MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಬಿಡದಿ ಟೌನ್‌ಶಿಪ್ ವಿವಾದ:ಭೂ ಮಾಫಿಯಾ ಖಂಡಿಸಿ ಹೋರಾಟಕ್ಕಿಳಿದ ಹೆಚ್‌ಡಿಡಿ, ಸೋನಿಯಾ ಗಾಂಧಿ, ರಾಹುಲ್‌ಗೆ ದೇವೇಗೌಡ ಪತ್ರ

ಬಿಡದಿ ಟೌನ್‌ಶಿಪ್ ವಿವಾದ:ಭೂ ಮಾಫಿಯಾ ಖಂಡಿಸಿ ಹೋರಾಟಕ್ಕಿಳಿದ ಹೆಚ್‌ಡಿಡಿ, ಸೋನಿಯಾ ಗಾಂಧಿ, ರಾಹುಲ್‌ಗೆ ದೇವೇಗೌಡ ಪತ್ರ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಪ್ರಸ್ತಾವಿತ ಬಿಡದಿ ಟೌನ್‌ಶಿಪ್‌ ಯೋಜನೆಯು ರೈತರ ಜಮೀನು ಕಬಳಿಸುವ ಭೂ ದಂಧೆಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಅನ್ಯಾಯದ ವಿರುದ್ಧ ಹೋರಾಟ ಘೋಷಿಸಿರುವ ಅವರು,  ಕಾಂಗ್ರೆಸ್ ವರಿಷ್ಠರಿಗೆ ಪತ್ರ ಬರೆದು  ಪ್ರಶ್ನಿಸಿದ್ದಾರೆ.

2 Min read
Author : Gowthami K
Published : May 18 2026, 11:36 AM IST
Share this Photo Gallery
  • FB
  • TW
  • Linkdin
  • Whatsapp
17
ಅನ್ಯಾಯದ ವಿರುದ್ಧ ತಾನು ಹೋರಾಟಕ್ಕೆ ದುಮುಕಿದ್ದೇನೆ
Image Credit : Asianet News

ಅನ್ಯಾಯದ ವಿರುದ್ಧ ತಾನು ಹೋರಾಟಕ್ಕೆ ದುಮುಕಿದ್ದೇನೆ

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದ ಭುಗಿಲೆದ್ದಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್‌.ಡಿ.ದೇವೇಗೌಡ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ಆರೋಪಗಳನ್ನು ಹೊರಿಸಿದ್ದಾರೆ. ಬಿಡದಿ ಟೌನ್‌ಶಿಪ್‌ ಹೆಸರಿನಲ್ಲಿ ರೈತರ ಜಮೀನನ್ನು ಕಬಳಿಸಿ ಭೂ ದಂಧೆ ನಡೆಸಲು ಯತ್ನಿಸಲಾಗುತ್ತಿದೆ ಎಂದು ಅವರು ಗಂಭೀರವಾಗಿ ಆರೋಪಿಸಿ, ಈ ಅನ್ಯಾಯದ ವಿರುದ್ಧ ತಾನು ಹೋರಾಟಕ್ಕೆ ದುಮುಕಿದ್ದೇನೆ ಎಂದು ಘೋಷಿಸಿದ್ದಾರೆ. ರಾಮನಗರ ಪ್ರದೇಶದಲ್ಲಿ ಭೂ ವ್ಯವಹಾರಗಳು ಮತ್ತು ಅಭಿವೃದ್ಧಿ ಪ್ರಾಧಿಕಾರಗಳ ಪುನರ್ರಚನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ದೇವೇಗೌಡರು ಹೇಳಿದ್ದಾರೆ.

Add Asianetnews Kannada as a Preferred SourcegooglePreferred
27
ಬಿಡದಿ ಅಭಿವೃದ್ಧಿ ಹೆಸರಿನಲ್ಲಿ ರಿಯಲ್‌ ಎಸ್ಟೇಟ್‌ ವ್ಯವಹಾರ
Image Credit : our own

ಬಿಡದಿ ಅಭಿವೃದ್ಧಿ ಹೆಸರಿನಲ್ಲಿ ರಿಯಲ್‌ ಎಸ್ಟೇಟ್‌ ವ್ಯವಹಾರ

ಈ ಕುರಿತು ಬೆಂಗಳೂರಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಆಶ್ರಯದಲ್ಲಿ ಭೂ ಮಾಫಿಯಾ ಬಲವಾಗಿ ಕಾರ್ಯನಿರ್ವಹಿಸುತ್ತಿದೆ. ಬಿಡದಿಯನ್ನು ಅಭಿವೃದ್ಧಿ ಹೆಸರಿನಲ್ಲಿ ರಿಯಲ್‌ ಎಸ್ಟೇಟ್‌ ವ್ಯವಹಾರಗಳ ಕೇಂದ್ರವನ್ನಾಗಿ ಪರಿವರ್ತಿಸಲು ಪ್ರಯತ್ನಿಸಲಾಗುತ್ತಿದೆ. ಈ ವಿವಾದದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಹೆಚ್‌. ಡಿ. ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿರುದ್ಧ ಮಾಡಿದ ಆರೋಪಗಳ ನಂತರವೇ ದೇವೇಗೌಡರ ಪ್ರತಿಕ್ರಿಯೆ ಮತ್ತಷ್ಟು ಪುಷ್ಠಿ ನೀಡಿದೆ

Related Articles

Related image1
ಹೋರಾಟದಲ್ಲೇ ಉರುಳಿದ 2025ರ ವರ್ಷ, ಬಿಡದಿ ಟೌನ್ ಶಿಪ್ ಯೋಜನೆ ರಾಮನಗರ ಬೆಂಗಳೂರು ದಕ್ಷಿಣವಾಗಿ ಬದಲಾಗಿದ್ದೆ ಸಾಧನೆ!
Related image2
ಬಿಡದಿ ಟೌನ್‌ಶಿಪ್ ಹೆಸರಲ್ಲಿ ರೈತರ ಭೂಮಿ ಲೂಟಿ, 20,000 ಸಾವಿರ ಎಕರೆ ಯಾರ ಹೆಸರಲ್ಲಿದೆ? ಡಿಕೆಶಿ ವಿರುದ್ಧ ಹೆಚ್‌ಡಿ ದೇವೇಗೌಡ ವಾಗ್ದಾಳಿ
37
ನಾನು ಪ್ರಧಾನಿ ಆದ ಊರಿನಲ್ಲಿ ನನಗೆ ನೋವುಂಟು ಮಾಡುತ್ತಿವೆ
Image Credit : Asianet News

ನಾನು ಪ್ರಧಾನಿ ಆದ ಊರಿನಲ್ಲಿ ನನಗೆ ನೋವುಂಟು ಮಾಡುತ್ತಿವೆ

ರಾಮನಗರ ಪ್ರದೇಶದ ಭೂ ವ್ಯವಹಾರಗಳು ಹಾಗೂ ಅಭಿವೃದ್ಧಿ ಪ್ರಾಧಿಕಾರಗಳ ಪುನರ್‌ರಚನೆ ಬಗ್ಗೆ ಆತಂಕ ವ್ಯಕ್ತಪಡಿಸಿದ ದೇವೇ ಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಅವರಿಗೆ ಪತ್ರ ಬರೆದಿದ್ದಾರೆ. ನಾನು ರಾಮನಗರದಿಂದಲೇ ರಾಜಕೀಯವಾಗಿ ಬೆಳೆದವನು. ಜನರ ಬೆಂಬಲದಿಂದ ಪ್ರಧಾನಿಯೂ ಆಗಿದ್ದೆ. ಆದರೆ ಈಗ ಅದೇ ಪ್ರದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನನಗೆ ನೋವುಂಟುಮಾಡುತ್ತಿವೆ, ಎಂದರು.

47
ಡಿಕೆಶಿ ಹೆಸರು ಉಲ್ಲೇಖಿಸದೆ ಆರೋಪ
Image Credit : DK Shivakumar HD Devegowda fb

ಡಿಕೆಶಿ ಹೆಸರು ಉಲ್ಲೇಖಿಸದೆ ಆರೋಪ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ಐದು ನಿಗಮಗಳ ರಚನೆ ಮತ್ತು ಅವುಗಳ ನಿಯಂತ್ರಣವನ್ನು ಭೂ ವ್ಯವಹಾರಗಳೊಂದಿಗೆ ಸಂಪರ್ಕಿಸಿ ದೇವೇಗೌಡರು ಪರೋಕ್ಷವಾಗಿ ಟೀಕಿಸಿದರು. ನೀರಾವರಿ ಸಚಿವರ ಅಧೀನದಲ್ಲಿರುವ ಈ ನಿಗಮಗಳ ಮೂಲಕ ಭೂ ಮಾಫಿಯಾ ಚಟುವಟಿಕೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು. ರೈತರ ಭೂಮಿಯನ್ನು ಕಿತ್ತುಕೊಂಡು ದಂಧೆ ನಡೆಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಒಬ್ಬರು ರೈತರಿಂದ ಹೊಡೆಸಿಕೊಳ್ಳುವೆ ಎಂದು ಹೇಳುತ್ತಾರೆ. ಮೊದಲು ಅವರು ಹೋಗಿ ಹೊಡೆಸಿಕೊಂಡು ಬರಲಿ, ನಂತರ ನಾನು ರೈತರನ್ನು ಭೇಟಿಯಾಗುತ್ತೇನೆ ಎಂದು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

57
ನಾನು ಅಳುತ್ತೇನೆ ಎಂದು ಕೆಲವರು ವ್ಯಂಗ್ಯ ಮಾಡುತ್ತಾರೆ
Image Credit : Google

ನಾನು ಅಳುತ್ತೇನೆ ಎಂದು ಕೆಲವರು ವ್ಯಂಗ್ಯ ಮಾಡುತ್ತಾರೆ

ಇದೇ ಸಂದರ್ಭದಲ್ಲಿ, ತಮ್ಮ ವಿರುದ್ಧ ಆಗಿದ್ದ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ದೇವೇಗೌಡರು, ನಾನು ಅಳುತ್ತೇನೆ ಎಂದು ಕೆಲವರು ವ್ಯಂಗ್ಯ ಮಾಡುತ್ತಾರೆ. ಆದರೆ ಇಂತಹ ವ್ಯವಸ್ಥೆಯನ್ನು ನೋಡಿ ನಾನು ನಗುತ್ತಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಹಳೆಯ ಸ್ನೇಹಿತರು. ಆದರೆ ನಡೆಯುತ್ತಿರುವ ಅನ್ಯಾಯವನ್ನು ಅವರು ಗಮನಿಸುತ್ತಿಲ್ಲ ಎಂಬುದು ನೋವು ತಂದಿದೆ ಎಂದರು.

ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ತಕ್ಷಣ ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು. ಹಿಂದೆ ಕುಮಾರಸ್ವಾಮಿ ಅವರು ಐದು ಟೌನ್‌ಶಿಪ್‌ ಯೋಜನೆಗಳನ್ನು ಪ್ರಸ್ತಾಪಿಸಿದಾಗ ಕಾಂಗ್ರೆಸ್‌ ನಾಯಕರು ಭಾರಿ ವಿರೋಧ ವ್ಯಕ್ತಪಡಿಸಿದ್ದರು. ಸತ್ಯಶೋಧನಾ ಸಮಿತಿಯೂ ರಚಿಸಲಾಯಿತು. ಆ ವರದಿಯಲ್ಲಿ ಏನು ಬಂದಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಜನರ ವಿರೋಧದ ಹಿನ್ನೆಲೆ ಆ ಯೋಜನೆಗಳನ್ನು ಕೈಬಿಡಲಾಯಿತು. ಈಗಲೂ ಬಿಡದಿಯಲ್ಲಿ ಜನರ ತೀವ್ರ ವಿರೋಧ ಇದೆ ಎಂದು ಹೇಳಿದರು.

67
ಬೆಂಗಳೂರು ಸುತ್ತಮುತ್ತ ಸುಮಾರು 20 ಸಾವಿರ ಎಕರೆ ಭೂಮಿ ಯಾರ ಹೆಸರಿನಲ್ಲಿದೆ
Image Credit : Asianet News

ಬೆಂಗಳೂರು ಸುತ್ತಮುತ್ತ ಸುಮಾರು 20 ಸಾವಿರ ಎಕರೆ ಭೂಮಿ ಯಾರ ಹೆಸರಿನಲ್ಲಿದೆ

ಇನ್ನೂ ಮುಂದುವರಿದು, ಬೆಂಗಳೂರು ಸುತ್ತಮುತ್ತ ಸುಮಾರು 20 ಸಾವಿರ ಎಕರೆ ಭೂಮಿ ಯಾರ ಹೆಸರಿನಲ್ಲಿ ಇದೆ ಎಂಬುದನ್ನು ತನಿಖೆ ನಡೆಸಬೇಕು ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ನೀವು, ಜನರ ಸಮಸ್ಯೆಯನ್ನು ಕೇಳಬೇಕು. ಬಿಡದಿಯ ರೈತರ ಕಷ್ಟವನ್ನು ಯಾರಾದರೂ ಕೇಳಿದ್ದೀರಾ? ಎಂದು ಪ್ರಶ್ನಿಸಿದರು.

77
ಸಿಎಂ ಸಿದ್ದರಾಮಯ್ಯ ಬಿಡದಿಗೆ ಭೇಟಿ ನೀಡಲು ಆಹ್ವಾನ
Image Credit : our own

ಸಿಎಂ ಸಿದ್ದರಾಮಯ್ಯ ಬಿಡದಿಗೆ ಭೇಟಿ ನೀಡಲು ಆಹ್ವಾನ

ಕೊನೆಗೆ, ಸಿಎಂ ಸಿದ್ದರಾಮಯ್ಯ ಅವರನ್ನು ಬಿಡದಿಗೆ ಭೇಟಿ ನೀಡಲು ಆಹ್ವಾನಿಸಿದ ದೇವೇಗೌಡರು, “ನಾನು ಕೂಡ ಬರುತ್ತೇನೆ. ನೀವು ಬನ್ನಿ, ರೈತರ ಸಮಸ್ಯೆಯನ್ನು ಸ್ಥಳದಲ್ಲೇ ನೋಡೋಣ. ಸ್ಥಳೀಯ ಅಧಿಕಾರಿಗಳು ಕೂಡ ಜನರ ಅಹವಾಲುಗಳನ್ನು ಕೇಳುತ್ತಿಲ್ಲ. ಇಲ್ಲಿ ಭಾರೀ ದಂಧೆ ನಡೆಯುತ್ತಿದೆ,” ಎಂದು ಆರೋಪಿಸಿದರು. ಕನಕಪುರ ಪ್ರದೇಶದಲ್ಲಿಯೂ ಭೂಸ್ವಾಧೀನದ ಕುರಿತು ತಮ್ಮ ಬಳಿ ಮಾಹಿತಿ ಇದೆ ಎಂದು ಸೂಚಿಸಿ, ಸರ್ಕಾರದ ವಿರುದ್ಧ ತಮ್ಮ ಹೋರಾಟ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಎಚ್‌.ಡಿ. ದೇವೇಗೌಡ
ಡಿ.ಕೆ. ಶಿವಕುಮಾರ್
ಸಿದ್ದರಾಮಯ್ಯ
ಕರ್ನಾಟಕ ಸುದ್ದಿ
ರಾಮನಗರ

Latest Videos
Recommended Stories
Recommended image1
ನಟ ದರ್ಶನ್ ಜಾಮೀನು ನಿರಾಕರಣೆ ಬಳಿಕ ಪತ್ನಿ ವಿಜಯಲಕ್ಷ್ಮಿ ಕಣ್ಣೀರು, ಭಾವುಕ ಪೋಸ್ಟ್
Recommended image2
ಮಹಿಳಾ ಕಸ್ಟಮ್ ಅಧಿಕಾರಿಗೆ ಲೈಂಗಿಕ ದೌರ್ಜನ್ಯ ಎಸಗಿ ವಂಚನೆ, ಆರೋಪಿ ಕೃಪಲಾನಿ ವಿರುದ್ಧ FIR
Recommended image3
ರಾಜ್ಯದ ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಕೈಗೆಟುಕುವ ಬೆಲೆಯಲ್ಲಿ ಬಿಯರ್, ಗರಿಷ್ಠ 75 ರೂ ಇಳಿಕೆ
Related Stories
Recommended image1
ಹೋರಾಟದಲ್ಲೇ ಉರುಳಿದ 2025ರ ವರ್ಷ, ಬಿಡದಿ ಟೌನ್ ಶಿಪ್ ಯೋಜನೆ ರಾಮನಗರ ಬೆಂಗಳೂರು ದಕ್ಷಿಣವಾಗಿ ಬದಲಾಗಿದ್ದೆ ಸಾಧನೆ!
Recommended image2
ಬಿಡದಿ ಟೌನ್‌ಶಿಪ್ ಹೆಸರಲ್ಲಿ ರೈತರ ಭೂಮಿ ಲೂಟಿ, 20,000 ಸಾವಿರ ಎಕರೆ ಯಾರ ಹೆಸರಲ್ಲಿದೆ? ಡಿಕೆಶಿ ವಿರುದ್ಧ ಹೆಚ್‌ಡಿ ದೇವೇಗೌಡ ವಾಗ್ದಾಳಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved