ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಕರ್ನಾಟಕದ ಈ ರೇಲ್ವೆ ನಿಲ್ದಾಣ: ಇದು ಕನ್ನಡಿಗರ ಹೆಮ್ಮೆ
ಇತ್ತೀಚೆಗಷ್ಟೇ ವಾಣಿಜ್ಯನಗರಿ ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಹೂಬಳ್ಳಿಯ ಸಿದ್ದಾರೂಢ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡಲಾಗಿತ್ತು. ಇದೀಗ ಹುಬ್ಬಳಿಯ ರೇಲ್ವೆ ನಿಲ್ದಾಣ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ಇದು ಕನ್ನಡಿಗರಿಗೆ ಹೆಮ್ಮೆ ತಂದಿದೆ.
ಹೂಬಳ್ಳಿಯ ಸಿದ್ದಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ.
ಸ್ವಚ್ಛತೆ ಹಾಗೂ ಆಧುನಿಕ ವ್ಯವಸ್ಥೆಗಳ ಜೊತೆಗೆ ಬಣ್ಣ ಬಣ್ಣದ ದೀಪಾಲಂಕಾರದಿಂದ ಝಗಮಗಿಸುತ್ತಿದೆ.
ರಾಜ್ಯದ ಹುಬ್ಬಳ್ಳಿ ರೈಲು ನಿಲ್ದಾಣವನ್ನು ಕೇಂದ್ರ ಸಚಿವ ಪಿಯೂಶ್ ಗೋಯಲ್ ಫುಲ್ ಫಿದಾ ಆಗಿದ್ದಾರೆ.
ರಾಜ್ಯದ ಹುಬ್ಬಳ್ಳಿ ರೈಲು ನಿಲ್ದಾಣದ ಬಗ್ಗೆ, ಕೇಂದ್ರ ಸಚಿವ ಪಿಯೂಶ್ ಗೋಯಲ್ ಟ್ವೀಟ್ ಮೂಲಕ ಗುಣಗಾನ ಮಾಡಿದ್ದಾರೆ.
ರೇಲ್ವೆ ನಿಲ್ದಾಣವನ್ನ ನವೀಕರಿಸಲಾಗಿದ್ದು, ಆಧುನಿಕ ವ್ಯವಸ್ಥೆಗಳನ್ನ ಮಾಡಲಾಗಿದೆ. ಜೊತೆಗೆ ವಿಶೇಷ ಲೈಟಿಂಗ್ ವ್ಯವಸ್ಥೆಯಿಂದ ಕಂಗೊಳಿಸುತ್ತಿದೆ. ಈ ಮೂಲಕ ಹುಬ್ಬಳ್ಳಿ ರೇಲ್ವೆ ನಿಲ್ದಾಣ ಪ್ರಯಾಣಿಕರಿಗೆ ಆಹ್ಲಾದಕರ ಅನುಭವ ನೀಡುತ್ತಿದೆ. ಮೂಲಸೌಕರ್ಯ ಹೆಚ್ಚಳ ಮತ್ತು ಹೊಸ ಪ್ರಯಾಣಿಕ-ಸ್ನೇಹಿ ಸೌಲಭ್ಯಗಳು ಈ ನಿಲ್ದಾಣವನ್ನು ಭಿನ್ನವಾಗಿ ನಿಲ್ಲುವಂತೆ ಮಾಡಿದೆ ಎಂದು ಗೋಯಲ್ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ವಾಣಿಜ್ಯನಗರಿ ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಹೂಬಳ್ಳಿಯ ಸಿದ್ದಾರೂಢ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡಲಾಗಿತ್ತು.