MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • Gruha Lakshmi, Gruha Jyoti Schemes ನಿಲ್ಲುತ್ತವೆಯೇ? ಹೊಸ ಅರ್ಜಿ ಏಕೆ? ಸ್ಪಷ್ಟನೆ ಕೊಟ್ಟ ಸಿಎಂ ಡಿಕೆ ಶಿವಕುಮಾರ್

Gruha Lakshmi, Gruha Jyoti Schemes ನಿಲ್ಲುತ್ತವೆಯೇ? ಹೊಸ ಅರ್ಜಿ ಏಕೆ? ಸ್ಪಷ್ಟನೆ ಕೊಟ್ಟ ಸಿಎಂ ಡಿಕೆ ಶಿವಕುಮಾರ್

'ಗೃಹಲಕ್ಷ್ಮಿ' ಮತ್ತು 'ಗೃಹಜ್ಯೋತಿ' ಯೋಜನೆಗಳು ನಿಲ್ಲುತ್ತವೆ ಎಂಬ ವದಂತಿಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಳ್ಳಿಹಾಕಿದ್ದಾರೆ. ನಕಲಿ ಫಲಾನುಭವಿಗಳನ್ನು ತೆಗೆದುಹಾಕಿ ಪಾರದರ್ಶಕತೆ ತರಲು ಮಾತ್ರ ದೃಢೀಕರಣ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

1 Min read
Author : Sathish Kumar KH
Published : Jun 14 2026, 03:27 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಬೆಂಗಳೂರು (ಜೂ.14): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ 'ಗೃಹಲಕ್ಷ್ಮಿ' ಮತ್ತು 'ಗೃಹಜ್ಯೋತಿ' ನಿಂತುಹೋಗುತ್ತವೆ ಎಂಬ ವದಂತಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೆರೆ ಎಳೆದಿದ್ದಾರೆ. ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರಿಯಲಿವೆ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
Image Credit : X/Twitter

ಕಳೆದ ಕೆಲವು ದಿನಗಳಿಂದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು ಅಥವಾ ದೃಢೀಕರಣ ನೀಡಬೇಕು ಎಂಬ ಸೂಚನೆ ಹೊರಬಿದ್ದ ಬೆನ್ನಲ್ಲೇ, ವಿರೋಧ ಪಕ್ಷಗಳು ಸರ್ಕಾರ ಹಣವಿಲ್ಲದೆ ಯೋಜನೆಗಳನ್ನು ನಿಲ್ಲಿಸಲು ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದ್ದವು. ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಡಿ.ಕೆ. ಶಿವಕುಮಾರ್, ಪ್ರತಿಪಕ್ಷಗಳ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

Related Articles

Related image1
₹2000 ಹಣ, ಉಚಿತ ವಿದ್ಯುತ್‌ ಪಡೆಯುತ್ತಿರುವವರೇ ಗಮನಿಸಿ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ದರೆ ಹೊಸದಾಗಿ ಅರ್ಜಿ ಹಾಕಿ!
Related image2
ಗೃಹಲಕ್ಷ್ಮಿ ಯಾವ ಮಹಿಳೆಯರಿಗೆ ಸ್ಥಗಿತವಾಗುತ್ತೆ? ಕ್ಲಾರಿಟಿ ಕೊಟ್ಟ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ದಿನೇಶ್ ಗೂಳಿಗೌಡ!
36
Image Credit : Asianet News

ಮರು ಅರ್ಜಿ ಸಲ್ಲಿಕೆ ಅಥವಾ ದೃಢೀಕರಣದ ಉದ್ದೇಶವೇನು?

ಯೋಜನೆಗಳನ್ನು ನಿಲ್ಲಿಸುವುದು ಸರ್ಕಾರದ ಉದ್ದೇಶವಲ್ಲ. ಬದಲಾಗಿ, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆ ತಲುಪುವಂತೆ ಮಾಡುವುದು ಸರ್ಕಾರದ ಗುರಿಯಾಗಿದೆ. 'ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

46
Image Credit : our own

ಈ ಬಗ್ಗೆ ಈಗಾಗಲೇ ಹಿರಿಯ ಅಧಿಕಾರಿಗಳು ಹಣ ಪೋಲಾಗುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಫಲಾನುಭವಿಗಳ ಹೆಸರು, ವಿಳಾಸ ಮತ್ತು ಬ್ಯಾಂಕ್ ಅಕೌಂಟ್ ನಂಬರ್ ಅನ್ನು ಖಚಿತಪಡಿಸಿಕೊಳ್ಳಲು ಈ ಪ್ರಕ್ರಿಯೆ ನಡೆಸಲಾಗುತ್ತಿದೆ' ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿವರಿಸಿದ್ದಾರೆ.

56
Image Credit : Social Media

ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಯೋಜನೆ:

'ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಯೋಜನೆಗಳು. ಬಡ ಮತ್ತು ಮಧ್ಯಮ ವರ್ಗದ ಜನರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ಇದು ಕೇವಲ ಫಲಾನುಭವಿಗಳ ದೃಢೀಕರಣದ ಪ್ರಕ್ರಿಯೆಯೇ ಹೊರತು ಯೋಜನೆ ಸ್ಥಗಿತಗೊಳಿಸುವ ಮುನ್ಸೂಚನೆಯಲ್ಲ' ಎಂದು ಡಿಕೆಶಿ ಹೇಳಿದ್ದಾರೆ.

66
Image Credit : our own

ಒಟ್ಟಿನಲ್ಲಿ, ತಾಂತ್ರಿಕ ಕಾರಣಗಳಿಗಾಗಿ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ಸರ್ಕಾರ ಮಾಹಿತಿ ನವೀಕರಣಕ್ಕೆ ಮುಂದಾಗಿದೆಯೇ ಹೊರತು, ಗ್ಯಾರಂಟಿಗಳಿಗೆ ಯಾವುದೇ ಕುತ್ತು ಬಂದಿಲ್ಲ ಎಂಬುದು ಸರ್ಕಾರದ ಸ್ಪಷ್ಟನೆಯಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಡಿ.ಕೆ. ಶಿವಕುಮಾರ್
ಗೃಹಲಕ್ಷ್ಮಿ ಯೋಜನೆ
ಸರ್ಕಾರಿ ಯೋಜನೆಗಳು

Latest Videos
Recommended Stories
Recommended image1
Karnataka Police: ಶಾಸಕರ ಶಿಫಾರಸಿಲ್ಲದೆ ಇನ್ನು ಪೊಲೀಸ್ ವರ್ಗಾವಣೆ? ಗೃಹ ಇಲಾಖೆ ಮಹತ್ವದ ಬದಲಾವಣೆ!
Recommended image2
Cockroach janata party: ಬೆಂಗಳೂರಿನಲ್ಲಿಂದು 'ಜಿರಳೆ'ಗಳ ಪ್ರತಿಭಟನೆ; ನಟ ಪ್ರಕಾಶ್ ರಾಜ್ ಭಾಗಿ!
Recommended image3
ಬೆಂಗಳೂರು ನಗರದಲ್ಲಿ 1 ಲಕ್ಷ ಗಿಡಗಳ ನಾಟಿಗೆ ಸಿದ್ಧತೆ; ಪ್ರತಿ ಪಾಲಿಕೆಗೂ 30 ಸಾವಿರ ಸಸಿ ನೆಡಲು ಸೂಚನೆ!
Related Stories
Recommended image1
₹2000 ಹಣ, ಉಚಿತ ವಿದ್ಯುತ್‌ ಪಡೆಯುತ್ತಿರುವವರೇ ಗಮನಿಸಿ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ದರೆ ಹೊಸದಾಗಿ ಅರ್ಜಿ ಹಾಕಿ!
Recommended image2
ಗೃಹಲಕ್ಷ್ಮಿ ಯಾವ ಮಹಿಳೆಯರಿಗೆ ಸ್ಥಗಿತವಾಗುತ್ತೆ? ಕ್ಲಾರಿಟಿ ಕೊಟ್ಟ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ದಿನೇಶ್ ಗೂಳಿಗೌಡ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved