MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಚಿನ್ನಸ್ವಾಮಿ ಕಾಲ್ತುಳಿತ ಸ್ಥಳ ಪರಿಶೀಲನೆ; ಯಾವ ಗೇಟಲ್ಲಿ ಎಷ್ಟು ಜನ ಸತ್ತಿದ್ದಾರೆ ಗೊತ್ತಿಲ್ಲವೆಂದ ಗೃಹ ಸಚಿವ!

ಚಿನ್ನಸ್ವಾಮಿ ಕಾಲ್ತುಳಿತ ಸ್ಥಳ ಪರಿಶೀಲನೆ; ಯಾವ ಗೇಟಲ್ಲಿ ಎಷ್ಟು ಜನ ಸತ್ತಿದ್ದಾರೆ ಗೊತ್ತಿಲ್ಲವೆಂದ ಗೃಹ ಸಚಿವ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. ಇನ್ನೂ 10 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

2 Min read
Author : Sathish Kumar KH
Published : Jun 05 2025, 02:30 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಬೆಂಗಳೂರು (ಜೂ. 5): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ‌ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ ಸ್ಥಳಗಳಿಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವ ಗೇಟಲ್ಲಿ ಎಷ್ಟು ಜನ ಕಾಲ್ತುಳಿತಕ್ಕೆ ಸತ್ತಿದ್ದಾರೆ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಇನ್ನು ಆಸ್ಪತ್ರೆಗೆ 56 ಗಾಯಾಳುಗಳು ದಾಖಲಾಗಿದ್ದು, 46 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 10 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಮಾಹಿತಿ ನೀಡಿದರು.

26
Image Credit : Asianet News

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹಾಗೂ ಡಿಸಿಪಿಗಳಿಂದ ಮಾಹಿತಿ ಪಡೆದರು. ಬಳಿಕ ಕೆಎಸ್‌ಸಿಎ, ಆರ್‌ಸಿಬಿ ಹಾಗೂ ಬೆಂಗಳೂರು ನಗರ ಪೊಲೀಸರೊಂದಿಗೆ ಸುದೀರ್ಘ ಸಭೆ ನಡೆಸಿ, ಚರ್ಚಿಸಿದರು.

Related Articles

Related image1
RCB Stampede Tragedy: ಅಲ್ಲು ಅರ್ಜುನ್‌ಗೆ ಜೈಲಿಗೆ ಕಳಿಸಿದ್ರಿ, ಈಗ ನೀವೇ ಜೈಲಿಗೆ ಹೋಗಿ ಎಂದ ಸಿಟಿ ರವಿ
Related image2
Bengaluru Stampede Case: ಸಿಎಂ ಡಿಸಿಎಂ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಗೆ ಸ್ನೇಹಮಯಿ ಕೃಷ್ಣ ದೂರು!
36
Image Credit : Asianet News

ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ ಅವರು, ಸಿಎಂ ಅವರು ಮೆಜಿಸ್ಟ್ರಿಯಲ್ ವಿಚಾರಣೆಗೆ ಆದೇಶಿಸಿದ್ದು, ಅದರ ಪ್ರಕ್ರಿಯೆ ಆರಂಭವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವ ಸ್ಥಳದಲ್ಲಿ ಕಾಲ್ತುಳಿತ ಆಗಿದೆ. ಅದನ್ನು ಯಾವ ರೀತಿಯಾಗಿ ತಪ್ಪಿಸಬಹುದಾಗಿತ್ತು ಎಂಬುದನ್ನು ತಿಳಿದುಕೊಳ್ಳಲು ಖುದ್ದಾಗಿ ನಾನೇ ಬಂದು ಪರಿಶೀಲಿಸಿದ್ದೇನೆ ಎಂದರು.

46
Image Credit : Asianet News

ಗೇಟ್ ನಂಬರ್ 6, 7, 2 ಮತ್ತು 2ಎ, 17, 18, 21, 16 ಇಷ್ಟು ಗೇಟ್‌ಗಳಲ್ಲಿ ಕಾಲ್ತುಳಿತ ಆಗಿದೆ. ಘಟನೆ ನಡೆದ ಸ್ಥಳದಲ್ಲಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಇಲ್ಲ. ಆಸ್ಪತ್ರೆಗೆ ಕರೆದೊಯ್ಯುವಾಗ, ಚಿಕಿತ್ಸೆ ವೇಳೆ ಕೆಲವರು ಮೃತಪಟ್ಟಿದ್ದಾರೆ. ಹೀಗಾಗಿ ಯಾವ ಗೇಟ್‌ನಲ್ಲಿ ಎಷ್ಟು ಜನ ಸಾವನ್ನಪ್ಪಿದರು ಎಂಬ ಮಾಹಿತಿ ಇಲ್ಲ ಎಂದು ತಿಳಿಸಿದರು.

56
Image Credit : Asianet News

ವಿಧಾನಸೌಧದ ಮುಂದೆ ಒಂದು ಲಕ್ಷ ಜನ ಸೇರುತ್ತಾರೆ ಎಂದು ಅಂದಾಜಿಸಲಾಗಿತ್ತು. ಸ್ಟೇಡಿಯಂನಲ್ಲಿ 40 ಸಾವಿರ ಮತ್ತು ಸ್ಟೇಡಿಯಂ ಹೊರಗಡೆ 2.50 ಲಕ್ಷ ಜನ ಸೇರಿದ್ದರು ಎಂಬುದಾಗಿ ಅಂದಾಜಿಸಲಾಗಿದೆ. ಮೆಟ್ರೋ ಸಂಸ್ಥೆಯವರು ಹೇಳುವ ಪ್ರಕಾರ 8.7 ಲಕ್ಷ ಜನ ಪ್ರಯಾಣಿಸಿದ್ದಾರೆ. ಇಷ್ಟೊಂದು ಜನ ಒಂದೇ ಕಡೆ ಸೇರಿದ್ದರ ಉದಾಹರಣೆಗಳಿಲ್ಲ. ದುರ್ದೈವದಿಂದ ಈರೀತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

66
Image Credit : Asianet News

ದುರ್ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. 46 ಜನ ಚಿಕಿತ್ಸೆ ಪಡೆದು ಮನೆಗಳಿಗೆ ಹೋಗಿದ್ದಾರೆ. 10 ಜನ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಆರ್‌ಸಿಬಿ
ಬೆಂಗಳೂರು
ಕಾಲ್ತುಳಿತ
ಎಂ ಚಿನ್ನಸ್ವಾಮಿ ಕ್ರೀಡಾಂಗಣ
ಜಿ. ಪರಮೇಶ್ವರ್

Latest Videos
Recommended Stories
Recommended image1
Phone Tapping: ದೇವರಾಣೆ ಮಾಡಿ, ಡಿಕೆಶಿ ಫೋನ್ ಟ್ಯಾಪ್ ಮಾಡಿಲ್ಲವ? ಸಿಎಂಗೆ ಚಲವಾದಿ ಸವಾಲು, ಕಲಬುರಗಿ ಪ್ರಬುದ್ಧರ ಮೇಲೂ ವಾಗ್ದಾಳಿ!
Recommended image2
ಫೋನ್ ಟ್ಯಾಪಿಂಗ್ ವಿವಾದ: ಅಂದಿನ ಸಿಎಂ ರಾಮಕೃಷ್ಣ ಹೆಗಡೆ ರಾಜೀನಾಮೆಯನ್ನು ಹೆಚ್‌ಡಿಕೆಗೆ ನೆನಪಿಸಿದ ಪೊನ್ನಣ್ಣ
Recommended image3
Phone Tapping: ಡಿಕೆಶಿ ಮೇಲೆ ಕಣ್ಣಿಟ್ಟಿಲ್ಲ, ಇದೆಲ್ಲಾ ವಿಪಕ್ಷಗಳ ಹತಾಶೆಯ ಹೇಳಿಕೆ - ಸಿದ್ದರಾಮಯ್ಯ ಗರಂ
Related Stories
Recommended image1
RCB Stampede Tragedy: ಅಲ್ಲು ಅರ್ಜುನ್‌ಗೆ ಜೈಲಿಗೆ ಕಳಿಸಿದ್ರಿ, ಈಗ ನೀವೇ ಜೈಲಿಗೆ ಹೋಗಿ ಎಂದ ಸಿಟಿ ರವಿ
Recommended image2
Bengaluru Stampede Case: ಸಿಎಂ ಡಿಸಿಎಂ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಗೆ ಸ್ನೇಹಮಯಿ ಕೃಷ್ಣ ದೂರು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved