MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ನೂತನ ಸಿಎಂ ಪ್ರಮಾಣವಚನಕ್ಕೆ ಸ್ಥಳ ಫಿಕ್ಸ್, ಆರ್‌ಸಿಬಿ ನೆನಪಿಟ್ಟುಕೊಂಡು ಎಚ್ಚೆತ್ತ ಅಧಿಕಾರಿ ವರ್ಗ

ನೂತನ ಸಿಎಂ ಪ್ರಮಾಣವಚನಕ್ಕೆ ಸ್ಥಳ ಫಿಕ್ಸ್, ಆರ್‌ಸಿಬಿ ನೆನಪಿಟ್ಟುಕೊಂಡು ಎಚ್ಚೆತ್ತ ಅಧಿಕಾರಿ ವರ್ಗ

ರಾಜ್ಯ ರಾಜಕಾರಣದಲ್ಲಿ ಎದ್ದ ಬಿರುಗಾಳಿ ಒಂದು ಹಂತಕ್ಕೆ ತಣ್ಣಗಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇದರ ಬೆನ್ನಲ್ಲೇ ನೂತನ ಸಿಎಂ ಪ್ರಮಾಣವಚನಕ್ಕೆ ಸ್ಥಳ ನಿಗಧಿಯಾಗಿದೆ. 

1 Min read
Author : Chethan Kumar
Published : May 29 2026, 07:20 PM IST
Share this Photo Gallery
  • FB
  • TW
  • Linkdin
  • Whatsapp
16
ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ
Image Credit : Asianet News

ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ಕೊನೆಗೂ ಉತ್ತರ ಸಿಗುತ್ತಿದೆ. ಈಗಾಗಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ನಾಳೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಪ್ರಮಾಣವಚನ ಕಾರ್ಯಕ್ರಮಕ್ಕೆ ಸ್ಥಳ ನಿಗದಿ
Image Credit : Asianet News

ಪ್ರಮಾಣವಚನ ಕಾರ್ಯಕ್ರಮಕ್ಕೆ ಸ್ಥಳ ನಿಗದಿ

ಕರ್ನಾಟಕದ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಸ್ಥಳ ನಗಿದಿಯಾಗಿದೆ. ವಿಧಾನಸೌಧದ ಮೆಟ್ಟಿಲು ಮೇಲೆ ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಸ್ಥಳ ನಿಗದಿಯಾಗುತ್ತಿದ್ದಂತೆ ಕಾರ್ಯಕ್ರಮ ಆಯೋಜನೆ ಚಟುವಟಿಕೆ ತೀವ್ರಗೊಂಡಿದೆ.

Related Articles

Related image1
ರಾಮನಗರ ಜಿಲ್ಲೆಯಿಂದ ಮುಖ್ಯಮಂತ್ರಿಯಾಗಲಿರುವ ಐದನೇ ವ್ಯಕ್ತಿ ಡಿಕೆ ಶಿವಕುಮಾರ್‌!
Related image2
EXCLUSIVE: ದೆಹಲಿ ವಿಮಾನದಲ್ಲೇ ಸಚಿವರ ಪಟ್ಟಿ ಸಿದ್ಧಪಡಿಸಿದ ಡಿ.ಕೆ. ಶಿವಕುಮಾರ್! ಹೈಕಮಾಂಡ್‌ಗೆ ನೀಡಲಿರುವ 'ಡಿಕೆಶಿ ಟೀಮ್'ನಲ್ಲಿ ಯಾರಿದ್ದಾರೆ?
36
ಆರ್‌ಸಿಬಿ ದುರಂತದಿಂದ ಎಚ್ಚೆತ್ತ ಅಧಿಕಾರಿ ವರ್ಗ
Image Credit : ANI

ಆರ್‌ಸಿಬಿ ದುರಂತದಿಂದ ಎಚ್ಚೆತ್ತ ಅಧಿಕಾರಿ ವರ್ಗ

ವಿಧಾನಸೌಧ ಮೆಟ್ಟಿಲು ಮೇಲೆ ಪ್ರಮಾಣವಚನ ಕಾರ್ಯಕ್ರಮ ನಿಗಧಿಯಾಗುತ್ತಿದ್ದಂತೆ ಅಧಿಕಾರಿ ವರ್ಗ ಎಚ್ಚೆತ್ತುಕೊಂಡಿದೆ. ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮಕ್ಕೆ ಕಿಕ್ಕಿರಿದು ಜನ ಸೇರಿ ದುರಂತ ಸಂಭವಿಸಿತ್ತು. ಆರಂಭದಲ್ಲಿ ವಿಧಾನಸೌಧ ಮೆಟ್ಟಿಲು ಮೇಲೆ ಕಾರ್ಯಕ್ರಮ ಬಳಿಕ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ನಡೆದಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಈ ದುರಂತದಿಂದ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.

46
ಡಿಸಿಪಿ, ಎಸಿಪಿ ಸೇರಿ ಹಿರಿಯ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
Image Credit : Getty

ಡಿಸಿಪಿ, ಎಸಿಪಿ ಸೇರಿ ಹಿರಿಯ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ವಿಧಾನಸೌಧ ಮೆಟ್ಟಿಲು ಮೇಲೆ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಿರುವ ಕಾರಣ ಸ್ಥಳಕ್ಕೆ ಡಿಸಿಪಿ ಎಸಿಪಿ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೆಚ್ಚಿನ ಜನರು ಆಗಮನ ನಿರೀಕ್ಷೆ ಇರುವುದರಿಂದ ಯಾವುದೇ ಗೊಂದಲ ಆಗದಂತೆ ಎಚ್ಚರಿಕೆ ವಹಿಸಲು ಪ್ಲಾನ್ ಮಾಡಲಾಗುತ್ತಿದೆ.

56
ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚೆ
Image Credit : Asianet News

ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚೆ

ಡಿಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಚರ್ಚಿಸಿದ್ದಾರೆ. ಮತ್ತೊಂದೆಡೆ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಭ್ರಮ ಜೋರಾಗಿದೆ.

66
ಸಿದ್ದರಾಮಯ್ಯ ಆಡಳಿತ ಅಂತ್ಯ
Image Credit : ANI

ಸಿದ್ದರಾಮಯ್ಯ ಆಡಳಿತ ಅಂತ್ಯ

ಕಳೆದ ಕೆಲ ವರ್ಷಗಳಿಂದ ಮುಖ್ಯಮಂತ್ರಿ ಬದಲಾವಣೆ ಕುರಿತು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿತ್ತು. ಇದೀಗ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದೆ. ಸಿದ್ದರಾಮಯ್ಯ ಯುಗ ಅಂತ್ಯವಾಗಿದೆ. ರಾಜ್ಯಸಭೆ ಪ್ರವೇಶ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜ್ಯ ರಾಜಕಾರಣದಲ್ಲೇ ಇರುವುದಾಗಿ ಹೇಳಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಡಿ.ಕೆ. ಶಿವಕುಮಾರ್
ಸಿದ್ದರಾಮಯ್ಯ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ ಕರ್ನಾಟಕಕ್ಕೆ ಎಚ್ಚರಿಕೆ ಕೊಟ್ಟ ಐಎಂಡಿ!
Recommended image2
'ಇದು ಬೊಂಬೆಯಾಟವಯ್ಯ..' ನಿಜವಾಯ್ತು ಬೊಂಬೆ ಭವಿಷ್ಯ! ಸಿಎಂ ಕುರ್ಚಿ ಬದಲಾವಣೆಗೆ ಮುಂಚೆಯೇ ನುಡಿ!
Recommended image3
Karnataka's Yuvan Nidhi: ಯುವ ನಿಧಿ ಅನುದಾನ ಗೃಹಲಕ್ಷ್ಮೀಗೆ ವರ್ಗಾವಣೆ? 3ತಿಂಗಳಿನಿಂದ ಪದವೀಧರರಿಗೆ ತಲುಪದ ನಿರುದ್ಯೋಗ ಭತ್ಯೆ!
Related Stories
Recommended image1
ರಾಮನಗರ ಜಿಲ್ಲೆಯಿಂದ ಮುಖ್ಯಮಂತ್ರಿಯಾಗಲಿರುವ ಐದನೇ ವ್ಯಕ್ತಿ ಡಿಕೆ ಶಿವಕುಮಾರ್‌!
Recommended image2
EXCLUSIVE: ದೆಹಲಿ ವಿಮಾನದಲ್ಲೇ ಸಚಿವರ ಪಟ್ಟಿ ಸಿದ್ಧಪಡಿಸಿದ ಡಿ.ಕೆ. ಶಿವಕುಮಾರ್! ಹೈಕಮಾಂಡ್‌ಗೆ ನೀಡಲಿರುವ 'ಡಿಕೆಶಿ ಟೀಮ್'ನಲ್ಲಿ ಯಾರಿದ್ದಾರೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved