MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ!

ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ!

ಮೈಸೂರಿನಿಂದ ಬೆಂಗಳೂರಿಗೆ ಹೊರಟಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚನ್ನಪಟ್ಟಣದ ಬಳಿ ಸಂಭವಿಸಿದ ಈ ಘಟನೆಯಲ್ಲಿ ರೈಲ್ವೆ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ.

1 Min read
Sathish Kumar KH
Published : Jul 03 2025, 03:54 PM IST| Updated : Jul 03 2025, 04:03 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ರಾಮನಗರ (ಜು.03): ಮೈಸೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡ ಘಟನೆ ಚನ್ನಪಟ್ಟಣ ತಾಲ್ಲೂಕಿನ ವಂದಾರಗುಪ್ಪೆ ಬಳಿ ಸಂಭವಿಸಿದೆ.

26
Image Credit : Asianet News

ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿಯು ಕೆಲಕಾಲ ಆತಂಕದ ವಾತಾವರಣವನ್ನು ಉಂಟುಮಾಡಿದ್ದರೂ, ರೈಲ್ವೆ ಸಿಬ್ಬಂದಿಯ ಚಾಣಾಕ್ಷ ಕ್ರಮದಿಂದ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

Related Articles

Related image1
ಇಲ್ಲಿ ಏಕಕಾಲದಲ್ಲಿ 2 ಜಿಲ್ಲೆಗಳಲ್ಲಿ ನಿಲುಗಡೆಯಾಗುತ್ತೆ ರೈಲು: ಭಾರತೀಯ ರೈಲ್ವೆಯ ವಿಶೇಷ ನಿಲ್ದಾಣ
Related image2
ಇಂದಿನಿಂದ ಎಸಿ, ಸ್ಲೀಪರ್‌ ರೈಲು ಟಿಕೆಟ್ ದುಬಾರಿ
36
Image Credit : Asianet News

ಘಟನೆ ವಿವರ:

ಮೈಸೂರಿನಿಂದ ಉದಯ್‌ಪುರ್ ಕಡೆಗೆ ಹೊರಟಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲು ಚನ್ನಪಟ್ಟಣ ಬಳಿಯ ವಂದಾರಗುಪ್ಪೆ ಹತ್ತಿರದಿಂದ ಚಲಿಸುತ್ತಿದ್ದಾಗ, ಆಕಸ್ಮಿಕವಾಗಿ ಇಂಜಿನ್‌ನಲ್ಲಿಂದ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡವು.

46
Image Credit : Asianet News

ಈ ತಕ್ಷಣದ ಬೆಂಕಿ ಲಕ್ಷಣಗಳನ್ನು ಗಮನಿಸಿದ ರೈಲ್ವೆ ಸಿಬ್ಬಂದಿ ತಕ್ಷಣವೇ ರೈಲನ್ನು ನಿಲ್ಲಿಸಿ ಅತಿದೊಡ್ಡ ಅಪಾಯ ತಪ್ಪಿಸಿದರು. ಈ ಘಟನೆ ಬಗ್ಗೆ ತಕ್ಷಣವೇ ಚನ್ನಪಟ್ಟಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಅವರು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

56
Image Credit : Asianet News

ಈ ಅವಘಡದ ಬಳಿಕ ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಅಲ್ಲಿಯೇ ನಿಂತಿತ್ತು. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಹೆಚ್ಚಿನ ಭೀತಿ ಉಂಟಾಗದಂತೆ ಸಿಬ್ಬಂದಿ ಸಮರ್ಪಕ ರೀತಿಯಲ್ಲಿ ನಿರ್ವಹಿಸಿದ್ದಾರೆ.

66
Image Credit : Asianet News

ರೈಲ್ವೆ ಇಲಾಖೆಯವರು ತಕ್ಷಣವೇ ಬದಲಿ ಇಂಜಿನ್ ಒದಗಿಸಿ ರೈಲನ್ನು ಮುಂದಿನ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಚನ್ನಪಟ್ಟಣ ರೈಲ್ವೆ ಠಾಣೆಯ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಘಟನೆ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ರಾಮನಗರ
ರೈಲು
ಭಾರತೀಯ ರೈಲ್ವೆ
ಅಗ್ನಿ ಅವಘಡ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved