ಮಸೀದಿಯಲ್ಲಿ ಶ್ರೀರಾಮನನ್ನಿಟ್ಟು ಪೂಜಿಸಿದ ಮುಸ್ಲಿಮರು!
ಗದಗ (ಜ.22): ದೇಶಾದ್ಯಂತ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಗದಗ ಜಿಲ್ಲೆಯ ಹುಣಸಿಕಟ್ಟೆ ಗ್ರಾಮದಲ್ಲಿನ ಮಸೀದಿಯಲ್ಲಿ ಭಾರತಾಂಬೆ ಹಾಗೂ ಶ್ರೀರಾಮನನ್ನು ಇಟ್ಟು ಭಾವೈಕ್ಯತೆಯಿಂದ ಪೂಜೆ ಸಲ್ಲಿಸಲಾಯಿತು.

ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಮಸೀದಿಯಲ್ಲಿ ಪೂಜೆ, ಹೋಮವನ್ನು ಮಾಡಲಾಗಿದೆ.
ಹುಣಸಿಕಟ್ಟಿ ಗ್ರಾಮದ ಹಿಂದೂ- ಮುಸ್ಲಿಂ ಸಮುದಾಯದ ಮುಖಂಡರು ಸೇರಿ ಕಾರ್ಯಕ್ರಮವನ್ನು ಜಂಟಿಯಾಗಿ ನೆರವೇರಿಸಿದ್ದಾರೆ. ಮಸೀದಿಯ ಸುತ್ತಲೂ ಕೇಸರಿ ಹಾಗೂ ಹಸಿರು ಧ್ವಜಗಳಿಂದ ಅಲಂಕರಿಸಲಾಗಿತ್ತು.
ಶ್ರೀರಾಮನ ಸಣ್ಣ ಮೂರ್ತಿಯನ್ನಿಟ್ಟು ರುದ್ರಾಭಿಷೇಕ ಮಾಡಿ, ಭಾರತಮಾತೆಯ ಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಇನ್ನು ರಂಜಾನ್ ತಿಂಗಳಲ್ಲಿಯೂ ಕೂಡ ಈ ಮಸೀದಿಯಲ್ಲಿ ಆಲಿ ದೇವರ ಸಮ್ಮುಖದಲ್ಲಿ ಭಾರತ ಮಾತೆ ಫೋಟೋವನ್ನಿಟ್ಟು ಪೂಜೆ ಮಾಡಲಾಗುತ್ತದೆ.
ಭಾರತ ಮಾತೆ ಚಿತ್ರದ ಜೊತೆಗೆ ಕಳಸವಿಟ್ಟು ರುದ್ರಾಭಿಷೇಕ, ಪೂಜೆಯನ್ನ ನೆರವೇರಿಸಲಾಯಿತು. ಇದು ಇಡೀ ದೇಶದಲ್ಲಿನ ಭಾವೈಕ್ಯತೆಗೆ ಸಾಕ್ಷಿಯಾಗಿದೆ.
ಮಸೀದಿ ಕಮೀಟಿಯ ರಾಜು ಸಾಬ್ ಹೊಸಳ್ಳಿ, ರುತುಂ ಸಾಬ್ ಹೊಸಳ್ಳಿ ಸೇರಿದಂತೆ ಗ್ರಾಮದ ಹಲವು ಹಿಂದೂ ಮುಖಂಡರು ಕೂಡ ಶ್ರೀರಾಮ ಪೂಜೆಯಲ್ಲಿ ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ