳು 28 ಲಕ್ಷ ಬ್ಯಾರಲ್ ತೈಲವನ್ನು ಸಾಗಿಸಿವೆ. ಇದು ಸಾಮಾನ್ಯ ದಿನದ ಸರಾಸರಿಗಿಂತ ಶೇ.86ರಷ್ಟು ಕುಸಿತವಾಗಿದೆ. ಪರಿಣಾಮವಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.10ರಷ್ಟು ಏರಿಕೆಯಾದರೆ, ಯುರೋಪಿಯನ್ ಅನಿಲದ ಬೆಲೆ ಶೇ.40ಕ್ಕಿಂತ ಹೆಚ್ಚು ಜಿಗಿದಿದೆ. ಮೂಲಗಳ ಪ್ರಕಾರ, ಅಮೆರಿಕಾ ದಾಳಿಯ ಹಿನ್ನೆಲೆ ಕುದಿಯುತ್ತಿರುವ ಇರಾನ್ ಹೋರ್ಮುಜ್ ಜಲಸಂಧಿಯನ್ನು ಮುಚ್ಚುವ ಪ್ರಕ್ರಿಯೆ ಆರಂಭಿಸಿದೆ. ಇದು ಜಗತ್ತಿನ ಪ್ರಮುಖ ತೈಲ ಸಾಗರ ಮಾರ್ಗವಾಗಿರುವುದರಿಂದ, ಹಡಗುಗಳ ಸಂಚಾರ ಸ್ಥಗಿತಗೊಂಡರೆ ಜಾಗತಿಕ ಮಾರುಕಟ್ಟೆಯಲ್ಲಿ ತೈಲದ ಬೆಲೆ ಮತ್ತಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ.

69
ಭಾರತದಲ್ಲಿ ಇಂಧನ ದಾಸ್ತಾನು ಎಷ್ಟು?
Image Credit : X

ಭಾರತದಲ್ಲಿ ಇಂಧನ ದಾಸ್ತಾನು ಎಷ್ಟು?

ಭಾರತವು ಜಗತ್ತಿನ ಮೂರನೇ ಅತಿದೊಡ್ಡ ತೈಲ ಆಮದುದಾರ ದೇಶವಾಗಿದೆ. ಪ್ರಸ್ತುತ ದೇಶದಲ್ಲಿ ಸುಮಾರು 10 ದಿನಗಳಿಗೆ ಸಾಕಾಗುವಷ್ಟು ಕಚ್ಚಾ ತೈಲ ಹಾಗೂ 5–7 ದಿನಗಳಿಗೆ ಸಾಕಾಗುವಷ್ಟು ಸಿದ್ಧ ಇಂಧನದ ದಾಸ್ತಾನು ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದ ಮಂಗಳೂರಿನಲ್ಲಿ 15 ಲಕ್ಷ ಮೆಟ್ರಿಕ್ ಟನ್, ಉಡುಪಿಯ ಪಾದೂರಿನಲ್ಲಿ 25 ಲಕ್ಷ ಮೆಟ್ರಿಕ್ ಟನ್ ಮತ್ತು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ 13.3 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಭೂಗತ ತೈಲ ಸಂಗ್ರಹಣಾ ಕೇಂದ್ರಗಳಿವೆ. ಈ ಮೂರು ಭೂಗತ ಸಂಗ್ರಹಣಾ ಕೇಂದ್ರಗಳಿಂದ ದೇಶದ ವಿವಿಧ ಭಾಗಗಳಿಗೆ ಇಂಧನ ಪೂರೈಸಲಾಗುತ್ತದೆ. ಮಂಗಳೂರು ಹಾಗೂ ಪಾದೂರು ಘಟಕಗಳಲ್ಲಿ ಸದ್ಯಕ್ಕೆ ಸಮರ್ಪಕ ಪ್ರಮಾಣದ ತೈಲ ಸಂಗ್ರಹವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ಒಟ್ಟು ಇಂಧನ ಸಂಗ್ರಹವು ಸುಮಾರು 74 ದಿನಗಳ ಬೇಡಿಕೆಯನ್ನು ಪೂರೈಸಬಲ್ಲದು ಎಂಬ ಅಂದಾಜು ಇದೆ. ಆದರೆ ಭಾರತದ ಎಲ್‌ಪಿಜಿ ಆಮದಿನಲ್ಲಿ ಶೇ.80–85ರಷ್ಟು ಕೊಲ್ಲಿ ರಾಷ್ಟ್ರಗಳ ಮೇಲೆ ಅವಲಂಬಿತವಾಗಿರುವುದರಿಂದ, ಪ್ರಸ್ತುತ ದಾಸ್ತಾನು ಕೇವಲ ಎರಡು ವಾರಗಳಿಗೆ ಸಾಕಾಗುವ ಸಾಧ್ಯತೆ ಇದೆ.

79
ಬೆಲೆ ಏರಿಕೆಯ ಭೀತಿ
Image Credit : X

ಬೆಲೆ ಏರಿಕೆಯ ಭೀತಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈಗಾಗಲೇ ಕಚ್ಚಾ ತೈಲದ ಬೆಲೆ ಜನವರಿಗಿಂತ ಶೇ.16ರಷ್ಟು ಏರಿಕೆಯಾಗಿದೆ. ಪ್ರಸ್ತುತ ಪ್ರತಿ ಬ್ಯಾರಲ್‌ಗೆ ಸುಮಾರು ₹6,830 ಇರುವ ದರ ಮುಂದಿನ ದಿನಗಳಲ್ಲಿ ₹7,286 ಅಥವಾ ಅದಕ್ಕಿಂತ ಹೆಚ್ಚಾಗುವ ಸಾಧ್ಯತೆ ತಜ್ಞರು ವ್ಯಕ್ತಪಡಿಸಿದ್ದಾರೆ. ಹೋರ್ಮುಜ್ ಜಲಸಂಧಿ ದೀರ್ಘಕಾಲ ಬಂದ್ ಆಗಿದ್ದರೆ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

89
ಸರ್ಕಾರದ ತುರ್ತು ಕ್ರಮಗಳು
Image Credit : X

ಸರ್ಕಾರದ ತುರ್ತು ಕ್ರಮಗಳು

ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಹಲವು ತುರ್ತು ಕ್ರಮಗಳಿಗೆ ಮುಂದಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ರಫ್ತನ್ನು ನಿಯಂತ್ರಿಸುವುದು, ರಷ್ಯಾದಿಂದ ಕಚ್ಚಾ ತೈಲ ಆಮದು ಹೆಚ್ಚಿಸುವುದು ಹಾಗೂ ರಾಜ್ಯ ರಿಫೈನರಿಗಳಲ್ಲಿ ಎಲ್‌ಪಿಜಿ ಉತ್ಪಾದನೆಯನ್ನು ವೃದ್ಧಿಸುವುದು ಸೇರಿದಂತೆ ಪರ್ಯಾಯ ವ್ಯವಸ್ಥೆಗಳನ್ನು ಪರಿಗಣಿಸಲಾಗುತ್ತಿದೆ.

99
ಜನರಿಗೆ ಮನವಿ
Image Credit : X

ಜನರಿಗೆ ಮನವಿ

ಭಟ್ಕಳ ಸೇರಿದಂತೆ ಹಲವೆಡೆ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಆತಂಕದಿಂದ ಇಂಧನ ತುಂಬಿಸಿಕೊಳ್ಳಲು ಮುಂದಾಗಿದ್ದಾರೆ. ಆದರೆ ಅಧಿಕಾರಿಗಳು ಸದ್ಯಕ್ಕೆ ಯಾವುದೇ ತಕ್ಷಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜನರು ವದಂತಿಗಳಿಗೆ ಕಿವಿಗೊಡದೇ, ಅಧಿಕೃತ ಮಾಹಿತಿಯನ್ನೇ ನಂಬಿ ಶಾಂತವಾಗಿರಬೇಕೆಂದು ಮನವಿ ಮಾಡಲಾಗಿದೆ. ಒಟ್ಟಾರೆ, ಮಧ್ಯಪ್ರಾಚ್ಯದ ಯುದ್ಧಾತಂಕ ಜಾಗತಿಕ ಇಂಧನ ಮಾರುಕಟ್ಟೆಯನ್ನು ಕದಡಿದ್ದು, ಅದರ ಪರಿಣಾಮ ಭಾರತದಲ್ಲಿಯೂ ಕಂಡುಬರುವ ಸಾಧ್ಯತೆ ಇದೆ. ಆದರೆ ಸರ್ಕಾರದ ಮುನ್ನೆಚ್ಚರಿಕಾ ಕ್ರಮಗಳಿಂದ ತಕ್ಷಣದ ಅಭಾವ ಉಂಟಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಪೆಟ್ರೋಲ್ ಬೆಲೆ
ಡೀಸೆಲ್ ಬೆಲೆ
ಅಂತರರಾಷ್ಟ್ರೀಯ ಸುದ್ದಿ
ಇಸ್ರೇಲ್
ಇರಾನ್

Latest Videos
Recommended Stories
Recommended image1
ಅಡುಗೆ ಮನೆಯಲ್ಲಿ ಅತ್ತೆಯದ್ದೇ ರಾಜ್ಯಭಾರ: ಸಾವಿಗೆ ಶರಣಾದ ಟೆಕ್ಕಿ ಸೊಸೆ: ಅತ್ತೆ ಪರಾರಿ
Recommended image2
Iran-Israel War: 5 ದಿನಗಳಿಂದ ನಿಂತಲ್ಲೇ ನಿಂತ ಹಡಗು, ಕತಾರ್ ಬಂದರಿನಲ್ಲಿ ಸಿಲುಕಿದ ಬಸವನಗುಡಿಯ 8 ಮಂದಿ ವೃದ್ಧರು!
Recommended image3
ಚಿಕ್ಕಮಗಳೂರು: ಚೀಲದಲ್ಲಿ ಗೋವಿನ ಕಳೇಬರ ತುಂಬಿ ರಸ್ತೆಗೆಸೆದು ಹೋದ ದುಷ್ಕರ್ಮಿಗಳು : ಪ್ರತಿಭಟಿಸಿದವರ ವಿರುದ್ಧ FIR
Related Stories
Recommended image1
ಇರಾನ್​-ಅಮೆರಿಕ ಸಂಘರ್ಷ: ಭಾರತದ ಇಂಧನ ಜೀವನಾಡಿಯೇ ಕಟ್​! ಎದುರಾಗಲಿದೆ ಭಾರಿ ಸಂಕಷ್ಟ?
Recommended image2
ಮಧ್ಯಪ್ರಾಚ್ಯ ಸಂಘರ್ಷ: ಭಾರತ ಇನ್ನೂ ಕಾಯುವುದು ಸೂಕ್ತವಲ್ಲ, ತೈಲ, ಚಿನ್ನದ ಆಮದು ಅವಲಂಬನೆಗೆ ಅನಿಲ್ ಆರ್ಥಿಕ ಸಲಹೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved