MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • IAS Officer Mahantesh Bilagi: ಬಡ ಮಕ್ಕಳಗಾಗಿ ಮಹಾಂತೇಶ್ ಬೀಳಗಿ ಕಂಡಿದ್ರು ಮಹತ್ವದ ಕನಸು

IAS Officer Mahantesh Bilagi: ಬಡ ಮಕ್ಕಳಗಾಗಿ ಮಹಾಂತೇಶ್ ಬೀಳಗಿ ಕಂಡಿದ್ರು ಮಹತ್ವದ ಕನಸು

ಜನಪ್ರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಬಡತನದಿಂದ ಬಂದಿದ್ದ ಮಹಾಂತೇಶ್ ಬೀಳಗಿ ಅವರ ಈ ಕನಸು ನನಸಾಗುವ ಮುನ್ನವೇ ಇಹಲೋಕ ತ್ಯಜಿಸಿದ್ದು, ಅವರ ವ್ಯಕ್ತಿತ್ವವನ್ನು ಸಹೋದ್ಯೋಗಿಗಳು ಸ್ಮರಿಸಿದ್ದಾರೆ.

1 Min read
Mahmad Rafik
Published : Nov 27 2025, 10:00 AM IST
Share this Photo Gallery
  • FB
  • TW
  • Linkdin
  • Whatsapp
15
ಮಹಾಂತೇಶ್ ಬೀಳಗಿ ಕನಸು
Image Credit : Asianet News

ಮಹಾಂತೇಶ್ ಬೀಳಗಿ ಕನಸು

ಕಾರ್ ಅಪಘಾತದಲ್ಲಿ ಮೃತರಾದ ಕರ್ನಾಟಕದ ಜನಪ್ರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಬಡ ಮಕ್ಕಳಿಗಾಗಿಯೇ ಮಹತ್ವದ ಕನಸು ಕಂಡಿದ್ದರು. ಆ ಕನಸು ಈಡೇರುವ ಮುನ್ನವೇ ಮಹಾಂತೇಶ್ ಬೀಳಗಿ ಮೃತರಾಗಿದ್ದಾರೆ. ಮಹಾಂತೇಶ್ ಬೀಳಗಿ ಅವರ ಅಂತಿಮ ದರ್ಶನ ಪಡೆದ ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನಕಿ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

25
ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನ
Image Credit : Asianet News

ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನ

ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನಕಿ ಮಾತನಾಡಿ, ಕೊನೆಯದಾಗಿ ಅವರ ತಾಯಿ ತೀರಿಕೊಂಡಾಗ ಬಂದು ಮಾತಾಡಿದ್ದೆ. ತಾಯಿಯನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದರು. ರೊಟ್ಟಿ ಮಾರಿ ತಾಯಿ ನನ್ನನ್ನು ಓದಿಸಿದ್ದರು ಅಂತ ಹೇಳುತ್ತಿದ್ದರು. ಅದೆಲ್ಲವನ್ನೂ ನೋಡಿ ಐಎಎಸ್ ಅಧಿಕಾರಿ ಆಗಬೇಕು ಅಂದುಕೊಂಡು ಬಂದವರು ಎಂದು ಭಾವುಕರಾದು.

Related Articles

Related image1
ಅಮ್ಮನ ಮಡಿಲು ಸೇರದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ; ಅಪಘಾತದ ಕಾರಣ ಕುಟುಂಬಸ್ಥರಿಂದ ಅಗ್ನಿಸ್ಪರ್ಶ!
Related image2
ತಾಯಿಗಾಗಿಯೇ ಐಎಎಸ್ ಅಧಿಕಾರಿಯಾದ ಮಗ: ತಾಯಿ ಸಮಾಧಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ!
35
ಕೋಚಿಂಗ್ ಸೆಂಟರ್ ಆರಂಭಿಸುವ ಕನಸು
Image Credit : Asianet News

ಕೋಚಿಂಗ್ ಸೆಂಟರ್ ಆರಂಭಿಸುವ ಕನಸು

ಬಡತನವನ್ನು ಮೆಟ್ಟಿ ನಿಲ್ಲಲು ಏಕೈಕ ಮಾರ್ಗವೆಂದರೆ ಓದುವುದು, ಆ ಮೂಲಕ ಉನ್ನತ ಹುದ್ದೆ ಪಡೆಯುವುದು ಎಂಬುದು ಅವರ ನಿಲುವಾಗಿತ್ತು. ಧಾರವಾಡದಲ್ಲಿ ಬಡ ಮಕ್ಕಳಿಗೆ ಅನುಕೂಲವಾಗಲು ಕೋಚಿಂಗ್ ಸೆಂಟರ್ ತೆರೆಯಲು ನಿರ್ಧರಿಸಿದ್ದರು ಎಂದರು.

45
ಮಾರ್ಗದರ್ಶನ
Image Credit : Asianet News

ಮಾರ್ಗದರ್ಶನ

ಮಹಾಂತೇಶ ಅವರ ಸ್ನೇಹಿತ ಹಿರಿಯ ಐಎಎಸ್ ಅಧಿಕಾರಿ ಶಿವಾನಂದ ಕಾಪಶಿ ಮಾತನಾಡಿ, ಘಟನೆ ನಿಜಕ್ಕೂ ನಂಬಲು ಆಗುತ್ತಿಲ್ಲ. ಸಾವಿನ ಸುದ್ದಿ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅವರಲ್ಲಿದ್ದ ಜೀವನೋತ್ಸಾಹ ಯಾರಲ್ಲಿಯೂ ಕಾಣಲು ಸಾಧ್ಯವಿಲ್ಲ. ಅಪರೂಪದ ವ್ಯಕ್ತಿತ್ವ. ಅಪ್ಪಟ ಬಸವತತ್ವ ನಿಷ್ಠರು, ಉತ್ತಮ ವಾಗ್ಮಿಗಳು, ಯುವಕರಿಗೆ ಸ್ಫೂರ್ತಿದಾಯಕವಾಗಿದ್ದರು. ಕೆಎಎಸ್, ಐಎಎಸ್ ಆಕಾಂಕ್ಷಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದರು ಎಂದು ಸ್ಮರಿಸಿದರು.

ಇದನ್ನೂ ಓದಿ: 25 ರೂಪಾಯಿ ಪಿಂಚಣಿಗೆ 100 ರೂ. ಲಂಚ ಕೊಟ್ಟಿದ್ರು ಮಹಾಂತೇಶ್ ಬೀಳಗಿಯವರ ತಾಯಿ

55
ಹುಟ್ಟೂರಿನಲ್ಲಿ ಅಂತ್ಯಕ್ರಿಯೆ
Image Credit : Asianet News

ಹುಟ್ಟೂರಿನಲ್ಲಿ ಅಂತ್ಯಕ್ರಿಯೆ

ಮಹಾಂತೇಶ ಬೀಳಗಿ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಾದ ಜಿಲ್ಲೆಯ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬುಧವಾರ ನೆರವೇರಿಸಲಾಯಿತು.

ಇದನ್ನೂ ಓದಿ: ಮಹಾಂತೇಶ್ ಬೀಳಗಿ ಸಾವು; ಚಾಲಕ ಆಂಥೋನಿ ರಾಜ ವಿರುದ್ಧ FIR ದಾಖಲು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕರ್ನಾಟಕ ಸುದ್ದಿ
ಐಎಎಸ್
ಅಪಘಾತ
Latest Videos
Recommended Stories
Recommended image1
ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಭಾಗಿ: ತೆಂಗಿನ ಕಾಯಿ ಅರ್ಪಣೆ
Recommended image2
ಡಿಕೆಶಿ-ಖರ್ಗೆ ಕಾರಿನಲ್ಲಿ ಓಡಾಡುವುದರಿಂದ ಸಿದ್ದರಾಮಯ್ಯ ಡಲ್ ಆಗಿದ್ದಾರೆ: ಆರ್.ಅಶೋಕ್‌ ವಾಗ್ದಾಳಿ
Recommended image3
ಶಾಸಕರನ್ನು ಖರೀದಿ ಮಾಡುವ ಚಾಳಿ ಬಿಜೆಪಿಯವರಿಗಿದೆ: ಸಚಿವ ಈಶ್ವರ್ ಖಂಡ್ರೆ
Related Stories
Recommended image1
ಅಮ್ಮನ ಮಡಿಲು ಸೇರದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ; ಅಪಘಾತದ ಕಾರಣ ಕುಟುಂಬಸ್ಥರಿಂದ ಅಗ್ನಿಸ್ಪರ್ಶ!
Recommended image2
ತಾಯಿಗಾಗಿಯೇ ಐಎಎಸ್ ಅಧಿಕಾರಿಯಾದ ಮಗ: ತಾಯಿ ಸಮಾಧಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved