MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • Gopooja| ರಾಜ್ಯದ ದೇಗುಲಗಳಲ್ಲಿ ದೀಪಾವಳಿ ಗೋಪೂಜೆ

Gopooja| ರಾಜ್ಯದ ದೇಗುಲಗಳಲ್ಲಿ ದೀಪಾವಳಿ ಗೋಪೂಜೆ

ಬೆಂಗಳೂರು(ನ.07):  ದೀಪಾವಳಿ(Deepavali) ಹಿನ್ನೆಲೆಯಲ್ಲಿ ರಾಜ್ಯದ(Karnataka) ಎಲ್ಲಾ ದೇಗುಲಗಳಲ್ಲಿ(Temple) ಸರ್ಕಾರದ ನಿರ್ದೇಶನದಂತೆ ಶುಕ್ರವಾರ ಗೋಪೂಜೆ ನಡೆಸಲಾಯಿತು. ಗೋವುಗಳ ಕುರಿತು ಜಾಗೃತಿ ಮೂಡಿಸಲು ಮತ್ತು ಗೋ ಉತ್ಪನ್ನಗಳ ಖರೀದಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.

2 Min read
Kannadaprabha News | Asianet News
Published : Nov 07 2021, 08:11 AM IST| Updated : Nov 07 2021, 08:16 AM IST
Share this Photo Gallery
  • FB
  • TW
  • Linkdin
  • Whatsapp
17

ಬೀದರ್‌ ಜಿಲ್ಲೆಯ ಔರಾದ್‌ನ ಅಮರೇಶ್ವರ ದೇಗುಲದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌, ಬೆಳಗಾವಿಯ ಕಪಿಲೇಶ್ವರ ಮಂದಿರದಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ. ನಾಗರಾಜು, ನಂಜನಗೂಡು ನಂಜುಂಡೇಶ್ವರ ಸನ್ನಿಧಿಯಲ್ಲಿ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಮಂಡ್ಯದ ಮೇಲುಕೋಟೆ ಚಲುವರಾಯಸ್ವಾಮಿ ಸನ್ನಿಧಿಯಲ್ಲಿ ಶಾಸಕ ಸಿ.ಎಸ್‌.ಪುಟ್ಟರಾಜು, ಚಾಮುಂಡಿಬೆಟ್ಟದಲ್ಲಿ ಶಾಸಕ ಜಿ.ಟಿ. ದೇವೇಗೌಡ ದಂಪತಿ ಸೇರಿ ವಿವಿಧೆಡೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗೋಪೂಜೆ ಸಾಂಗವಾಗಿ ನೆರವೇರಿತು.

27

ಈ ಸಂದರ್ಭದಲ್ಲಿ ಮಾತನಾಡಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌, ದೇಶದಲ್ಲಿಯೇ ಗೋವುಗಳ ಸಂರಕ್ಷಣೆಗೆ ವಿಶೇಷ ಕಾಳಜಿ ವಹಿಸಿದ ಖ್ಯಾತಿ ರಾಜ್ಯ ಬಿಜೆಪಿ(BJP) ಸರ್ಕಾರಕ್ಕೆ ಸಲ್ಲುತ್ತದೆ. ಈಗಾಗಲೇ ರಾಜ್ಯದ ಕೆಲವೆಡೆ ಪಶುಗಳಿಗಾಗಿಯೇ ಆ್ಯಂಬುಲೆನ್ಸ್‌(Ambulance) ಒದಗಿಸಲಾಗಿದ್ದು, ಮುಂದೆ ಪ್ರತಿ ತಾಲೂಕಿಗೂ ಆ್ಯಂಬುಲೆನ್ಸ್‌ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆ ಬಗ್ಗೆ ಕೇಂದ್ರ ಸರ್ಕಾರ(Central Government) ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

37

ಉಡುಪಿ ಸಮೀಪದ ದೊಡ್ಡಣಗುಡ್ಡೆಯ ಅಂಬೇಡ್ಕರ್‌ ಕಾಲನಿಯ ದಲಿತರ ಮನೆಯಲ್ಲಿ ಗೋಪೂಜೆ(Gopooja) ನೆರವೇರಿಸಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ

47

ವಿಧವೆ ಕಮಲಮ್ಮ ಕೇವಲ 3 ಸೆಂಟ್ಸ್‌ ಜಮೀನಿನಲ್ಲಿ 50ಕ್ಕೂ ಹೆಚ್ಚು ಶುದ್ಧ ದೇಸಿ ಹಸುಗಳನ್ನು(Cow) ಪೋಷಿಸುತ್ತಿದ್ದಾರೆ. ಯಾವುದೇ ಲಾಭದ ಉದ್ದೇಶವಿಲ್ಲದೆ ನಡೆಸುತ್ತಿರುವ ಈ ಗೋಶಾಲೆಗೆ ಆಗಮಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೋವುಗಳಿಗೆ ತಿಲಕವಿಟ್ಟು, ಮಾಲೆ ಹಾಕಿ, ಅವಲಕ್ಕಿ, ಕಜ್ಜಾಯ ತಿನ್ನಿಸಿ, ಆರತಿ ಬೆಳಗಿದರು. ಬಳಿಕ ಇಲಾಖೆಯಿಂದ ಕಮಲಮ್ಮ ಮತ್ತು ಅವರ ಮಗನಿಗೆ ಸಚಿವರು ಹೊಸ ಬಟ್ಟೆ ಮತ್ತು ಸಿಹಿತಿಂಡಿ ಹಾಗೂ ಹಸುಗಳಿಗೆ ಒಂದು ಕ್ವಿಂಟಲ್‌ ಹಿಂಡಿಯನ್ನು ಉಡುಗೊರೆಯಾಗಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

57

ಗೋವುಗಳನ್ನು ಕಸಾಯಿಖಾನೆಗೆ ಕಳುಹಿಸುವುದನ್ನು ತಪ್ಪಿಸಲು ಮುಜರಾಯಿ ಇಲಾಖೆಯ ‘ಎ’ ಮತ್ತು ‘ಬಿ’ ಗ್ರೇಡ್‌ ದೇವಸ್ಥಾನದಲ್ಲಿ ಗೋಶಾಲೆಗಳನ್ನು ಆರಂಭಿಸುವ ಉದ್ದೇಶವಿದೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. 

67

ಬೆಳಗಾವಿ(Belagavi) ನಗರದಲ್ಲಿ ಮಾತನಾಡಿದ ಸಚಿವೆ ಜೊಲ್ಲೆ, ರಾಜ್ಯದ 250ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಮುಂಬರುವ ದಿನಗಳಲ್ಲಿ ಗೋಶಾಲೆ ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

77

ಜಿಲ್ಲಾವಾರು ಎ ಮತ್ತು ಬಿ ಗ್ರೇಡ್‌ ದೇವಸ್ಥಾನಗಳ ಪಟ್ಟಿ ಪಡೆದುಕೊಂಡು ಗೋಶಾಲೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು ಸುದ್ದಿಗಾರರಿಗೆ ಬೆಳಗಾವಿಯಲ್ಲಿ ತಿಳಿಸಿದರು. ಇದೇ ವೇಳೆ, ಅರ್ಚಕರ ಕುಟುಂಬಕ್ಕೆ ಆರೋಗ್ಯ ವಿಮೆ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ ಎಂದೂ ಮಾಹಿತಿ ನೀಡಿದರು.
 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ದೀಪಾವಳಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved