MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ರಾಜ್ಯದಲ್ಲಿ ಮತ್ತೆ ಅಬ್ಬರದ ಬೇಸಿಗೆ ಮಳೆ ಶುರು; ಬೆಂಗಳೂರಲ್ಲಿ ಆಗುತ್ತಾ ವರುಣನ ಸಿಂಚನ?

ರಾಜ್ಯದಲ್ಲಿ ಮತ್ತೆ ಅಬ್ಬರದ ಬೇಸಿಗೆ ಮಳೆ ಶುರು; ಬೆಂಗಳೂರಲ್ಲಿ ಆಗುತ್ತಾ ವರುಣನ ಸಿಂಚನ?

Karnataka Rain Forecast: ಕರ್ನಾಟಕದಲ್ಲಿ ಕೆಲವು ದಿನಗಳ ವಿರಾಮದ ನಂತರ ಮತ್ತೆ ಬೇಸಿಗೆ ಮಳೆ ಆರಂಭವಾಗಲಿದೆ. ಏಪ್ರಿಲ್ 30 ರವರೆಗೆ ರಾಜ್ಯದ ವಿವಿಧೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

2 Min read
Author : Mahmad Rafik
| Updated : Apr 26 2025, 08:06 AM IST
Share this Photo Gallery
  • FB
  • TW
  • Linkdin
  • Whatsapp
17

ರಾಜ್ಯದಲ್ಲಿ ಕೆಲ ದಿನ ವಿರಾಮ ನೀಡಿದ್ದ ಬೇಸಿಗೆ ಮಳೆ ಮತ್ತೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 30ರವರೆಗೆ ರಾಜ್ಯದ ವಿವಿಧೆಡೆ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. (ಸಾಂದರ್ಭಿಕ ಚಿತ್ರ)

27
Bangalore Rain 01

Bangalore Rain 01

ಈ ಬಾರಿ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ಬಹುತೇಕ ಎಲ್ಲಾ ಭಾಗದಲ್ಲಿಯೂ ಮಳೆ ಕಡಿಮೆಯಾಗಿತ್ತು. ಇದೀಗ ಭಾನುವಾರದಿಂದ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)

37
Bangalore Rain 02

Bangalore Rain 02

ಏಪ್ರಿಲ್ 25 ರಿಂದ ಏಪ್ರಿಲ್ 28 ರವರೆಗೆ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ನಿರೀಕ್ಷೆಯಿದೆ. ಏಪ್ರಿಲ್ 29 ಮತ್ತು 30ರ ನಂತರ ಮಳೆಯ ಪ್ರಮಾಣ ಇಳಿಮುಖವಾಗಲಿದೆ.  (ಸಾಂದರ್ಭಿಕ ಚಿತ್ರ)

47
<p>bangalore rain</p>

<p>bangalore rain</p>

ಬೆಂಗಳೂರು ಹವಾಮಾನ

ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪಮಾನ ಇಂದು ಕನಿಷ್ಠ 2 ಡಿಗ್ರಿ ಸೆಲ್ಸಿಯಸ್‌ಷ್ಟು ಕಡಿಮೆಯಾಗಿದೆ. ಇಂದು ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಇಂದು ಗರಿಷ್ಠ 34.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಏಪ್ರಿಲ್ 27ರ ನಂತರ ರಾಜಧಾನಿಯ ಹವಾಮಾನದಲ್ಲಿ ವ್ಯತ್ಯಾಸವಾಗಲಿದೆ ಎಂದು ಅಂದಾಜಿಸಲಾಗಿದೆ. (ಸಾಂದರ್ಭಿಕ ಚಿತ್ರ)

57

ಕಲಬುರಗಿ ಜಿಲ್ಲಾದ್ಯಂತ ಶುಕ್ರವಾರ ಬಿರುಗಾಳಿ, ಗುಡುಗು ಸಮೇತ ಮಳೆ

ಜಿಲ್ಲೆಯ ಕಾಳಗಿ, ಚಿಂಚಳಿ, ಅಫಜಲ್ಪುರ, ಚಿತ್ತಾಪುರ, ಕಲಬುರಗಿ ನಗರದ ಸುತ್ತುಮುತ್ತಲೂ ಮಳೆ ಸುರಿದಿದೆ. ಮಳೆ ಹಾಗೂ ಗಾಳಿಯ ರಭಸಕ್ಕೆ ಚಿಂಚೋಳಿ-ಕಾಳಗಿ ರಸ್ತೆಯಲ್ಲಿ ಮರಗಳು ಉರುಳಿ ಬಿದ್ದು ಸಂಚಾರಕ್ಕೆ ಸಂಚಕಾರ ಬಂದಿದೆ. ಅಲ್ಲದೆ ಕಾಳಗಿ ಚಿಂಚೋಳಿ ‌ಮುಖ್ಯ ರಸ್ತೆಯಲ್ಲಿ ಗಿಡಮರಗಳು ಧರೆಗೆ ಉರುಳಿ ಬಿದ್ದಿವೆ. ಚಿಂಚೋಳಿ ಪಟ್ಟಣದಲ್ಲಿ ಭಾರಿ ಮಳೆ ಬಿರುಗಾಳಿಗೆ ಒಳಂಗಾಣ ಕ್ರೀಡಾಂಗಣಕ್ಕೆ ಅಳವಡಿಸಿದ ತಗಡುಗಳು ಗಾಳಿಗೆ ಹಾರಿ ಹೋಗಿ ದೂರ ಬಿದ್ದಿವೆ. (ಸಾಂದರ್ಭಿಕ ಚಿತ್ರ)

67
Bangalore Rain 05

Bangalore Rain 05

ಶೃಂಗೇರಿ ಸುತ್ತಮುತ್ತ ಮತ್ತೆ ಆರ್ಭಟಿಸಿದ ಮಳೆ

ಶೃಂಗೇರಿ ತಾಲೂಕಿನಾದ್ಯಂತ ಶುಕ್ರವಾರ ಮಧ್ಯಾಹ್ನದಿಂದ ಕೆಲಹೊತ್ತು ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಅಬ್ಬರಿಸಿತು. ಕೆಲ ದಿನಗಳಿಂದ ಸತತ ಮಳೆಯಾಗುತ್ತಿದ್ದು, ಬುಧವಾರವೂ ಭಾರೀ ಮಳೆಯಾಗಿತ್ತು. ಶುಕ್ರವಾರ ಮಧ್ಯಾಹ್ನ ಮೋಡ ಕವಿದ ವಾತಾವರಣದೊಂದಿಗೆ ಗುಡುಗು ಸಿಡಿಲು ಗಾಳಿ ಆರ್ಭಟದೊಂದಿಗೆ ಮಳೆ ಸುರಿಯಿತು. (ಸಾಂದರ್ಭಿಕ ಚಿತ್ರ)

77

ನೆಲಕ್ಕುರುಳಿದ ಮರಗಳು

ನವಲಗುಂದ ತಾಲೂಕಿನೆಲ್ಲೆಡೆ ಗುರುವಾರ ಸಂಜೆ ಸಿಡಿಲು. ಗುಡುಗು ಗಾಳಿ ಸಹಿತ ಭಾರಿ ಮಳೆಯಾಗಿದೆ. ಗಾಳಿಯ ರಭಸಕ್ಕೆ ಅಲ್ಲಲ್ಲಿ ಮರಗಳು ಬಿದ್ದು ವಿದ್ಯುತ್ ವ್ಯತ್ಯಯವಾಗಿದೆ. ಗುಮ್ಮಗೋಳ ಗ್ರಾಮದ ಜನ್ನತಬಿ ನದಾಫ್, ಮಹಮ್ಮದ್ಅಲಿ ಖಾದರ್ ನೇಕಾರ್, ಆಶಾಬಿ ಜೇರುಮ್ಮನವರ ಹಾಗೂ ಶಿರೂರು ಗ್ರಾಮದಲ್ಲಿ ಮನೆಯೊಂದರ ಚಾವಣಿ ಹಾರಿಹೋಗಿವೆ. (ಸಾಂದರ್ಭಿಕ ಚಿತ್ರ)

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮಳೆ
ಕರ್ನಾಟಕ ಹವಾಮಾನ

Latest Videos
Recommended Stories
Recommended image1
Karnataka News Live: ಗಾಂಧೀಜಿ ಪಾಕಿಸ್ತಾನಕ್ಕೆ ಪಿತಾಮಹ ಎಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಪ್ರಕರಣ
Recommended image2
ಬೆಂಗಳೂರು ಆಸ್ಪತ್ರೆಗಳಲ್ಲಿಅಂಡಾಣು ಮಾರಾಟ ದಂಧೆ
Recommended image3
ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಭುಗಿಲೆದ್ದ ಹೋರಾಟ - ನಿರುದ್ಯೋಗಿಗಳ ಸಿಟ್ಟು ಸ್ಫೋಟ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved