ಕುಟುಂಬ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದ ಅಣ್ಣಾಮಲೈ
ಮಾಜಿ ಪೊಲೀಸ್ ಅಧಿಕಾರಿ ಮತ್ತು ಈಗಿನ ಭಾರತೀಯ ಜನತಾ ಪಕ್ಷದ ತಮಿಳುನಾಡು ರಾಜ್ಯ ಘಟಕದ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.

ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಆಗಮಿಸಿದ ಬಿಜೆಪಿ ಮುಖಂಡ ಅಣ್ಣಾಮಲೈ ರಾಯರ ದರ್ಶನ, ಬೃಂದಾವನಕ್ಕೆ ತೆರಳಿ ದರ್ಶನ ಪಡೆದರು.
ಲೋಕಸಭಾ ಚುನಾವಣೆ ಪ್ರಚಾರ, ಸಭೆ, ಸಮಾರಂಭಗಳ ಜಂಜಾಟದಿಂದ ಕುಟುಂಬದವರೊಂದಿಗೆ ಬೆರೆಯಲು ಆಗಿರಲಿಲ್ಲ ಚುನಾವಣೆ ಮತದಾನ ಬಹುತೇಕ ಮುಗಿದಿದ್ದು ಇದೀಗ ಕುಟುಂಬದೊಂದಿಗೆ ರಾಯರ ದರ್ಶನ ಪಡೆದು.ನಿರಾಳರಾಗಿದ್ದಾರೆ.
ಗುರುರಾಯರ ದರ್ಶನ ಬಳಿಕ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರನ್ನು ಭೇಟಿ ಮಾಡಿ ಅಶೀರ್ವಾದ ಪಡೆದರು. ಕೆಲಹೊತ್ತು ಮಾತುಕತೆ ನಡೆಸಿರು.
ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ತಮಿಳನಾಡಿನಲ್ಲಿಯೂ ಸಹ ಅಣ್ಣಾಮಲೈ ನೇತೃತ್ವದ ಬಿಜೆಪಿ ಪಕ್ಷ ವಿಜಯ ಸಾಧಿಸಲಿದೆ ಎಲ್ಲ ಅಡೆತಡೆಗಳ ನಿವಾರಣೆಗೆ ಕುಟುಂಬ ಸಮೇತರಾಗಿ ಗುರುರಾಯರ ದರ್ಶನ ಮಾಡಿರುವ ಅಣ್ಣಾಮಲೈ
ಶ್ರೀಗಳ ಭೇಟಿ ಬಳಿಕ ಅಣ್ಣಾಮಲೈ ಅವರಿಗೆ ಮಠದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ಗುರುರಾಯರ ದರ್ಶನ, ಶ್ರೀಗಳ ಆಶೀರ್ವಾದ ಪಡೆದ ಕುಟುಂಬಸ್ಥರು ಪುನೀತರಾದರು. ಈ ವೇಳೆ ಮಠಕ್ಕೆ ಆಗಮಿಸಿದ್ದ ಭಕ್ತರು ಅಣ್ಣಾಮಲೈ ಬಂದಿದ್ದನ್ನು ಕಂಡು ನೋಡಲು ದುಂಬಾಲು ಬಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ