MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಕಲಬುರಗಿ: ಕನ್ನಡ ತೆಗೆದು ಉರ್ದು ನಾಮಫಲಕ, ಅಧಿಕಾರಿಗಳ ಮುಖಕ್ಕೆ ಮಸಿ ಬಳಿದ ಕರವೇ

ಕಲಬುರಗಿ: ಕನ್ನಡ ತೆಗೆದು ಉರ್ದು ನಾಮಫಲಕ, ಅಧಿಕಾರಿಗಳ ಮುಖಕ್ಕೆ ಮಸಿ ಬಳಿದ ಕರವೇ

ಕನ್ನಡ ಭಾಷೆಗೆ ಅವಮಾನ ಮಾಡಿರುವುದನ್ನ ಖಂಡಿಸಿ ಕರವೇ ಕಾರ್ಯಕರ್ತರು ಅಧಿಕಾರಿಗಳ ಮುಖಕ್ಕೆ ಮಸಿ ಬಳಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

1 Min read
Ravi Janekal
Published : Sep 18 2025, 08:37 PM IST
Share this Photo Gallery
  • FB
  • TW
  • Linkdin
  • Whatsapp
13
ಕಲಬುರಗಿಯಲ್ಲಿ ಕನ್ನಡಕ್ಕೆ ಅವಮಾನ
Image Credit : Asianet News

ಕಲಬುರಗಿಯಲ್ಲಿ ಕನ್ನಡಕ್ಕೆ ಅವಮಾನ

ಕಲಬುರಗಿ ಜಿಲ್ಲೆಯ ಎಂ.ಎಸ್.ಕೆ. ಮಿಲ್ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ನೂತನ ತರಕಾರಿ ಮಾರುಕಟ್ಟೆ ಕಟ್ಟಡದ ಕನ್ನಡ ನಾಮಫಲಕವನ್ನು ತೆರವುಗೊಳಿಸಿ ಉರ್ದು ನಾಮಫಲಕ ಹಾಕಿದ್ದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

23
ಅಧಿಕಾರಿಗಳಿಗೆ ಮಸಿ ಬಳಿದ ಕರವೇ ಕಾರ್ಯಕರ್ತರು
Image Credit : Asianet News

ಅಧಿಕಾರಿಗಳಿಗೆ ಮಸಿ ಬಳಿದ ಕರವೇ ಕಾರ್ಯಕರ್ತರು

ಈ ಘಟನೆಯಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಎಸ್. ಮಾಳಗಿ ಮತ್ತು PWD ಮುಖ್ಯ ಎಂಜಿನಿಯರ್ ಅಮಿನ್ ಮುಕ್ತಾರ್ ಅವರ ಮುಖಕ್ಕೆ ಕರವೇ ಕಾರ್ಯಕರ್ತರು ಮಸಿ ಬಳಿದ ಘಟನೆ ನಡೆಯಿತು. ನಾರಾಯಣ ಗೌಡ ಬಣದ ಕರವೇ ಕಾರ್ಯಕರ್ತರು, ಕನ್ನಡ ಭಾಷೆಗೆ ಅವಮಾನ ಮಾಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಕನ್ನಡ ನಾಮಫಲಕವನ್ನು ತೆರವುಗೊಳಿಸಿ ಉರ್ದು ಫಲಕ ಹಾಕಿರುವುದು ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ. ಕೂಡಲೇ ಕನ್ನಡ ನಾಮಫಲಕವನ್ನು ಮರಳಿ ಅಳವಡಿಸಬೇಕು," ಎಂದು ಕರವೇ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Related Articles

Related image1
ಕನ್ನಡ ಕವಿಗಳ ನಾಮಫಲಕ ಬಡಾವಣೆಯ ರಸ್ತೆಗಳಿಗೆ ಅಳವಡಿಸಲು ಸ್ಥಳೀಯರ ವಿರೋಧ
Related image2
ನಾಮಫಲಕದಲ್ಲಿ ಕನ್ನಡ ಕಟ್ಟುನಿಟ್ಟಿನ ಅನುಷ್ಠಾನವಾಗಬೇಕು: ಬಳಿಮಲೆ
33
ಕರವೇ ಎಚ್ಚರಿಕೆ
Image Credit : Asianet News

ಕರವೇ ಎಚ್ಚರಿಕೆ

ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಯ್ತು. ಕನ್ನಡ ನಾಮಫಲಕವನ್ನು ಮರಳಿ ಅಳವಡಿಸುವವರೆಗೆ ಪ್ರತಿಭಟನೆ ಮುಂದುವರಿಯುವುದಾಗಿ ಕರವೇ ಎಚ್ಚರಿಕೆ ನೀಡಿದೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಕಲಬುರಗಿ
ಕನ್ನಡ
ಕನ್ನಡಿಗ
ಪ್ರತಿಭಟನೆ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved