Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ರಾಜ್ಯದಲ್ಲಿ ನಾಳೆಯಿಂದ ಮುಂಗಾರು ಅಬ್ಬರ; 5 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ನಾಳೆಯಿಂದ ಮುಂಗಾರು ಅಬ್ಬರ; 5 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಜೂನ್ 10ರಿಂದ 13ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ.

Sathish Kumar KH | Published : Jun 10 2025, 04:10 PM
1 Min read
Share this Photo Gallery
  • FB
  • TW
  • Linkdin
  • Whatsapp
  • Google NewsFollow Us
14
Asianet Image
Image Credit : social media

ರಾಜ್ಯದಲ್ಲಿ ನಾಳೆಯಿಂದ ಮುಂಗಾರು ಚುರುಕು ಪಡೆಯಲಿದ್ದು, ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 10ರಿಂದ 13ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಯಲ್ಲೋ ಅಲರ್ಟ್ ಜಿಲ್ಲೆಗಳ ವಿವರ ಇಲ್ಲಿದೆ.

24
Asianet Image
Image Credit : pixal

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ನಾಳೆಯಿಂದಲೇ ಮುಂಗಾರು ಮಳೆಯ ಅಬ್ಬರ ಶುರುವಾಗಲಿದೆ. ರಾಜ್ಯದ ಕರಾವಳಿ ಭಾಗ, ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಕೆಲವು ಕಡೆ ಸಾಧಾರಣ ಮತ್ತು ಉತ್ತಮ ಮಳೆಯಾಗಲಿದೆ. ಇನ್ನು ಜೂನ್ 11ರಂದು ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

Related Articles

ಜೂನ್ 15ರವರೆಗೆ ರಾಜ್ಯದ ಈ ಭಾಗದಲ್ಲಿ ಗುಡುಗು-ಬಿರುಗಾಳಿ ಸಹಿತ ಮಳೆ; ಎಲ್ಲೆಲ್ಲಿ ರೆಡ್ ಅಲರ್ಟ್?
ಜೂನ್ 15ರವರೆಗೆ ರಾಜ್ಯದ ಈ ಭಾಗದಲ್ಲಿ ಗುಡುಗು-ಬಿರುಗಾಳಿ ಸಹಿತ ಮಳೆ; ಎಲ್ಲೆಲ್ಲಿ ರೆಡ್ ಅಲರ್ಟ್?
Karnataka Rains: ಮುಂಗಾರು ಮತ್ತೆ ಚುರುಕು: ಜೂ.11ರಿಂದ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ !
Karnataka Rains: ಮುಂಗಾರು ಮತ್ತೆ ಚುರುಕು: ಜೂ.11ರಿಂದ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ !
34
Asianet Image
Image Credit : social media

ಅದೇ ರೀತಿ ಜೂನ್ 12ರಂದು ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರ್ಗಿ, ಬೆಳಗಾವಿ, ಬಾಲಕೋಟೆ ಹಾಗೂ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಕೂಡಾ ಎಲ್ಲೋ ಅಲರ್ಟ್ ನೀಡಲಾಗಿದೆ.

44
Asianet Image
Image Credit : Asianet News

ಇದು ಮುಂಗಾರು ಮಾರುತಗಳ ಭಾರೀ ಚಲನೆಯ ಪ್ರಭಾವದಿಂದಾಗಿ ತೀವ್ರ ಮಳೆಯನ್ನು ನಿರೀಕ್ಷೆ ಮಾಡಬಹುದಾಗಿದೆ. ಹವಾಮಾನ ಇಲಾಖೆ ಅನಾಹುತಗಳನ್ನು ತಡೆಗಟ್ಟಲು ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಇನ್ನು ಮಳೆಯ ಸಂದರ್ಭದಲ್ಲಿ ಹಳ್ಳಗಳನ್ನು ದಾಟಿ ಹೋಗಿ ನೀರು ಬರುವಾಗ ದಾಟುವ ಪ್ರಯತ್ನ ಮಾಡಬಾರದು. ನದಿ ಮತ್ತು ಹಳ್ಳಗಳ ನಡುಗಡ್ಡೆಗಳನ್ನು ಪ್ರವೇಶ ಮಾಡದಂತೆ ಹವಾಮಾನ ಇಲಾಖೆ ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ಜಂಟಿಯಾಗಿ ಎಚ್ಚರಿಕೆ ನೀಡಿವೆ.

Sathish Kumar KH
About the Author
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ. Read More...
ಕರ್ನಾಟಕ ಹವಾಮಾನ
ಮಳೆ
ಕರ್ನಾಟಕ ಸುದ್ದಿ
 
Recommended Stories
Top Stories