ಬೆಳಗಾವಿ ಲಾರಿಗಳ ಭೀಕರ ಅಪಘಾತಕ್ಕೆ ಬಲಿಯಾದ ಹೆದ್ದಾರಿ! ಕರ್ನಾಟಕ- ಗೋವಾ ಸಂಚಾರ ಸ್ಥಗಿತ
ಬೆಳಗಾವಿ (ಆ.31): ರಾಜ್ಯದ ಗಡಿಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಕರ್ನಾಟಕದಿಂದ ಗೋವಾಗೆ ಸಂಪರ್ಕ ಕಲ್ಪಿಸಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಲಾರಿಗಳು ಇಡೀ ರಸ್ತೆಗೆ ಅಡ್ಡಾದಿಡ್ಡಿಯಾಗಿ ನಿಂತಿದ್ದು ಕರ್ನಾಟಕ-ಗೋವಾ ರಸ್ತೆಯ ಸಂಪರ್ಕ ಕಡಿತವಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಲಾರಿಗಳ ನಡುವೆ ಢಿಕ್ಕಿಯಾಗಿ ಭಾರಿ ಧುರ್ಘಟನೆ ಸಂಭವಿಸಿದೆ. ಈ ಘಟನೆಯಿಂದ ಲಾರಿಗಳ ಮುಂಭಾಗ ಭರ್ಜರಿ ನಜ್ಜುಗುಜ್ಜಾಗಿದೆ.
ಭೀಕರ ಅಪಘಾತದ ನಡುವೆಯೂ ಎರಡೂ ಲಾರಿಗಳ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿಯ ಲಾರಿಯ ಇಬ್ಬರು ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಜಾಂಬೋಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.
ಎರಡು ಬೃಹತ್ ಲಾರಿಗಳು (Loaded Trucks) ವೇಗವಾಗಿ ಬಂದು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ. ಇದರಿಂದ ಇಡೀ ರಸ್ತೆಯ ಭಾಗದಲ್ಲಿ ಲಾರಿಗಳು ಅಡ್ಡಲಾಗಿ ನಿಂತುಕೊಂಡಿದ್ದು, ಯಾವುದೇ ವಾಹನಗಳು ಸಂಚಾರ ಮಾಡಲು ಅವಕಾಶ ಇಲ್ಲದಂತಾಗಿದೆ.
ಘಟನಾ ಸ್ಥಳಕ್ಕೆ ಖಾನಾಪುರ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಉಭಯ ರಾಜ್ಯಗಳ ಮಧ್ಯೆ ಸಂಚಾರ ಸ್ಥಗಿತಗೊಂಡಿದೆ. ಪೊಲೀಸರು ಲಾರಿಗಳ ತೆರವು ಕಾರ್ಯಾಚರಣೆಗೆ ಹರಸಾಹಸ ಪಡುತ್ತಿದ್ದಾರೆ.
ಇನ್ನು ಲಾರಿ ಅಪಘಾತದ ನಂತರ ರಸ್ತೆಯಲ್ಲಿ ಮಂಜು ಕವಿದ ವಾತಾವರಣದಲ್ಲಿ ಸರಣಿ ಅಪಘಾತ ಆಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಲಾರಿಗಳನ್ನು ತೆರವು ಮಾಡಲು ಕ್ರೇನ್ ಮತ್ತು ಜೆಸಿಬಿಗಳ ಅಗತ್ಯವಿದ್ದು, ಅವುಗಳು ಬರಲು ಕೂಡ ಜಾಗ ಇಲ್ಲದಂತಾಗಿದೆ.
ಇನ್ನು ಬೆಳಗಾವಿಯ ಕಣಕುಂಬಿ ಬಳಿ ನಡೆದ ಅಪಘಾತದಿಂದ ರಸ್ಎ ಬ್ಲಾಕ್ ಆಗಿದ್ದು, ಸದ್ಯಕ್ಕೆ ಕರ್ನಾಟಕ-ಗೋವಾ ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. ಇದರಿಂದ ಹಲವು ಕಿಲೋಮೀಟರ್ಗಟ್ಟಲೆ ಟ್ರಾಫಿಕ್ಜಾಮ್ ನಿರ್ಮಾಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ